AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kanupriya Passed Away: ಟಿವಿ ಆ್ಯಂಕರ್​, ಕಿರುತೆರೆ ನಟಿ ಕನುಪ್ರಿಯಾ ಕೊರೊನಾಗೆ ಬಲಿ

Kanupriya Passed Away: ಕೊರೊನಾ ವೈರಸ್ ಭಾರತದಲ್ಲಿ ಮಿತಿ ಮೀರಿ ಹರಡುತ್ತಿದೆ. ಇದರಿಂದ ಚಿತ್ರರಂಗದ ಸಾಕಷ್ಟು ನಿರ್ದೇಶಕರು ಹಾಗೂ ನಟರು ಕೊರೊನಾಗೆ ಬಲಿಯಾಗುತ್ತಿದ್ದಾರೆ.

Kanupriya Passed Away: ಟಿವಿ ಆ್ಯಂಕರ್​, ಕಿರುತೆರೆ ನಟಿ ಕನುಪ್ರಿಯಾ ಕೊರೊನಾಗೆ ಬಲಿ
ಕಣುಪ್ರಿಯಾ
ರಾಜೇಶ್ ದುಗ್ಗುಮನೆ
|

Updated on: May 02, 2021 | 6:47 PM

Share

ಚಿತ್ರರಂಗದ ಸಾಕಷ್ಟು ಜನರನ್ನು ಕೊರೊನಾ ವೈರಸ್ ಬಲಿ ತೆಗೆದುಕೊಳ್ಳುತ್ತಿದೆ. ಈಗ ಕಿರುತೆರೆ ನಟಿ ಹಾಗೂ ದೂರದರ್ಶನ​ ಆ್ಯಂಕರ್​ ಕನುಪ್ರಿಯಾ ಕೊವಿಡ್​ಗೆ ಬಲಿಯಾಗಿದ್ದಾರೆ. ಅವರು ಮೇರಿ ಕಹಾನಿ, ತೆಸು ಕೆ ಫೂಲ್​ ಸೇರಿ ಸಾಕಷ್ಟು ಶೋಗಳನ್ನು ನಡೆಸಿಕೊಟ್ಟಿದ್ದರು. ಬ್ರಹ್ಮ ಕುಮಾರೀಸ್​ ಶೋಗಳನ್ನು ನಡೆಸಿಕೊಡುವ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದರು.

ಬ್ರಹ್ಮ ಕುಮಾರಿಯ ಸಿಸ್ಟರ್​ ಬಿಕೆ ಶಿವಾನಿ ಅವರು ಟ್ವಿಟರ್​ ಮೂಲಕ ಈ ವಿಚಾರ ಬಹಿರಂಗ ಮಾಡಿದ್ದಾರೆ. ಕನುಪ್ರಿಯಾ ಅವರು ಕೊವಿಡ್​ಗೆ ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಕನುಪ್ರಿಯಾ ಅವರ ಸಾವಿಗೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

ಇತ್ತಿಚೆಗೆ ಕನುಪ್ರಿಯಾ ಅವರಿಗೆ ಕೊವಿಡ್​ ಸೋಂಕು ಅಂಟಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆ ವೈದ್ಯರು ನೀಡಿದ ಚಿಕಿತ್ಸೆ ಫಲಕಾರಿಯಾಗಿಲ್ಲ. ಪರಿಣಾಮ ಶನಿವಾರ (ಮೇ 2) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕನುಪ್ರಿಯಾ ಕಲಾವಿದೆಯಾಗಿ ಬಣ್ಣದ ಬದುಕು ಆರಂಭಿಸಿದವರು. ಸುಮಾರು 80ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. 50 ಟೆಲಿಫಿಲ್ಮ್​ಗಳಲ್ಲಿ ಬಣ್ಣ ಹಚ್ಚಿದ್ದಾರೆ. ನಂತರ ಅವರು ಆ್ಯಂಕರಿಂಗ್​ ಮೂಲಕ ಎಲ್ಲರ ಗಮನ ಸೆಳೆದರು. ಹೀಗಾಗಿ ಅವರಿಗೆ ನಟಿಸಲು ಸಾಕಷ್ಟು ಆಫರ್​ಗಳು ಬಂದವು.

ಕೊರೊನಾ ವೈರಸ್ ಭಾರತದಲ್ಲಿ ಮಿತಿ ಮೀರಿ ಹರಡುತ್ತಿದೆ. ಇದರಿಂದ ಚಿತ್ರರಂಗದ ಸಾಕಷ್ಟು ನಿರ್ದೇಶಕರು ಹಾಗೂ ನಟರು ಕೊರೊನಾಗೆ ಬಲಿಯಾಗುತ್ತಿದ್ದಾರೆ. ಇದು ಚಿತ್ರರಂಗದ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆ.

ಇದನ್ನೂ ಓದಿ: ಖ್ಯಾತ ನಿರ್ದೇಶಕ-ಸಿನಿಮಾಟೋಗ್ರಫರ್ ಕೆ.ವಿ.ಆನಂದ್ ಅವರು ಕೊರೊನಾ ದಿಂದ ನಿಧನರಾಗಿದ್ದಾರೆ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!