AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಪ್ರಸಾರಕ್ಕೂ ಮುನ್ನ ಬಿಗ್ ಬಾಸ್​ಗೆ ಸೆನ್ಸಾರ್ ಮಾಡೋದು ಕಡ್ಡಾಯ? ಹೈಕೋರ್ಟ್ ಮಹತ್ವದ ಆದೇಶ

‘ಬಿಗ್ ಬಾಸ್’ ಸ್ಪರ್ಧಿಗಳು ಕೆಲವೊಮ್ಮೆ ಎಲ್ಲೆ ಮೀರುವುದುಂಟು. ಇದನ್ನು ಪ್ರಸಾರ ಮಾಡುವ ಬಗ್ಗೆ ಅನೇಕರ ಆಕ್ಷೇಪ ಇದೆ. ಹೀಗಾಗಿ, ‘ಬಿಗ್ ಬಾಸ್ ತೆಲುಗು ಸೀಸನ್ 7’ ಆರಂಭಕ್ಕೆ ತಡೆನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಇನ್ಮುಂದೆ ಪ್ರಸಾರಕ್ಕೂ ಮುನ್ನ ಬಿಗ್ ಬಾಸ್​ಗೆ ಸೆನ್ಸಾರ್ ಮಾಡೋದು ಕಡ್ಡಾಯ? ಹೈಕೋರ್ಟ್ ಮಹತ್ವದ ಆದೇಶ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Jul 27, 2023 | 2:27 PM

Share

ಕಿರುರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್​ಗೆ ವಿವಾದಗಳು ಹೊಸದಲ್ಲ. ಈ ಶೋ ಆರಂಭ ಆಗುತ್ತದೆ ಎಂದಾಗ ಸಾಕಷ್ಟು ಸುದ್ದಿ ಆಗುತ್ತದೆ. ಈಗ ‘ತೆಲುಗು ಬಿಗ್ ಬಾಸ್ ಸೀಸನ್ 7’ (Bigg Boss) ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಹೀಗಿರುವಾಗಲೇ ಈ ರಿಯಾಲಿಟಿ ಶೋ ನಿರೂಪಕ ಅಕ್ಕಿನೇನಿ ನಾಗಾರ್ಜುನ ಹಾಗೂ ಈ ಶೋ ಪ್ರಸಾರ ಮಾಡುವ ಮಾ ಟಿವಿಗೆ ಆಂಧ್ರಪ್ರದೇಶ ಹೈಕೋರ್ಟ್ (High Court) ನೋಟಿಸ್ ಜಾರಿ ಮಾಡಿದೆ. ಇದು ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ.

‘ಬಿಗ್ ಬಾಸ್’ ಸ್ಪರ್ಧಿಗಳು ಕೆಲವೊಮ್ಮೆ ಎಲ್ಲೆ ಮೀರುವುದುಂಟು. ಇದನ್ನು ಪ್ರಸಾರ ಮಾಡುವ ಬಗ್ಗೆ ಅನೇಕರ ಆಕ್ಷೇಪ ಇದೆ. ಹೀಗಾಗಿ, ‘ಬಿಗ್ ಬಾಸ್ ತೆಲುಗು ಸೀಸನ್ 7’ ಆರಂಭಕ್ಕೆ ತಡೆನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ಮಾಡಿರುವ ಹೈಕೋರ್ಟ್​, ಈ ಬಗ್ಗೆ ಸೂಕ್ತ ಉತ್ತರ ನೀಡುವಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಮಾ ಟಿವಿ ಹಾಗೂ ನಾಗಾರ್ಜುನಗೆ ನಿರ್ದೇಶಿಸಿದೆ. ಈ ಕುರಿತ ಮುಂದಿನ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಲಾಗಿದೆ.

ಅಶ್ಲೀಲತೆಯನ್ನು ಉತ್ತೇಜಿಸುವ ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಿವೆ ಎಂದು ಆರೋಪಿಸಿ ತೆಲುಗು ಯುವಶಕ್ತಿ ಅಧ್ಯಕ್ಷ, ನಿರ್ಮಾಪಕ ಕೇತಿರೆಡ್ಡಿ, ಜಗದೀಶ್ವರ ರೆಡ್ಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿದಾರರ ಪರವಾಗಿ ವಕೀಲ ಗುಂಡಾಲ ಶಿವಪ್ರಸಾದ್ ರೆಡ್ಡಿ ವಾದ ಮಂಡಿಸಿದರು. ‘ಸೆನ್ಸಾರ್ ಇಲ್ಲದೇ ಈ ಕಾರ್ಯಕ್ರಮ ಪ್ರಸಾರವಾಗುತ್ತಿವೆ. ಇಂತಹ ಕಾರ್ಯಕ್ರಮಗಳನ್ನು ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಪ್ರಸಾರ ಮಾಡಬೇಕು’ ಎಂದು ಕೋರಿದರು.

ಇದಕ್ಕೆ ಉತ್ತರಿಸಿದ ಮಾ ಟಿವಿ ಪರ ವಕೀಲರು, ‘ಬಿಗ್ ಬಾಸ್ ಶೋ ಪ್ರಸಾರಕ್ಕೂ ಮುನ್ನ ಸೆನ್ಸಾರ್ ಮಾಡಬೇಕು ಎಂಬುದಿಲ್ಲ. ಪ್ರಸಾರವಾದ ನಂತರ ಆಕ್ಷೇಪವಿದ್ದಲ್ಲಿ ದೂರು ದಾಖಲಿಸಬಹುದು. ಕೇಬಲ್ ಟೆಲಿವಿಷನ್ ನೆಟ್ ವರ್ಕ್ ಕಾಯ್ದೆ ಪ್ರಕಾರ ದೂರುಗಳನ್ನು ಸಲ್ಲಿಸಲು ಅವಕಾಶ ಇದೆ’ ಎಂದರು.

ಇದನ್ನೂ ಓದಿ: ಹಲವು ತಿಂಗಳ ಬಳಿಕ ಒಂದಾದ ಬಿಗ್ ಬಾಸ್ ಗ್ಯಾಂಗ್; ರಾಕೇಶ್ ಮಾಡಿದ ಅವಾಂತರಕ್ಕೆ ಬೇಸರಗೊಂಡ ದಿವ್ಯಾ ಉರುಡುಗ  

ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ‘ಟಿವಿಯ ಕಾರ್ಯಕ್ರಮ ಪ್ರಸಾರಕ್ಕೂ ಮುನ್ನ ಸೆನ್ಸಾರ್ ಇಲ್ಲ ಎಂದರೆ ಹೇಗೆ? ಈ ವಿಚಾರದಲ್ಲಿ ಕೇಂದ್ರ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಪ್ರಸಾರವಾದ ನಂತರ ಬಂದಿರುವ ದೂರುಗಳ ಬಗ್ಗೆ ಕ್ರಮ ಕೈಗೊಂಡು ಏನು ಪ್ರಯೋಜನ? ಹಾಗೆ ಮಾಡೋದು ಪೋಸ್ಟ್ ಮಾರ್ಟಂ. ಪ್ರತಿ ಚಾನೆಲ್​ನಲ್ಲಿ ಅಶ್ಲೀಲ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದರೆ ನಿಗಾ ಇಡಬೇಕಲ್ಲವೇ? ಬಿಗ್ ಬಾಸ್ ಶೋ ಸೆನ್ಸಾರ್ ಮಾಡುವ ವಿಚಾರದಲ್ಲಿ ಕೇಂದ್ರಕ್ಕೆ ಸೂಕ್ತ ಸೂಚನೆ ನೀಡುವ ವಿಚಾರವನ್ನು ಪರಿಗಣಿಸುವುದಾಗಿ’ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು