AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟ ರವಿಕಿರಣ್ ವಿರುದ್ಧ ಕ್ಲಬ್​ನಲ್ಲಿ ಅವ್ಯವಹಾರ ಆರೋಪ; ಸದಸ್ಯರಿಂದ ದೂರು

‘ಟೆಲಿವಿಷನ್ ಕಲ್ಚರಲ್ ಆ್ಯಂಡ್​ ಸ್ಪೋರ್ಟ್ಸ್‌ ಕ್ಲಬ್‌’ ಕಾರ್ಯದರ್ಶಿ ಆಗಿದ್ದ ನಟ, ನಿರ್ದೇಶಕ ರವಿಕಿರಣ್ ವಿರುದ್ಧ ಹಲವು ಆರೋಪಗಳು ಎದುರಾಗಿವೆ. ರವಿಕಿರಣ್​ ಅವರಿಂದ ಕ್ಲಬ್​ನಲ್ಲಿ ಅವ್ಯವಹಾರ ನಡೆದಿದೆ ಎಂದು ಸದಸ್ಯರು ಆರೋಪ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಪುರ ಪೊಲೀಸ್​ ಠಾಣೆಗೆ ದೂರು ಸಲ್ಲಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಕಿರುತೆರೆ ನಟ ರವಿಕಿರಣ್ ವಿರುದ್ಧ ಕ್ಲಬ್​ನಲ್ಲಿ ಅವ್ಯವಹಾರ ಆರೋಪ; ಸದಸ್ಯರಿಂದ ದೂರು
ಸುಬ್ರಹ್ಮಣ್ಯಪುರ ಪೊಲೀಸ್​ ಠಾಣೆ, ರವಿಕಿರಣ್​
Jagadisha B
| Edited By: |

Updated on: Feb 12, 2024 | 10:29 PM

Share

ಕಿರುತೆರೆಯ ನಟ ರವಿಕಿರಣ್ (Ravi Kiran) ಅವರು ‘ಟೆಲಿವಿಷನ್ ಕಲ್ಚರಲ್ ಆ್ಯಂಡ್​ ಸ್ಪೋರ್ಟ್ಸ್‌ ಕ್ಲಬ್‌’ನಲ್ಲಿ ಅವ್ಯವಹಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಪುರ ಪೊಲೀಸ್​ ಠಾಣೆಗೆ ದೂರು ನೀಡಲು ಕ್ಲಬ್ ಸದಸ್ಯರು ಮುಂದಾಗಿದ್ದಾರೆ. ಹಲವು ವರ್ಷಗಳಿಂದ ಕ್ಲಬ್‌ನ (Television Cultural and Sports Club) ಕಾರ್ಯದರ್ಶಿಯಾಗಿದ್ದ ರವಿಕಿರಣ್‌ ಅವರ ಅವ್ಯವಹಾರದ ಬಗ್ಗೆ ಪ್ರಶ್ನಿಸಿದ್ದಕ್ಕೆ ಕ್ಲಬ್‌ನಲ್ಲಿ ಗಲಾಟೆ ನಡೆಸಿದ ಆರೋಪ ಕೇಳಿಬಂದಿದೆ. ಬಳಿಕ ಕ್ಲಬ್​ ಸದಸ್ಯರು ಸುಬ್ರಹ್ಮಣ್ಯಪುರ ಠಾಣೆ (Television Cultural and Sports Club) ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳೆದ 20 ವರ್ಷದಿಂದ ಕಿರುತೆರೆ ಕಲಾವಿದರಿಗಾಗಿ ಈ ಕ್ಲಬ್ ಇದೆ.

‘ಸರ್ಕಾರ ಕೊಟ್ಟ ಅನುದಾನದಲ್ಲಿ ಕ್ಲಬ್ ನಿರ್ಮಾಣ ಮಾಡಿದ್ದೇವೆ. ಕ್ಲಬ್​ಗಾಗಿ ಸರ್ಕಾರವೇ 3 ಕೋಟಿಗೂ ಅಧಿಕ ಹಣವನ್ನು ನೀಡಿದೆ. ಕ್ಲಬ್​ನಲ್ಲಿ ಕಿರುತೆರೆಯ ಸಾವಿರಾರು ಕಲಾವಿದರಿದ್ದಾರೆ. ಕ್ಲಬ್ ಆರಂಭದಿಂದಲೂ ರವಿಕಿರಣ್ ಕಾರ್ಯದರ್ಶಿ ಆಗಿದ್ದಾರೆ. GST, ಬಿಬಿಎಂಪಿ ಟ್ಯಾಕ್ಸ್ ಸೇರಿ ಯಾವುದೇ ತೆರಿಗೆ ಪಾವತಿ ಮಾಡಿಲ್ಲ. ಹಣವನ್ನು ಪಾವತಿಸದೇ ಅದರ ಹೆಸರಲ್ಲಿ ಕ್ಲಬ್ ಸದಸ್ಯರಿಂದ ವಸೂಲಿ ಮಾಡಲಾಗಿದೆ’ ಎಂದು ಸದಸ್ಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಿರುತೆರೆಗೆ ಪ್ರವೇಶಿಸಿದ ‘ಕಾಂತಾರ’ ಚೆಲುವೆ ಸಪ್ತಮಿ ಗೌಡ

‘ಈ ಬಗ್ಗೆ ಚರ್ಚೆ ಹೆಚ್ಚಾದಾಗ ರವಿಕಿರಣ್ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು. ಕ್ಲಬ್​ಗೆ ಬರದಂತೆ ಆದೇಶ ಇದ್ದರೂ 6 ಲಕ್ಷ ರೂಪಾಯಿ ಹಣ ಪಡೆದಿದ್ದಾರೆ. ಜೊತೆಗೆ ಇಂದು (ಫೆಬ್ರವರಿ 12) ಕ್ಲಬ್​ಗೆ ಅನುಮತಿ ಇಲ್ಲದಿದ್ದರೂ ಬಂದಿದ್ದಾರೆ. ಹಾಗಾಗಿ ಅವರ ವಿರುದ್ಧ ಹೋರಾಟ ಮಾಡುತ್ತೇವೆ’ ಎಂದು ಕಲಾವಿದರು ಹೇಳಿಕೆ ನೀಡಿದ್ದಾರೆ.

ಮನವರಿಕೆ ಯತ್ನ: ರವಿಕಿರಣ್ ವಿರುದ್ಧ ಕ್ಲಬ್​ನಲ್ಲಿ ಅವ್ಯವಹಾರದ ಆರೋಪ ಎದುರಾಗಿದ್ದು, ಕ್ಲಬ್​ ಸದಸ್ಯರು ದೂರು ನೀಡಿದ ಹಿನ್ನೆಲೆಯಲ್ಲಿ ಸುಬ್ರಮಣ್ಯಪುರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೋರ್ಟ್​ನಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಇನ್ಸ್​ಪೆಕ್ಟರ್ ಅರ್ಜುನ್​ ಮನವರಿಕೆ ಮಾಡಿದ್ದಾರೆ. ಅವರ ಮಾತು ಒಪ್ಪಿ ಸದಸ್ಯರು ತೆರಳಿರುವುದಾಗಿ ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಕಿರುತೆರೆ ನಟಿ; ಪೊಲೀಸರಿಂದ ತನಿಖೆ

ಹಲವು ವರ್ಷಗಳಿಂದ ರವಿಕಿರಣ್​ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಕಲಾವಿದರ ಕುಟುಂಬದಲ್ಲಿ ಬಂದ ಅವರಿಗೆ ಚಿಕ್ಕ ವಯಸ್ಸಿನಲ್ಲಿಯೇ ನಟನೆ ಬಗ್ಗೆ ಆಸಕ್ತಿ ಮೂಡಿತ್ತು. ಕಿರುತೆರೆಯ ಅನೇಕ ಧಾರಾವಾಹಿಗಳಲ್ಲಿ ಅವರು ನಟಿಸಿ, ನಿರ್ದೇಶನವನ್ನೂ ಮಾಡಿದ್ದಾರೆ. ಕಿರುತೆರೆಯಲ್ಲಿ ಅವರು ಅಪಾರ ಅನುಭವ ಪಡೆದಿದ್ದಾರೆ. ಈಗ ‘ಟೆಲಿವಿಷನ್ ಕಲ್ಚರಲ್ ಆ್ಯಂಡ್​ ಸ್ಪೋರ್ಟ್ಸ್‌ ಕ್ಲಬ್‌’ ವಿಚಾರದಲ್ಲಿ ಅವರ ಮೇಲೆ ಆರೋಪ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು