AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ, ನಿಂದನೆ ಆರೋಪ; ಹಾಸ್ಯ ನಟಿ ನಯನಾ ವಿರುದ್ಧ ದೂರು ನೀಡಿದ ನಟ ಸೋಮಶೇಖರ್​

Comedy Actress Nayana: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಯನಾ ಮತ್ತು ಸೋಮಶೇಖರ್​ ನಡುವೆ ಕಿರಿಕ್​ ಆಗಿದೆ. ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೀವ ಬೆದರಿಕೆ, ನಿಂದನೆ ಆರೋಪ; ಹಾಸ್ಯ ನಟಿ ನಯನಾ ವಿರುದ್ಧ ದೂರು ನೀಡಿದ ನಟ ಸೋಮಶೇಖರ್​
ನಯನಾ, ಸೋಮಶೇಖರ್
TV9 Web
| Edited By: |

Updated on:Nov 21, 2022 | 10:33 AM

Share

ಖಾಸಗಿ ಮನರಂಜನಾ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಕಾಮಿಡಿಯನ್ ಆಗಿ ಗುರುತಿಸಿಕೊಂಡ ನಟ ಸೋಮಶೇಖರ್​ ಅವರಿಗೆ ಹಾಸ್ಯ ನಟಿ ನಯನಾ ಅವರು ಜೀವ ಬೆದರಿಕೆ (Threat) ಹಾಕಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಕುರಿತು ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ (RR Nagar Police station) ದೂರು ದಾಖಲಾಗಿದೆ. ತಮಗೆ ನಯನಾ (Comedy Actress Nayana) ಅವರು ಕೆಟ್ಟದಾಗಿ ನಿಂದಿಸಿ ವಾಯ್ಸ್​ ಮೆಸೇಜ್​ ಕಳಿಸಿದ್ದಾರೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ನಟ ಸೋಮಶೇಖರ್​ ಅವರು ದೂರಿನಲ್ಲಿ ತಿಳಿಸಿದ್ದಾರೆ. ‘ಇನ್ಮುಂದೆ ನಯನಾ ನಮ್ಮ ತಂಟೆಗೆ ಬಾರದಂತೆ ಅವರಿಗೆ ತಿಳುವಳಿಕೆ ನೀಡಿ ಹಾಗೂ ನಮ್ಮ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿ’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕಾಮಿಡಿ ಕಾರ್ಯಕ್ರಮದ 2ನೇ ರನ್ನರ್​ ಅಪ್​ ಆಗಿದ್ದ ಸೋಮಶೇಖರ್​ ಅವರ ತಂಡಕ್ಕೆ 3 ಲಕ್ಷ ರೂಪಾಯಿ ಬಹುಮಾನ ಹಣ ಬಂದಿತ್ತು. ತಂಡದಲ್ಲಿ ಇದ್ದ ಸೀನಿಯರ್​ಗಳಿಗೂ ಬಹುಮಾನದ ಹಣದಲ್ಲಿ ಪಾಲು ನೀಡಬೇಕು ಎಂದು ನಯನಾ ಅವರು ಸೋಮಶೇಖರ್​ಗೆ ಕರೆ ಮಾಡಿ ಒತ್ತಾಯ ಹೇರಿದ್ದಾರೆ. ಅಲ್ಲದೇ ಪೊಲೀಸ್​ ಠಾಣೆಯಲ್ಲೇ ಕುಳಿತು ಬೆದರಿಕೆ ಆಗುವಂತಹ ವಾಯ್ಸ್​ ಮೆಸೇಜ್​ ಕಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

‘ಸೀನಿಯರ್​ಗಳಿಗೆ ಹಣ ಕೊಡಲು ವಾಹಿನಿಯವರು ಹೇಳಿರಲಿಲ್ಲ. ಯಾಕೆಂದರೆ ಅವರಿಗೆ ತಿಂಗಳ ಪೇಮೆಂಟ್​ ಇರುತ್ತಿತ್ತು’ ಎಂದು ಸೋಮಶೇಖರ್​ ಹೇಳಿದ್ದಾರೆ. ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಯನಾ ಮತ್ತು ಸೋಮಶೇಖರ್​ ನಡುವೆ ಕಿರಿಕ್​ ಆಗಿದೆ.

(ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…)

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:33 am, Mon, 21 November 22

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?