AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟ ರವಿಕಿರಣ್ ವಿರುದ್ಧ ಕ್ಲಬ್​ನಲ್ಲಿ ಅವ್ಯವಹಾರ ಆರೋಪ; ಸದಸ್ಯರಿಂದ ದೂರು

‘ಟೆಲಿವಿಷನ್ ಕಲ್ಚರಲ್ ಆ್ಯಂಡ್​ ಸ್ಪೋರ್ಟ್ಸ್‌ ಕ್ಲಬ್‌’ ಕಾರ್ಯದರ್ಶಿ ಆಗಿದ್ದ ನಟ, ನಿರ್ದೇಶಕ ರವಿಕಿರಣ್ ವಿರುದ್ಧ ಹಲವು ಆರೋಪಗಳು ಎದುರಾಗಿವೆ. ರವಿಕಿರಣ್​ ಅವರಿಂದ ಕ್ಲಬ್​ನಲ್ಲಿ ಅವ್ಯವಹಾರ ನಡೆದಿದೆ ಎಂದು ಸದಸ್ಯರು ಆರೋಪ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಪುರ ಪೊಲೀಸ್​ ಠಾಣೆಗೆ ದೂರು ಸಲ್ಲಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಕಿರುತೆರೆ ನಟ ರವಿಕಿರಣ್ ವಿರುದ್ಧ ಕ್ಲಬ್​ನಲ್ಲಿ ಅವ್ಯವಹಾರ ಆರೋಪ; ಸದಸ್ಯರಿಂದ ದೂರು
ಸುಬ್ರಹ್ಮಣ್ಯಪುರ ಪೊಲೀಸ್​ ಠಾಣೆ, ರವಿಕಿರಣ್​
Follow us
Jagadisha B
| Updated By: ಮದನ್​ ಕುಮಾರ್​

Updated on: Feb 12, 2024 | 10:29 PM

ಕಿರುತೆರೆಯ ನಟ ರವಿಕಿರಣ್ (Ravi Kiran) ಅವರು ‘ಟೆಲಿವಿಷನ್ ಕಲ್ಚರಲ್ ಆ್ಯಂಡ್​ ಸ್ಪೋರ್ಟ್ಸ್‌ ಕ್ಲಬ್‌’ನಲ್ಲಿ ಅವ್ಯವಹಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಪುರ ಪೊಲೀಸ್​ ಠಾಣೆಗೆ ದೂರು ನೀಡಲು ಕ್ಲಬ್ ಸದಸ್ಯರು ಮುಂದಾಗಿದ್ದಾರೆ. ಹಲವು ವರ್ಷಗಳಿಂದ ಕ್ಲಬ್‌ನ (Television Cultural and Sports Club) ಕಾರ್ಯದರ್ಶಿಯಾಗಿದ್ದ ರವಿಕಿರಣ್‌ ಅವರ ಅವ್ಯವಹಾರದ ಬಗ್ಗೆ ಪ್ರಶ್ನಿಸಿದ್ದಕ್ಕೆ ಕ್ಲಬ್‌ನಲ್ಲಿ ಗಲಾಟೆ ನಡೆಸಿದ ಆರೋಪ ಕೇಳಿಬಂದಿದೆ. ಬಳಿಕ ಕ್ಲಬ್​ ಸದಸ್ಯರು ಸುಬ್ರಹ್ಮಣ್ಯಪುರ ಠಾಣೆ (Television Cultural and Sports Club) ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳೆದ 20 ವರ್ಷದಿಂದ ಕಿರುತೆರೆ ಕಲಾವಿದರಿಗಾಗಿ ಈ ಕ್ಲಬ್ ಇದೆ.

‘ಸರ್ಕಾರ ಕೊಟ್ಟ ಅನುದಾನದಲ್ಲಿ ಕ್ಲಬ್ ನಿರ್ಮಾಣ ಮಾಡಿದ್ದೇವೆ. ಕ್ಲಬ್​ಗಾಗಿ ಸರ್ಕಾರವೇ 3 ಕೋಟಿಗೂ ಅಧಿಕ ಹಣವನ್ನು ನೀಡಿದೆ. ಕ್ಲಬ್​ನಲ್ಲಿ ಕಿರುತೆರೆಯ ಸಾವಿರಾರು ಕಲಾವಿದರಿದ್ದಾರೆ. ಕ್ಲಬ್ ಆರಂಭದಿಂದಲೂ ರವಿಕಿರಣ್ ಕಾರ್ಯದರ್ಶಿ ಆಗಿದ್ದಾರೆ. GST, ಬಿಬಿಎಂಪಿ ಟ್ಯಾಕ್ಸ್ ಸೇರಿ ಯಾವುದೇ ತೆರಿಗೆ ಪಾವತಿ ಮಾಡಿಲ್ಲ. ಹಣವನ್ನು ಪಾವತಿಸದೇ ಅದರ ಹೆಸರಲ್ಲಿ ಕ್ಲಬ್ ಸದಸ್ಯರಿಂದ ವಸೂಲಿ ಮಾಡಲಾಗಿದೆ’ ಎಂದು ಸದಸ್ಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಿರುತೆರೆಗೆ ಪ್ರವೇಶಿಸಿದ ‘ಕಾಂತಾರ’ ಚೆಲುವೆ ಸಪ್ತಮಿ ಗೌಡ

‘ಈ ಬಗ್ಗೆ ಚರ್ಚೆ ಹೆಚ್ಚಾದಾಗ ರವಿಕಿರಣ್ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು. ಕ್ಲಬ್​ಗೆ ಬರದಂತೆ ಆದೇಶ ಇದ್ದರೂ 6 ಲಕ್ಷ ರೂಪಾಯಿ ಹಣ ಪಡೆದಿದ್ದಾರೆ. ಜೊತೆಗೆ ಇಂದು (ಫೆಬ್ರವರಿ 12) ಕ್ಲಬ್​ಗೆ ಅನುಮತಿ ಇಲ್ಲದಿದ್ದರೂ ಬಂದಿದ್ದಾರೆ. ಹಾಗಾಗಿ ಅವರ ವಿರುದ್ಧ ಹೋರಾಟ ಮಾಡುತ್ತೇವೆ’ ಎಂದು ಕಲಾವಿದರು ಹೇಳಿಕೆ ನೀಡಿದ್ದಾರೆ.

ಮನವರಿಕೆ ಯತ್ನ: ರವಿಕಿರಣ್ ವಿರುದ್ಧ ಕ್ಲಬ್​ನಲ್ಲಿ ಅವ್ಯವಹಾರದ ಆರೋಪ ಎದುರಾಗಿದ್ದು, ಕ್ಲಬ್​ ಸದಸ್ಯರು ದೂರು ನೀಡಿದ ಹಿನ್ನೆಲೆಯಲ್ಲಿ ಸುಬ್ರಮಣ್ಯಪುರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೋರ್ಟ್​ನಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಇನ್ಸ್​ಪೆಕ್ಟರ್ ಅರ್ಜುನ್​ ಮನವರಿಕೆ ಮಾಡಿದ್ದಾರೆ. ಅವರ ಮಾತು ಒಪ್ಪಿ ಸದಸ್ಯರು ತೆರಳಿರುವುದಾಗಿ ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಕಿರುತೆರೆ ನಟಿ; ಪೊಲೀಸರಿಂದ ತನಿಖೆ

ಹಲವು ವರ್ಷಗಳಿಂದ ರವಿಕಿರಣ್​ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಕಲಾವಿದರ ಕುಟುಂಬದಲ್ಲಿ ಬಂದ ಅವರಿಗೆ ಚಿಕ್ಕ ವಯಸ್ಸಿನಲ್ಲಿಯೇ ನಟನೆ ಬಗ್ಗೆ ಆಸಕ್ತಿ ಮೂಡಿತ್ತು. ಕಿರುತೆರೆಯ ಅನೇಕ ಧಾರಾವಾಹಿಗಳಲ್ಲಿ ಅವರು ನಟಿಸಿ, ನಿರ್ದೇಶನವನ್ನೂ ಮಾಡಿದ್ದಾರೆ. ಕಿರುತೆರೆಯಲ್ಲಿ ಅವರು ಅಪಾರ ಅನುಭವ ಪಡೆದಿದ್ದಾರೆ. ಈಗ ‘ಟೆಲಿವಿಷನ್ ಕಲ್ಚರಲ್ ಆ್ಯಂಡ್​ ಸ್ಪೋರ್ಟ್ಸ್‌ ಕ್ಲಬ್‌’ ವಿಚಾರದಲ್ಲಿ ಅವರ ಮೇಲೆ ಆರೋಪ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ