‘ಬಾಂಬ್​ಗಿಂತಲೂ ಸ್ಫೋಟಕವಾದಂತಹ ಸ್ಪರ್ಧಿಗಳು ಬರ್ತಾರೆ’: ಬಿಗ್​ ಬಾಸ್​ ಬಗ್ಗೆ ಕೌತುಕ ಹೆಚ್ಚಿಸಿದ ಸಲ್ಮಾನ್​ ಖಾನ್​

ಹಲವು ವರ್ಷಗಳಿಂದ ಸಲ್ಮಾನ್​ ಖಾನ್ ಅವರು ಬಿಗ್​ ಬಾಸ್​ ಶೋ ನಿರೂಪಣೆ ಮಾಡುತ್ತಾ ಬಂದಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಪ್ರತಿ ವೀಕೆಂಡ್​ನಲ್ಲಿ ಅವರು ನಡೆಸಿಕೊಡುವ ಎಪಿಸೋಡ್​ಗಳನ್ನು ನೋಡಲು ಫ್ಯಾನ್ಸ್​ ಕಾಯುತ್ತಿದ್ದಾರೆ. ಶೀಘ್ರದಲ್ಲೇ ‘ಬಿಗ್​ ಬಾಸ್​ 17’ ಶೋ ಶುರುವಾಗಲಿದೆ. ಈಗ ಪ್ರೋಮೋ ಬಿಡುಗಡೆ ಆಗಿದೆ.

‘ಬಾಂಬ್​ಗಿಂತಲೂ ಸ್ಫೋಟಕವಾದಂತಹ ಸ್ಪರ್ಧಿಗಳು ಬರ್ತಾರೆ’: ಬಿಗ್​ ಬಾಸ್​ ಬಗ್ಗೆ ಕೌತುಕ ಹೆಚ್ಚಿಸಿದ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​
Follow us
|

Updated on: Sep 25, 2023 | 5:57 PM

ನಟ ಸಲ್ಮಾನ್​ ಖಾನ್​ ಅವರು ಬಿಗ್​ ಬಾಸ್​ (Bigg Boss) ಹೊಸ ಆವೃತ್ತಿಯ ನಿರೂಪಣೆಗೆ ಸಜ್ಜಾಗಿದ್ದಾರೆ. ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್​ 17’ (Bigg Boss 17) ಶೋ ಆರಂಭ ಆಗಲಿದೆ. ಆ ಕಾರ್ಯಕ್ರಮ ಲಾಂಚ್​ ಆಗುವುದಕ್ಕೂ ಮುನ್ನ ಬಗೆಬಗೆಯ ಪ್ರೋಮೋಗಳ ಮೂಲಕ ಪ್ರೇಕ್ಷಕರ ಕುತೂಹಲ ಹೆಚ್ಚಿಸುವ ಕೆಲಸ ಆಗುತ್ತಿದೆ. ಅದಕ್ಕಾಗಿ ಇಂಟರೆಸ್ಟಿಂಗ್​ ಆದಂತಹ ಪ್ರೋಮೋಗಳನ್ನು ಮಾಡಿ ಹರಿಬಿಡಲಾಗಿದೆ. ಎಂದಿನಂತೆ ಈ ಬಾರಿ ಕೂಡ ಸಲ್ಮಾನ್​ ಖಾನ್​ (Salman Khan) ಅವರು ಸಖತ್​ ಉತ್ಸಾಹದಲ್ಲಿ ನಿರೂಪಣೆಗೆ ಸಜ್ಜಾಗಿದ್ದಾರೆ. ಹೊಸ ಸೀಸನ್​ನಲ್ಲಿ ಆಟ ಯಾವ ರೀತಿ ಇರಲಿದೆ ಮತ್ತು ಎಂಥ ಸ್ಪರ್ಧಿಗಳು ಬರುತ್ತಾರೆ ಎಂಬುದರ ಝಲಕ್​​ ತೋರಿಸಲು ಮೂರು ಪ್ರೋಮೋಗಳನ್ನು ರಿಲೀಸ್​ ಮಾಡಲಾಗಿದೆ.

ಒಂದು ಪ್ರೋಮೋದಲ್ಲಿ ಸಲ್ಮಾನ್​ ಖಾನ್​ ಅವರು ಕವಾಲಿ ಸಿಂಗರ್​ ರೀತಿ ಕಾಣಿಸಿಕೊಂಡಿದ್ದಾರೆ. ಇನ್ನೊಂದರಲ್ಲಿ ಅವರು ಡಿಟೆಕ್ಟೀವ್​ ವೇಷ ಧರಿಸಿದ್ದಾರೆ. ಮತ್ತೊಂದರಲ್ಲಿ ಬಾಂಬ್​ ನಿಷ್ಕ್ರಿಯ ದಳದ ತಂತ್ರಜ್ಞನಾಗಿ ಕಾಣಿಸಿಕೊಂಡಿದ್ದಾರೆ. ಪ್ರತಿ ಪ್ರೋಮೋದಲ್ಲೂ ಒಂದೊಂದು ಬಗೆಯ ಸುಳಿವು ನೀಡಲಾಗಿದೆ. ಈ ಮೂಲಕ ಬಿಗ್​ ಬಾಸ್​ ಬಗ್ಗೆ ಇರುವ ಕುತೂಹಲ ಹೆಚ್ಚಾಗುವಂತೆ ಮಾಡಲಾಗಿದೆ. ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಬರಲಿದ್ದಾರೆ ಎಂಬುದನ್ನು ತಿಳಿಯಲು ಪ್ರೇಕ್ಷಕರು ಕಾದಿದ್ದಾರೆ.

ಇದನ್ನೂ ಓದಿ: ಒಂದೆಡೆ ಸುದೀಪ್​, ಇನ್ನೊಂದೆಡೆ ಸಲ್ಮಾನ್​; ಒಟ್ಟಿಗೆ ಅನೌನ್ಸ್​ ಆಯ್ತು ಕನ್ನಡ-ಹಿಂದಿ ಬಿಗ್​ ಬಾಸ್​

ಟೈಮ್​ ಬಾಂಬ್​ ನಿಷ್ಕ್ರಿಯಗೊಳಿಸಲು ಸಲ್ಮಾನ್​ ಖಾನ್​ ಬರುತ್ತಾರೆ. ಅಲ್ಲಿರುವ ಬಾಂಬ್​ ನೋಡಿ, ‘ಇದೆಂಥಾ ಬಾಂಬ್​.. ಇದಕ್ಕಿಂತಲೂ ಸ್ಫೋಟಕವಾದಂತಹ ಸ್ಪರ್ಧಿಗಳು ಬರ್ತಾರೆ. ಅಲ್ವಾ ಬಿಗ್​ ಬಾಸ್​’ ಎಂದು ಸಲ್ಲು ಕೇಳ್ತಾರೆ. ‘ಯಾರಿಗೆ ಗುಂಡಿಗೆಯಲ್ಲಿ ಧೈರ್ಯ ಇದೆಯೋ ಅಂಥವರಿಗೆ ಬಿಗ್​ ಬಾಸ್​ ಮನೆಯೊಳಗೆ ಸ್ವಾಗತ’ ಎಂದು ಬಿಗ್​ ಬಾಸ್​ ಹೇಳುತ್ತಾರೆ. ‘ಈ ಬಾರಿ ಹೃದಯ, ಬುದ್ಧಿ ಮತ್ತು ಶಕ್ತಿಯ ಆಟ ನಡೆಯುತ್ತದೆ’ ಎಂಬ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ಒಂದಷ್ಟು ಹೊಸ ಟ್ವಿಸ್ಟ್​ಗಳನ್ನು ಹೊಸ ಸೀಸನ್​ನಲ್ಲಿ ಪರಿಚಯಿಸಲಾಗುತ್ತಿದೆ.

ಹಲವು ವರ್ಷಗಳಿಂದ ಸಲ್ಮಾನ್​ ಖಾನ್ ಅವರು ಬಿಗ್​ ಬಾಸ್​ ಶೋ ನಿರೂಪಣೆ ಮಾಡುತ್ತಾ ಬಂದಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಪ್ರತಿ ವೀಕೆಂಡ್​ನಲ್ಲಿ ಅವರು ನಡೆಸಿಕೊಡುವ ಎಪಿಸೋಡ್​ಗಳನ್ನು ನೋಡಲು ಫ್ಯಾನ್ಸ್​ ಕಾಯುತ್ತಿದ್ದಾರೆ. ಇದರ ಜೊತೆಗೆ ‘ಟೈಗರ್​ 3’ ಸಿನಿಮಾದ ಕೆಲಸಗಳಲ್ಲೂ ಸಲ್ಲು ಬ್ಯುಸಿ ಆಗಿದ್ದಾರೆ. ಈ ವರ್ಷ ದೀಪಾವಳಿ ಹಬ್ಬದ ಸಮಯದಲ್ಲಿ ಆ ಚಿತ್ರ ಬಿಡುಗಡೆ ಆಗಲಿದೆ. ಶೀಘ್ರದಲ್ಲೇ ಟೀಸರ್​ ಬರಲಿದ್ದು, ಆ ಬಳಿಕ ಟ್ರೇಲರ್​ ರಿಲೀಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ