AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಚಂದ್ರಶೇಖರ್ ಸಿದ್ದಿ ನಿಧನ

ನಟ ರಾಕೇಶ್ ಪೂಜಾರಿ ಅವರ ಸಾವಿನ ಕಹಿ ನೆನಪು ಮಾಸುವ ಮುನ್ನವೇ ಮತ್ತೊಂದು ಆಘಾತಕಾರಿ ಸುದ್ದಿ ಬಂದಿದೆ. ಕಿರುತೆರೆಯ ‘ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಗುರುತಿಸಿಕೊಂಡಿದ್ದ ನಟ ಚಂದ್ರಶೇಖರ್ ಸಿದ್ದಿ ಅವರು ಮೃತರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ನಿಧನರಾಗಿದ್ದಾರೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಚಂದ್ರಶೇಖರ್ ಸಿದ್ದಿ ನಿಧನ
Chandrashekhar Siddi
Mangala RR
| Updated By: ಮದನ್​ ಕುಮಾರ್​|

Updated on: Aug 01, 2025 | 9:10 PM

Share

ಕೆಲವು ತಿಂಗಳ ಹಿಂದೆ ‘ಕಾಮಿಡಿ ಕಿಲಾಡಿಗಳು’ (Comedy Khiladigalu) ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದರು. ಈಗ ಮತ್ತೊಂದು ಶಾಕಿಂಗ್ ಸುದ್ದಿ ಹೊರಬಂದಿದೆ. ‘ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಜನಮನ ಗೆದ್ದಿದ್ದ ನಟ ಚಂದ್ರಶೇಖರ್ ಸಿದ್ಧಿ (Chandrashekhar Siddi) ಅವರು ನಿಧನರಾಗಿದ್ದಾರೆ. ಆತ್ಯಹತ್ಯೆ ಮಾಡಿಕೊಂಡು ಅವರು ಸಾವನ್ನಪ್ಪಿದ್ದಾರೆ. ಯಲ್ಲಾಪುರದ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆ ಆಗಿದೆ. ಯಲ್ಲಾಪುರ ತಾಲೂಕಿನ ಕಟ್ಟಿಗೆ ಗ್ರಾಮದ ಅರಣ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಯಲ್ಲಾಪುರ ತಾಲೂಕಿನ ವಜ್ರಳ್ಳಿಯ ಚಿಮನಳ್ಳಿಯ ಮೂಲದವರಾದ ಚಂದ್ರಶೇಖರ ಸಿದ್ದಿ ಅವರು ಖಾಸಗಿ ವಾಹಿನಿಯಲ್ಲಿ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಜನಪ್ರಿಯತೆ ಗಳಿಸಿದ್ದರು. ‘ನಿನಾಸಂ’ನಲ್ಲಿ ಅಭಿನಯದ ತರಬೇತಿ ಪಡೆದಿದ್ದ ಅವರು ಕೆಲವು ಧಾರವಾಹಿಗಳಲ್ಲಿ ಕೂಡ ನಟಿಸಿದ್ದರು. ಹಾಸ್ಯ ನಟನಾಗಿ ಅವರು ಕಿರುತೆರೆ ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು.

ಹೆಚ್ಚಿನ ಕೆಲಸ ಇಲ್ಲದೇ ಚಂದ್ರಶೇಖರ್ ಸಿದ್ದಿ ಅವರು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಮೂರು ತಿಂಗಳ ಹಿಂದೆ ಮಾನಸಿಕವಾಗಿ ಜರ್ಜರಿತನಾಗಿದ್ದರು ಎನ್ನಲಾಗಿದೆ. ಚಂದ್ರಶೇಖರ್ ಅವರ ಸಾವಿಗೆ ಸಂಬಂಧಿಸಿದಂತೆ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರ ನಿಧನದಿಂದ ಕುಟುಂಬದವರಿಗೆ ಮತ್ತು ಆಪ್ತರಿಗೆ ತೀವ್ರ ನೋವಾಗಿದೆ. ಚಂದ್ರಶೇಖರ್ ಆತ್ಮಕ್ಕೆ ಶಾಂತಿ ಕೋರಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ