AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?

ಆ.9ರಿಂದ ಕಲರ್ಸ್​ ಕನ್ನಡದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ರಾತ್ರಿ 9.30ಕ್ಕೆ ಹೊಸ ಧಾರಾವಾಹಿ ‘ಲಕ್ಷಣ’ ಹಾಗೂ 10 ಗಂಟೆಗೆ ‘ಕನ್ಯಾಕುಮಾರಿ’ ಪ್ರಸಾರ ಆಗಲಿದೆ. ಅವುಗಳ ಬಗ್ಗೆ ಇಲ್ಲಿದೆ ಮಾಹಿತಿ..

ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?
ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?
TV9 Web
| Edited By: |

Updated on: Aug 07, 2021 | 11:51 AM

Share

ಕನ್ನಡದ ಕಿರುತೆರೆ ಪ್ರೇಕ್ಷಕರಿಗೆ ‘ಬಿಗ್ ಬಾಸ್​ ಕನ್ನಡ ಸೀಸನ್​ 8’​ ಮೋಡಿ ಮಾಡಿದೆ. ಇಷ್ಟು ದಿನ ಪ್ರತಿ ರಾತ್ರಿ 9.30 ಆದ ತಕ್ಷಣ ವೀಕ್ಷಕರನ್ನು ಈ ಕಾರ್ಯಕ್ರಮ ಸೆಳೆದುಕೊಳ್ಳುತ್ತಿತ್ತು. 115ಕ್ಕೂ ಹೆಚ್ಚು ದಿನಗಳ ಕಾಲ ಎಲ್ಲರನ್ನೂ ರಂಜಿಸಿದ ಈ ಶೋ ಆ.8ರಂದು ಮುಕ್ತಾಯ ಆಗುತ್ತಿದೆ. ಇದೇ ಭಾನುವಾರ ಬಿಗ್​ ಬಾಸ್​ ಫಿನಾಲೆ ನಡೆಯಲಿದೆ. ಮಂಜು ಪಾವಗಡ, ವೈಷ್ಣವಿ ಗೌಡ, ಅರವಿಂದ್​ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ ನಡುವೆ ಫಿನಾಲೆಯಲ್ಲಿ ಹಣಾಹಣಿ ನಡೆಯುತ್ತಿದೆ. ಯಾರು ವಿನ್ನರ್​ ಎಂಬುದು ಆ.8ರ ರಾತ್ರಿ ಗೊತ್ತಾಗುತ್ತದೆ. ಅಲ್ಲಿಗೆ ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಜರ್ನಿ ಅಂತ್ಯವಾಗುತ್ತದೆ. ಹಾಗಾದರೆ, ಇನ್ಮುಂದೆ ರಾತ್ರಿ 9.30ಕ್ಕೆ ವೀಕ್ಷಕರಿಗೆ ಮನರಂಜನೆ ಕೊಡೋರು ಯಾರು? ಅದಕ್ಕೀಗ ಉತ್ತರ ಸಿಕ್ಕಿದೆ. ‘ಲಕ್ಷಣ’ ಮತ್ತು ‘ಕನ್ಯಾಕುಮಾರಿ’ ಎಂಬ ಎರಡು ಹೊಸ ಸೀರಿಯಲ್​ಗಳು ಪ್ರಸಾರ ಆರಂಭಿಸಲು ಸಜ್ಜಾಗಿವೆ.

ಬಿಗ್​ ಬಾಸ್​ ಮುಗಿದ ಬಳಿಕ ಕಲರ್ಸ್​ ಕನ್ನಡದಲ್ಲಿ ಪ್ರತಿ ರಾತ್ರಿ 9.30ಕ್ಕೆ ಹೊಸ ಧಾರಾವಾಹಿ ‘ಲಕ್ಷಣ’ ಪ್ರಸಾರ ಆಗಲಿದೆ. ಕಪ್ಪು ಮೈಬಣ್ಣವನ್ನು ಬಹುತೇಕರು ಜರಿಯುತ್ತಾರೆ. ಬಿಳಿ ತ್ವಚೆಯ ಮೇಲೆ ಎಲ್ಲರಿಗೂ ವ್ಯಾಮೋಹ. ಅಂಥ ಕಾನ್ಸೆಪ್ಟ್​​ಗೆ ಸವಾಲೊಡ್ಡುವಂತಹ ಕಥೆಯನ್ನು ‘ಲಕ್ಷಣ’ ಧಾರಾವಾಹಿ ಹೊಂದಿದೆ. ಈ ಸೀರಿಯಲ್​ನ ಪ್ರೋಮೋಗಳು ಈಗಾಗಲೇ ಭಾರಿ ನಿರೀಕ್ಷೆ ಹುಟ್ಟುಹಾಕಿವೆ. ಬಿಗ್​ ಬಾಸ್​ ವೇದಿಕೆಯಲ್ಲಿ ಸುದೀಪ್​ ಕೂಡ ಈ ಧಾರಾವಾಹಿಯ ಬಗ್ಗೆ ಪ್ರಚಾರ ಮಾಡಿದ್ದಾರೆ. ಹಾಗಾಗಿ ಹೈಪ್​ ಸೃಷ್ಟಿ ಆಗಿದೆ.

ಇನ್ನು, ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ರಾತ್ರಿ 10 ಗಂಟೆಗೆ ‘ಕನ್ಯಾಕುಮಾರಿ’ ಎಂಬ ಹೊಸ ಸೀರಿಯಲ್​ ಪ್ರಸಾರಕ್ಕೆ ಅಣಿಯಾಗಿದೆ. ಈ ಧಾರಾವಾಹಿಯ ಕಥೆ ಏನು ಎಂಬುದನ್ನು ತಿಳಿಸುವಂತಹ ಪ್ರೋಮೋಗಳನ್ನು ಈಗಾಗಲೇ ಕಲರ್ಸ್​ ಕಂಡ ವಾಹಿನಿ ಹಂಚಿಕೊಂಡಿದೆ. ಬಡತನದ ಕುಟುಂಬದಲ್ಲಿರುವ ಕಥಾನಾಯಕ ಚರಣ್​ ಒಬ್ಬ ಕ್ಯಾಬ್​ ಚಾಲಕ. ಮನೆ ಚಿಕ್ಕದಾದರೂ ಮನೆಯವರ ಪ್ರೀತಿಗೆ ಕೊರತೆ ಇಲ್ಲ. ಕೆಲಸವನ್ನೇ ದೇವರು ಎಂದು ಆತ ನಂಬಿದ್ದಾನೆ. ಅದೇ ರೀತಿ, ದೇವರಿಗಾಗಿ ಯಾವ ಕೆಲಸ ಬೇಕಾದರೂ ಮಾಡ್ತೀನಿ ಎನ್ನುವ ಹುಡುಗಿ ಕನ್ನಿಕಾ. ಒಂದಿನ ಕಥಾನಾಯಕ ಚರಣ್​ ಕ್ಯಾಬ್​ನಲ್ಲಿ ಕನ್ನಿಕಾ ಕುಳಿತುಕೊಂಡ ಬಳಿಕ ಎಲ್ಲವೂ ಬದಲಾಗಿ ಬಿಡುತ್ತದೆ. ಮುಂದೇನು ಎಂಬುದು ‘ಕನ್ಯಾಕುಮಾರಿ’ ಸೀರಿಯಲ್​ನ ಕಥಾಕೌತುಕ.

ದಿನದಿಂದ ದಿನಕ್ಕೆ ಕಿರುತೆರೆ ಲೋಕ ದೊಡ್ಡದಾಗುತ್ತಿದೆ. ಯಾವ ಸಿನಿಮಾಗೂ ಕಡಿಮೆ ಇಲ್ಲ ಎಂಬಂತೆ ಧಾರಾವಾಹಿಗಳ ತಾಂತ್ರಿಕ ಗುಣಮಟ್ಟ ಹೆಚ್ಚುತ್ತಿದೆ. ಆ ಕಾರಣ ವಾಹಿನಿಗಳ ನಡುವೆ ಭರ್ಜರಿ ಪೈಪೋಟಿ ಕೂಡ ಇದೆ. ಈಗಾಗಲೇ ಪ್ರೇಕ್ಷಕರ ಮನಗೆದ್ದಿರುವ ಇತರೆ ಧಾರಾವಾಹಿಗಳಿಗೆ ‘ಲಕ್ಷಣ’ ಮತ್ತು ‘ಕನ್ಯಾಕುಮಾರಿ’ ಹೇಗೆ ಸ್ಪರ್ಧೆ ನೀಡುತ್ತವೆ ಎಂಬುದನ್ನು ಕಾದುನೋಡಬೇಕು.

ಇದನ್ನೂ ಓದಿ:

‘ನೀವು ಗೆದ್ದು ಬನ್ನಿ’; ಫಿನಾಲೆ ತಲುಪಿದ ಮಂಜುಗೆ ಶಿವರಾಜ್​ಕುಮಾರ್ ವಿಶೇಷ ಹಾರೈಕೆ

ಸಾಮಾಜಿಕ ಸಂದೇಶ ಹೊತ್ತು ಬರುತ್ತಿದ್ದಾರೆ ತನ್ವಿ ರಾವ್; ರಾಧೆ ಶ್ಯಾಮ ಧಾರಾವಾಹಿಯಲ್ಲಿ ಭಿನ್ನ ಪ್ರಯತ್ನ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!