AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ, ನಿಂದನೆ ಆರೋಪ; ಹಾಸ್ಯ ನಟಿ ನಯನಾ ವಿರುದ್ಧ ದೂರು ನೀಡಿದ ನಟ ಸೋಮಶೇಖರ್​

Comedy Actress Nayana: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಯನಾ ಮತ್ತು ಸೋಮಶೇಖರ್​ ನಡುವೆ ಕಿರಿಕ್​ ಆಗಿದೆ. ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೀವ ಬೆದರಿಕೆ, ನಿಂದನೆ ಆರೋಪ; ಹಾಸ್ಯ ನಟಿ ನಯನಾ ವಿರುದ್ಧ ದೂರು ನೀಡಿದ ನಟ ಸೋಮಶೇಖರ್​
ನಯನಾ, ಸೋಮಶೇಖರ್
TV9 Web
| Edited By: |

Updated on:Nov 21, 2022 | 10:33 AM

Share

ಖಾಸಗಿ ಮನರಂಜನಾ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಕಾಮಿಡಿಯನ್ ಆಗಿ ಗುರುತಿಸಿಕೊಂಡ ನಟ ಸೋಮಶೇಖರ್​ ಅವರಿಗೆ ಹಾಸ್ಯ ನಟಿ ನಯನಾ ಅವರು ಜೀವ ಬೆದರಿಕೆ (Threat) ಹಾಕಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಕುರಿತು ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ (RR Nagar Police station) ದೂರು ದಾಖಲಾಗಿದೆ. ತಮಗೆ ನಯನಾ (Comedy Actress Nayana) ಅವರು ಕೆಟ್ಟದಾಗಿ ನಿಂದಿಸಿ ವಾಯ್ಸ್​ ಮೆಸೇಜ್​ ಕಳಿಸಿದ್ದಾರೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ನಟ ಸೋಮಶೇಖರ್​ ಅವರು ದೂರಿನಲ್ಲಿ ತಿಳಿಸಿದ್ದಾರೆ. ‘ಇನ್ಮುಂದೆ ನಯನಾ ನಮ್ಮ ತಂಟೆಗೆ ಬಾರದಂತೆ ಅವರಿಗೆ ತಿಳುವಳಿಕೆ ನೀಡಿ ಹಾಗೂ ನಮ್ಮ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿ’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕಾಮಿಡಿ ಕಾರ್ಯಕ್ರಮದ 2ನೇ ರನ್ನರ್​ ಅಪ್​ ಆಗಿದ್ದ ಸೋಮಶೇಖರ್​ ಅವರ ತಂಡಕ್ಕೆ 3 ಲಕ್ಷ ರೂಪಾಯಿ ಬಹುಮಾನ ಹಣ ಬಂದಿತ್ತು. ತಂಡದಲ್ಲಿ ಇದ್ದ ಸೀನಿಯರ್​ಗಳಿಗೂ ಬಹುಮಾನದ ಹಣದಲ್ಲಿ ಪಾಲು ನೀಡಬೇಕು ಎಂದು ನಯನಾ ಅವರು ಸೋಮಶೇಖರ್​ಗೆ ಕರೆ ಮಾಡಿ ಒತ್ತಾಯ ಹೇರಿದ್ದಾರೆ. ಅಲ್ಲದೇ ಪೊಲೀಸ್​ ಠಾಣೆಯಲ್ಲೇ ಕುಳಿತು ಬೆದರಿಕೆ ಆಗುವಂತಹ ವಾಯ್ಸ್​ ಮೆಸೇಜ್​ ಕಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

‘ಸೀನಿಯರ್​ಗಳಿಗೆ ಹಣ ಕೊಡಲು ವಾಹಿನಿಯವರು ಹೇಳಿರಲಿಲ್ಲ. ಯಾಕೆಂದರೆ ಅವರಿಗೆ ತಿಂಗಳ ಪೇಮೆಂಟ್​ ಇರುತ್ತಿತ್ತು’ ಎಂದು ಸೋಮಶೇಖರ್​ ಹೇಳಿದ್ದಾರೆ. ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಯನಾ ಮತ್ತು ಸೋಮಶೇಖರ್​ ನಡುವೆ ಕಿರಿಕ್​ ಆಗಿದೆ.

(ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…)

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:33 am, Mon, 21 November 22

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?