AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ, ನಿಂದನೆ ಆರೋಪ; ಹಾಸ್ಯ ನಟಿ ನಯನಾ ವಿರುದ್ಧ ದೂರು ನೀಡಿದ ನಟ ಸೋಮಶೇಖರ್​

Comedy Actress Nayana: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಯನಾ ಮತ್ತು ಸೋಮಶೇಖರ್​ ನಡುವೆ ಕಿರಿಕ್​ ಆಗಿದೆ. ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೀವ ಬೆದರಿಕೆ, ನಿಂದನೆ ಆರೋಪ; ಹಾಸ್ಯ ನಟಿ ನಯನಾ ವಿರುದ್ಧ ದೂರು ನೀಡಿದ ನಟ ಸೋಮಶೇಖರ್​
ನಯನಾ, ಸೋಮಶೇಖರ್
TV9 Web
| Updated By: ಮದನ್​ ಕುಮಾರ್​|

Updated on:Nov 21, 2022 | 10:33 AM

Share

ಖಾಸಗಿ ಮನರಂಜನಾ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಕಾಮಿಡಿಯನ್ ಆಗಿ ಗುರುತಿಸಿಕೊಂಡ ನಟ ಸೋಮಶೇಖರ್​ ಅವರಿಗೆ ಹಾಸ್ಯ ನಟಿ ನಯನಾ ಅವರು ಜೀವ ಬೆದರಿಕೆ (Threat) ಹಾಕಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಕುರಿತು ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ (RR Nagar Police station) ದೂರು ದಾಖಲಾಗಿದೆ. ತಮಗೆ ನಯನಾ (Comedy Actress Nayana) ಅವರು ಕೆಟ್ಟದಾಗಿ ನಿಂದಿಸಿ ವಾಯ್ಸ್​ ಮೆಸೇಜ್​ ಕಳಿಸಿದ್ದಾರೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ನಟ ಸೋಮಶೇಖರ್​ ಅವರು ದೂರಿನಲ್ಲಿ ತಿಳಿಸಿದ್ದಾರೆ. ‘ಇನ್ಮುಂದೆ ನಯನಾ ನಮ್ಮ ತಂಟೆಗೆ ಬಾರದಂತೆ ಅವರಿಗೆ ತಿಳುವಳಿಕೆ ನೀಡಿ ಹಾಗೂ ನಮ್ಮ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿ’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕಾಮಿಡಿ ಕಾರ್ಯಕ್ರಮದ 2ನೇ ರನ್ನರ್​ ಅಪ್​ ಆಗಿದ್ದ ಸೋಮಶೇಖರ್​ ಅವರ ತಂಡಕ್ಕೆ 3 ಲಕ್ಷ ರೂಪಾಯಿ ಬಹುಮಾನ ಹಣ ಬಂದಿತ್ತು. ತಂಡದಲ್ಲಿ ಇದ್ದ ಸೀನಿಯರ್​ಗಳಿಗೂ ಬಹುಮಾನದ ಹಣದಲ್ಲಿ ಪಾಲು ನೀಡಬೇಕು ಎಂದು ನಯನಾ ಅವರು ಸೋಮಶೇಖರ್​ಗೆ ಕರೆ ಮಾಡಿ ಒತ್ತಾಯ ಹೇರಿದ್ದಾರೆ. ಅಲ್ಲದೇ ಪೊಲೀಸ್​ ಠಾಣೆಯಲ್ಲೇ ಕುಳಿತು ಬೆದರಿಕೆ ಆಗುವಂತಹ ವಾಯ್ಸ್​ ಮೆಸೇಜ್​ ಕಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

‘ಸೀನಿಯರ್​ಗಳಿಗೆ ಹಣ ಕೊಡಲು ವಾಹಿನಿಯವರು ಹೇಳಿರಲಿಲ್ಲ. ಯಾಕೆಂದರೆ ಅವರಿಗೆ ತಿಂಗಳ ಪೇಮೆಂಟ್​ ಇರುತ್ತಿತ್ತು’ ಎಂದು ಸೋಮಶೇಖರ್​ ಹೇಳಿದ್ದಾರೆ. ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಯನಾ ಮತ್ತು ಸೋಮಶೇಖರ್​ ನಡುವೆ ಕಿರಿಕ್​ ಆಗಿದೆ.

(ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…)

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:33 am, Mon, 21 November 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!