ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?

ಆ.9ರಿಂದ ಕಲರ್ಸ್​ ಕನ್ನಡದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ರಾತ್ರಿ 9.30ಕ್ಕೆ ಹೊಸ ಧಾರಾವಾಹಿ ‘ಲಕ್ಷಣ’ ಹಾಗೂ 10 ಗಂಟೆಗೆ ‘ಕನ್ಯಾಕುಮಾರಿ’ ಪ್ರಸಾರ ಆಗಲಿದೆ. ಅವುಗಳ ಬಗ್ಗೆ ಇಲ್ಲಿದೆ ಮಾಹಿತಿ..

ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?
ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?
Follow us
| Updated By: ಮದನ್​ ಕುಮಾರ್​

Updated on: Aug 07, 2021 | 11:51 AM

ಕನ್ನಡದ ಕಿರುತೆರೆ ಪ್ರೇಕ್ಷಕರಿಗೆ ‘ಬಿಗ್ ಬಾಸ್​ ಕನ್ನಡ ಸೀಸನ್​ 8’​ ಮೋಡಿ ಮಾಡಿದೆ. ಇಷ್ಟು ದಿನ ಪ್ರತಿ ರಾತ್ರಿ 9.30 ಆದ ತಕ್ಷಣ ವೀಕ್ಷಕರನ್ನು ಈ ಕಾರ್ಯಕ್ರಮ ಸೆಳೆದುಕೊಳ್ಳುತ್ತಿತ್ತು. 115ಕ್ಕೂ ಹೆಚ್ಚು ದಿನಗಳ ಕಾಲ ಎಲ್ಲರನ್ನೂ ರಂಜಿಸಿದ ಈ ಶೋ ಆ.8ರಂದು ಮುಕ್ತಾಯ ಆಗುತ್ತಿದೆ. ಇದೇ ಭಾನುವಾರ ಬಿಗ್​ ಬಾಸ್​ ಫಿನಾಲೆ ನಡೆಯಲಿದೆ. ಮಂಜು ಪಾವಗಡ, ವೈಷ್ಣವಿ ಗೌಡ, ಅರವಿಂದ್​ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ ನಡುವೆ ಫಿನಾಲೆಯಲ್ಲಿ ಹಣಾಹಣಿ ನಡೆಯುತ್ತಿದೆ. ಯಾರು ವಿನ್ನರ್​ ಎಂಬುದು ಆ.8ರ ರಾತ್ರಿ ಗೊತ್ತಾಗುತ್ತದೆ. ಅಲ್ಲಿಗೆ ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಜರ್ನಿ ಅಂತ್ಯವಾಗುತ್ತದೆ. ಹಾಗಾದರೆ, ಇನ್ಮುಂದೆ ರಾತ್ರಿ 9.30ಕ್ಕೆ ವೀಕ್ಷಕರಿಗೆ ಮನರಂಜನೆ ಕೊಡೋರು ಯಾರು? ಅದಕ್ಕೀಗ ಉತ್ತರ ಸಿಕ್ಕಿದೆ. ‘ಲಕ್ಷಣ’ ಮತ್ತು ‘ಕನ್ಯಾಕುಮಾರಿ’ ಎಂಬ ಎರಡು ಹೊಸ ಸೀರಿಯಲ್​ಗಳು ಪ್ರಸಾರ ಆರಂಭಿಸಲು ಸಜ್ಜಾಗಿವೆ.

ಬಿಗ್​ ಬಾಸ್​ ಮುಗಿದ ಬಳಿಕ ಕಲರ್ಸ್​ ಕನ್ನಡದಲ್ಲಿ ಪ್ರತಿ ರಾತ್ರಿ 9.30ಕ್ಕೆ ಹೊಸ ಧಾರಾವಾಹಿ ‘ಲಕ್ಷಣ’ ಪ್ರಸಾರ ಆಗಲಿದೆ. ಕಪ್ಪು ಮೈಬಣ್ಣವನ್ನು ಬಹುತೇಕರು ಜರಿಯುತ್ತಾರೆ. ಬಿಳಿ ತ್ವಚೆಯ ಮೇಲೆ ಎಲ್ಲರಿಗೂ ವ್ಯಾಮೋಹ. ಅಂಥ ಕಾನ್ಸೆಪ್ಟ್​​ಗೆ ಸವಾಲೊಡ್ಡುವಂತಹ ಕಥೆಯನ್ನು ‘ಲಕ್ಷಣ’ ಧಾರಾವಾಹಿ ಹೊಂದಿದೆ. ಈ ಸೀರಿಯಲ್​ನ ಪ್ರೋಮೋಗಳು ಈಗಾಗಲೇ ಭಾರಿ ನಿರೀಕ್ಷೆ ಹುಟ್ಟುಹಾಕಿವೆ. ಬಿಗ್​ ಬಾಸ್​ ವೇದಿಕೆಯಲ್ಲಿ ಸುದೀಪ್​ ಕೂಡ ಈ ಧಾರಾವಾಹಿಯ ಬಗ್ಗೆ ಪ್ರಚಾರ ಮಾಡಿದ್ದಾರೆ. ಹಾಗಾಗಿ ಹೈಪ್​ ಸೃಷ್ಟಿ ಆಗಿದೆ.

ಇನ್ನು, ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ರಾತ್ರಿ 10 ಗಂಟೆಗೆ ‘ಕನ್ಯಾಕುಮಾರಿ’ ಎಂಬ ಹೊಸ ಸೀರಿಯಲ್​ ಪ್ರಸಾರಕ್ಕೆ ಅಣಿಯಾಗಿದೆ. ಈ ಧಾರಾವಾಹಿಯ ಕಥೆ ಏನು ಎಂಬುದನ್ನು ತಿಳಿಸುವಂತಹ ಪ್ರೋಮೋಗಳನ್ನು ಈಗಾಗಲೇ ಕಲರ್ಸ್​ ಕಂಡ ವಾಹಿನಿ ಹಂಚಿಕೊಂಡಿದೆ. ಬಡತನದ ಕುಟುಂಬದಲ್ಲಿರುವ ಕಥಾನಾಯಕ ಚರಣ್​ ಒಬ್ಬ ಕ್ಯಾಬ್​ ಚಾಲಕ. ಮನೆ ಚಿಕ್ಕದಾದರೂ ಮನೆಯವರ ಪ್ರೀತಿಗೆ ಕೊರತೆ ಇಲ್ಲ. ಕೆಲಸವನ್ನೇ ದೇವರು ಎಂದು ಆತ ನಂಬಿದ್ದಾನೆ. ಅದೇ ರೀತಿ, ದೇವರಿಗಾಗಿ ಯಾವ ಕೆಲಸ ಬೇಕಾದರೂ ಮಾಡ್ತೀನಿ ಎನ್ನುವ ಹುಡುಗಿ ಕನ್ನಿಕಾ. ಒಂದಿನ ಕಥಾನಾಯಕ ಚರಣ್​ ಕ್ಯಾಬ್​ನಲ್ಲಿ ಕನ್ನಿಕಾ ಕುಳಿತುಕೊಂಡ ಬಳಿಕ ಎಲ್ಲವೂ ಬದಲಾಗಿ ಬಿಡುತ್ತದೆ. ಮುಂದೇನು ಎಂಬುದು ‘ಕನ್ಯಾಕುಮಾರಿ’ ಸೀರಿಯಲ್​ನ ಕಥಾಕೌತುಕ.

ದಿನದಿಂದ ದಿನಕ್ಕೆ ಕಿರುತೆರೆ ಲೋಕ ದೊಡ್ಡದಾಗುತ್ತಿದೆ. ಯಾವ ಸಿನಿಮಾಗೂ ಕಡಿಮೆ ಇಲ್ಲ ಎಂಬಂತೆ ಧಾರಾವಾಹಿಗಳ ತಾಂತ್ರಿಕ ಗುಣಮಟ್ಟ ಹೆಚ್ಚುತ್ತಿದೆ. ಆ ಕಾರಣ ವಾಹಿನಿಗಳ ನಡುವೆ ಭರ್ಜರಿ ಪೈಪೋಟಿ ಕೂಡ ಇದೆ. ಈಗಾಗಲೇ ಪ್ರೇಕ್ಷಕರ ಮನಗೆದ್ದಿರುವ ಇತರೆ ಧಾರಾವಾಹಿಗಳಿಗೆ ‘ಲಕ್ಷಣ’ ಮತ್ತು ‘ಕನ್ಯಾಕುಮಾರಿ’ ಹೇಗೆ ಸ್ಪರ್ಧೆ ನೀಡುತ್ತವೆ ಎಂಬುದನ್ನು ಕಾದುನೋಡಬೇಕು.

ಇದನ್ನೂ ಓದಿ:

‘ನೀವು ಗೆದ್ದು ಬನ್ನಿ’; ಫಿನಾಲೆ ತಲುಪಿದ ಮಂಜುಗೆ ಶಿವರಾಜ್​ಕುಮಾರ್ ವಿಶೇಷ ಹಾರೈಕೆ

ಸಾಮಾಜಿಕ ಸಂದೇಶ ಹೊತ್ತು ಬರುತ್ತಿದ್ದಾರೆ ತನ್ವಿ ರಾವ್; ರಾಧೆ ಶ್ಯಾಮ ಧಾರಾವಾಹಿಯಲ್ಲಿ ಭಿನ್ನ ಪ್ರಯತ್ನ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ