AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್​ ಆ್ಯಂಡ್​ ರನ್​ ಪ್ರಕರಣದಲ್ಲಿ ತಪ್ಪು ಒಪ್ಪಿಕೊಂಡ ಹಾಸ್ಯ ನಟ ಚಂದ್ರಪ್ರಭ; ಸಿಕ್ತು ಟ್ವಿಸ್ಟ್​

‘ಬೈಕ್​ ಸವಾರ ಕುಡಿದಿದ್ದ ಎಂದು ಹೇಳಿದ್ದೆ. ನನ್ನನ್ನು ಕ್ಷಮಿಸಿ. ಆತ ಕುಡಿದಿರಲಿಲ್ಲ. ನಾನು ಮಾಡಿದ್ದು ತಪ್ಪಾಯ್ತು. ಎಲ್ಲರಿಗೂ ಕ್ಷಮೆ ಕೇಳುತ್ತೇನೆ. ನಾನು ಮತ್ತು ನನ್ನ ಸ್ನೇಹಿತ ಆಸ್ಪತ್ರೆಯವರೆಗೆ ಹೋಗಿದ್ದೆವು. ಆದರೆ ಆಸ್ಪತ್ರೆಗೆ ಸೇರಿಸಲಿಲ್ಲ. ನನಗೆ ಭಯವಾಯಿತು’ ಎಂದು ಚಂದ್ರಪ್ರಭ ಹೇಳಿದ್ದಾರೆ. ಪೊಲೀಸ್​ ಠಾಣೆ ಎದುರು ಅವರು ಕಣ್ಣೀರು ಹಾಕಿದ್ದಾರೆ.

ಹಿಟ್​ ಆ್ಯಂಡ್​ ರನ್​ ಪ್ರಕರಣದಲ್ಲಿ ತಪ್ಪು ಒಪ್ಪಿಕೊಂಡ ಹಾಸ್ಯ ನಟ ಚಂದ್ರಪ್ರಭ; ಸಿಕ್ತು ಟ್ವಿಸ್ಟ್​
ಚಂದ್ರಪ್ರಭ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Sep 08, 2023 | 12:55 PM

Share

ಕನ್ನಡ ಕಿರುತೆರೆಯ ‘ಗಿಚ್ಚಿ ಗಿಲಿಗಿಲಿ’ ಶೋ ಮೂಲಕ ಜನಪ್ರಿಯತೆ ಪಡೆದ ಹಾಸ್ಯ ನಟ (Comedy Actor) ಚಂದ್ರಪ್ರಭ ಅವರು ವಿವಾದಕ್ಕೆ ಸಿಲುಕಿದ್ದಾರೆ. ಚಿಕ್ಕಮಗಳೂರಿನಲ್ಲಿ ನಡೆದ ಅಪಘಾತ (Road Accident) ಪ್ರಕರಣದಲ್ಲಿ ಅವರು ಸಂಕಷ್ಟ ಎದುರಿಸುತ್ತಿದ್ದಾರೆ. ಇತ್ತೀಚೆಗೆ ಅವರು ಚಲಿಸುತ್ತಿದ್ದ ಕಾರು ಮಾಲತೇಶ್​ ಎಂಬ ಬೈಕ್​ ಸವಾರನಿಗೆ ಡಿಕ್ಕಿ ಹೊಡಿದಿತ್ತು. ಈ ಘಟನೆಯಲ್ಲಿ ತಮ್ಮದು ಯಾವುದೇ ತಪ್ಪು ಇಲ್ಲ ಎಂದು ಚಂದ್ರಪ್ರಭ (Chandraprabha) ಹೇಳಿಕೆ ನೀಡಿದ್ದರು. ಅಲ್ಲದೇ, ಆ ಬೈಕ್​ ಸವಾರ ಮದ್ಯಪಾನ ಮಾಡಿದ್ದರು ಎಂದು ಕೂಡ ಚಂದ್ರಪ್ರಭ ಆರೋಪಿಸಿದ್ದರು. ಆದರೆ ಈಗ ತಮ್ಮ ಹೇಳಿಕೆ ಬದಲಾಯಿಸಿದ್ದಾರೆ. ಅಂದು ನಡೆದ ಅಪಘಾತದಲ್ಲಿ ತಮ್ಮದೇ ತಪ್ಪು ಎಂದು ಚಂದ್ರಪ್ರಭ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಸಂಚಾರ ಪೊಲೀಸ್​ ಠಾಣೆ ಬಳಿ ಟಿವಿ9ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ತಪ್ಪು ಒಪ್ಪಿಕೊಂಡ ಚಂದ್ರಪ್ರಭ:

ಚಿಕ್ಕಮಗಳೂರಿನ ಸಂಚಾರಿ ಠಾಣೆ ಮುಂಭಾಗ ಚಂದ್ರಪ್ರಭ ಅವರು ಕಣ್ಣೀರು ಹಾಕಿದ್ದಾರೆ. ಸೋಮವಾರ (ಸೆಪ್ಟೆಂಬರ್​ 4) ಅವರು ಅಪಘಾತ ಮಾಡಿ ಎಸ್ಕೇಪ್​ ಆಗಿದ್ದರು. ಪೊಲೀಸರ ಸೂಚನೆ ಮೇರೆಗೆ ಇಂದು (ಸೆಪ್ಟೆಂಬರ್​ 8) ಚಿಕ್ಕಮಗಳೂರು ಠಾಣೆಗೆ ಅವರು ಹಾಜರಾಗಿದ್ದಾರೆ. ಈ ವೇಳೆ ಅವರು ತಪ್ಪು ಒಪ್ಪಿಕೊಂಡು ಕಣ್ಣೀರು ಹಾಕಿದ್ದೂ ಅಲ್ಲದೇ, ಅಪಘಾತಕ್ಕೆ ಒಳಗಾದ ಯುವಕನ ಯೋಗಕ್ಷೇಮ ವಿಚಾರಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ರಸ್ತೆ ಅಪಘಾತ: ಸಾವು ಬದುಕಿನೊಂದಿಗೆ ಹೋರಾಡುತ್ತಿರುವ ಮಾಲ್ತೇಶ್​ನ ಅಮ್ಮ ಕಮೇಡಿಯನ್ ಚಂದ್ರಪ್ರಭಾನನ್ನು ಶಪಿಸಿದರು!

ಅಪಘಾತದ ಬಗ್ಗೆ ಚಂದ್ರಪ್ರಭ ಹೇಳಿಕೆ:

‘ನಾನು ಮಾಡಿದ ಕೆಲಸ ತಪ್ಪಾಯ್ತು. ಎಲ್ಲರಿಗೂ ಕ್ಷಮೆ ಕೇಳುತ್ತೇನೆ. ಆತ ಕುಡಿದಿದ್ದ ಎಂದು ಹೇಳಿದ್ದೆ. ತಪ್ಪಾಯ್ತು. ನನ್ನನ್ನು ಕ್ಷಮಿಸಿ. ಆತ ಕುಡಿದಿರಲಿಲ್ಲ. ನಾನು ಮತ್ತು ನನ್ನ ಸ್ನೇಹಿತ ಆಸ್ಪತ್ರೆಯವರೆಗೆ ಹೋಗಿದ್ದೆವು. ಆದರೆ ಆಸ್ಪತ್ರೆಗೆ ಸೇರಿಸಲಿಲ್ಲ. ನನಗೆ ಭಯವಾಯಿತು. ಅಪಘಾತವಾದ ಯುವಕನ ಯೋಗಕ್ಷೇಮದ ಬಗ್ಗೆ ನಾನು ವಿಚಾರಿಸಬೇಕಿತ್ತು. ಆದರೆ, ವಿಚಾರಿಸಲಿಲ್ಲ. ನಾನು ಬಡವ, ತಂದೆ ಸತ್ತು 11 ವರ್ಷವಾಯ್ತು. ಆಸ್ಪತ್ರೆಗೆ ಹೋಗಿ ಯೋಗಕ್ಷೇಮ ವಿಚಾರಿಸುತ್ತೇನೆ. ಮಾಲತೇಶ್ ಅವರ ಆಸ್ಪತ್ರೆ ಖರ್ಚಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ’ ಎಂದು ಹಾಸ್ಯನಟ ಚಂದ್ರಪ್ರಭ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಗಾಯಾಳು ಆಸ್ಪತ್ರೆಗೆ ಸೇರಿಸಿದ್ದು ನಾನು, ಚಂದ್ರಪ್ರಭ ಅಲ್ಲ; ಹಾಸ್ಯಕಲಾವಿದನ ವಿರುದ್ಧ ಆಟೋ ಚಾಲಕ ಆಕ್ರೋಶ

ಅಂದು ಚಂದ್ರಪ್ರಭ ಹೇಳಿದ್ದೇನು?

‘ನನ್ನ ಕಾರಿನ ಎಡಭಾಗಕ್ಕೆ ಸ್ಕೂಟಿ ಟಚ್​ ಆಯಿತು. ಅದರಲ್ಲಿ ಇದ್ದ ವ್ಯಕ್ತಿ ಕುಡಿದಿದ್ದರು. ನಾನು ಮತ್ತು ನನ್ನ ಸ್ನೇಹಿತರೊಬ್ಬರು ಆಟೋ ಕರೆಸಿ, ಗಾಯಾಳವನ್ನು ಆಸ್ಪತ್ರೆಗೆ ಸೇರಿಸಿದೆವು. ನನಗೆ ಬೇರೆ ಕಾರ್ಯಕ್ರಮ ಇದ್ದಿದ್ದರಿಂದ ಅಲ್ಲಿಂದ ತೆರಳಿದೆ. ನಂತರ ಪೊಲೀಸರು ಫೋನ್​ ಮಾಡಿ ಕರೆದರು. ನಾನು ಶೂಟಿಂಗ್​ನಲ್ಲಿ ಬ್ಯುಸಿ ಆದೆ. ಕಾನೂನಿನ ಪ್ರಕಾರವಾಗಿ ನಾನು ಪೊಲೀಸರು ಹೇಳಿದಂತೆ ಕೇಳುತ್ತೇನೆ. ಸೋಶಿಯಲ್​ ಮೀಡಿಯಾದಲ್ಲಿ ಅಪಪ್ರಚಾರ ಆಗುತ್ತಿದೆ. ಘಟನೆಯ ಸಿಸಿಟಿವಿ ಇದೆ. ಅದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ’ ಎಂದು ಚಂದ್ರಪ್ರಭ ಅವರು ಈ ಮೊದಲು ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ