AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ, ನಿಂದನೆ ಆರೋಪ; ಹಾಸ್ಯ ನಟಿ ನಯನಾ ವಿರುದ್ಧ ದೂರು ನೀಡಿದ ನಟ ಸೋಮಶೇಖರ್​

Comedy Actress Nayana: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಯನಾ ಮತ್ತು ಸೋಮಶೇಖರ್​ ನಡುವೆ ಕಿರಿಕ್​ ಆಗಿದೆ. ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೀವ ಬೆದರಿಕೆ, ನಿಂದನೆ ಆರೋಪ; ಹಾಸ್ಯ ನಟಿ ನಯನಾ ವಿರುದ್ಧ ದೂರು ನೀಡಿದ ನಟ ಸೋಮಶೇಖರ್​
ನಯನಾ, ಸೋಮಶೇಖರ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 21, 2022 | 10:33 AM

ಖಾಸಗಿ ಮನರಂಜನಾ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಕಾಮಿಡಿಯನ್ ಆಗಿ ಗುರುತಿಸಿಕೊಂಡ ನಟ ಸೋಮಶೇಖರ್​ ಅವರಿಗೆ ಹಾಸ್ಯ ನಟಿ ನಯನಾ ಅವರು ಜೀವ ಬೆದರಿಕೆ (Threat) ಹಾಕಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಕುರಿತು ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ (RR Nagar Police station) ದೂರು ದಾಖಲಾಗಿದೆ. ತಮಗೆ ನಯನಾ (Comedy Actress Nayana) ಅವರು ಕೆಟ್ಟದಾಗಿ ನಿಂದಿಸಿ ವಾಯ್ಸ್​ ಮೆಸೇಜ್​ ಕಳಿಸಿದ್ದಾರೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ನಟ ಸೋಮಶೇಖರ್​ ಅವರು ದೂರಿನಲ್ಲಿ ತಿಳಿಸಿದ್ದಾರೆ. ‘ಇನ್ಮುಂದೆ ನಯನಾ ನಮ್ಮ ತಂಟೆಗೆ ಬಾರದಂತೆ ಅವರಿಗೆ ತಿಳುವಳಿಕೆ ನೀಡಿ ಹಾಗೂ ನಮ್ಮ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿ’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕಾಮಿಡಿ ಕಾರ್ಯಕ್ರಮದ 2ನೇ ರನ್ನರ್​ ಅಪ್​ ಆಗಿದ್ದ ಸೋಮಶೇಖರ್​ ಅವರ ತಂಡಕ್ಕೆ 3 ಲಕ್ಷ ರೂಪಾಯಿ ಬಹುಮಾನ ಹಣ ಬಂದಿತ್ತು. ತಂಡದಲ್ಲಿ ಇದ್ದ ಸೀನಿಯರ್​ಗಳಿಗೂ ಬಹುಮಾನದ ಹಣದಲ್ಲಿ ಪಾಲು ನೀಡಬೇಕು ಎಂದು ನಯನಾ ಅವರು ಸೋಮಶೇಖರ್​ಗೆ ಕರೆ ಮಾಡಿ ಒತ್ತಾಯ ಹೇರಿದ್ದಾರೆ. ಅಲ್ಲದೇ ಪೊಲೀಸ್​ ಠಾಣೆಯಲ್ಲೇ ಕುಳಿತು ಬೆದರಿಕೆ ಆಗುವಂತಹ ವಾಯ್ಸ್​ ಮೆಸೇಜ್​ ಕಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

‘ಸೀನಿಯರ್​ಗಳಿಗೆ ಹಣ ಕೊಡಲು ವಾಹಿನಿಯವರು ಹೇಳಿರಲಿಲ್ಲ. ಯಾಕೆಂದರೆ ಅವರಿಗೆ ತಿಂಗಳ ಪೇಮೆಂಟ್​ ಇರುತ್ತಿತ್ತು’ ಎಂದು ಸೋಮಶೇಖರ್​ ಹೇಳಿದ್ದಾರೆ. ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಯನಾ ಮತ್ತು ಸೋಮಶೇಖರ್​ ನಡುವೆ ಕಿರಿಕ್​ ಆಗಿದೆ.

(ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…)

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:33 am, Mon, 21 November 22

ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ