AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಪುಟ್ನಂಜ-ಪುಟ್ಮಲ್ಲಿ ಮೋಡಿ; ಉಮಾಶ್ರೀ ಜತೆ ರವಿಚಂದ್ರನ್

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಜನಮೆಚ್ಚುಗೆ ಗಳಿಸಿ ಮುನ್ನುಗ್ಗುತ್ತಿದೆ. ಈ ಕಥೆಯ ಪ್ರಮುಖ ಘಟ್ಟದಲ್ಲಿ ಕೌತುಕ ಹೆಚ್ಚಾಗಿದೆ. ‘ಕ್ರೇಜಿ ಸ್ಟಾರ್​’ ರವಿಚಂದ್ರನ್ ಕೂಡ ಈ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಪುಟ್ಟಕ್ಕನ ಕಥೆಯಲ್ಲಿ ಪುಟ್ನಂಜ ಬಂದಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಆ ಬಗ್ಗೆ ಇಲ್ಲಿದೆ ವಿವರ..

ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಪುಟ್ನಂಜ-ಪುಟ್ಮಲ್ಲಿ ಮೋಡಿ; ಉಮಾಶ್ರೀ ಜತೆ ರವಿಚಂದ್ರನ್
Umashree, Ravichandran
ಮದನ್​ ಕುಮಾರ್​
|

Updated on: Feb 27, 2025 | 3:00 PM

Share

ಜೀ ಕನ್ನಡ ವಾಹಿನಿಯಲ್ಲಿ ಸಂಜೆ 6.30ಕ್ಕೆ ಪ್ರಸಾರವಾಗುವ ಅತ್ಯಂತ ಯಶಸ್ವಿ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’. ಪ್ರಸಾರದ ಮೊದಲ ವಾರದಲ್ಲಿ ಅತೀ ಹೆಚ್ಚು, ಅಂದರೆ 13.5 ಟಿ.ಆರ್.ಪಿ ಪಡೆದು ಕನ್ನಡಿಗರ ಮನಸುಗಳನ್ನ ಗೆದ್ದ ಖ್ಯಾತಿ ‘ಪುಟ್ಟಕ್ಕನ ಮಕ್ಕಳು’  (Puttakkana Makkalu) ಧಾರಾವಾಹಿಯದು. ಇದೀಗ 900 ಸಂಚಿಕೆಗಳನ್ನು ಪೂರೈಸಿ ಸಾವಿರ ಸಂಚಿಕೆಗಳತ್ತ ಹೆಜ್ಜೆ ಇಡುತ್ತಿದ್ದರೂ ತನ್ನ ಜನಪ್ರಿಯತೆಯನ್ನು ಕಳೆದುಕೊಳ್ಳದೆ ಮುನ್ನುಗ್ಗುತ್ತಿದೆ. ‘ಹೆಣ್ಣು ಮಕ್ಕಳ ಹೆತ್ತೋರು ಎಲ್ಲ ದೇವರಿಗೂ ದೊಡ್ಡೋರು’ ಎನ್ನುವ ಈ ಧಾರಾವಾಹಿಯ ಹಾಡಿನ ಸಾಲು ಪುಟ್ಟಕ್ಕನ ಕಥೆಯ ಸಾರವನ್ನು ತೋರಿಸುತ್ತದೆ.

ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಗಂಡ ಗೋಪಾಲ ಪುಟ್ಟಕ್ಕನನ್ನು ಬಿಟ್ಟು ಹೋಗುತ್ತಾನೆ. ತಂದೆ ಇಲ್ಲದೆ ತಬ್ಬಲಿಯಾದ ಮೂರು ಹೆಣ್ಣು ಮಕ್ಕಳನ್ನು ಹೆಗಲಿಗೆ ಕಟ್ಟಿಕೊಂಡು, ಅವರಿಗೆ ಬದುಕಿನ ದಾರಿ ತೋರಿಸಲು ಹೋರಾಡುವ ದಿಟ್ಟ ಮಹಿಳೆಯ ಕಥೆಯೇ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ. ಧಾರಾವಾಹಿಯ ಮುಖ್ಯ ಪಾತ್ರವಾದ ‘ಪುಟ್ಟಕ್ಕ’ನ ಪಾತ್ರವನ್ನು ಕನ್ನಡದ ಖ್ಯಾತ ನಟಿ ಉಮಾಶ್ರೀ ಅವರು ಮಾಡುತ್ತಿದ್ದಾರೆ. ಪುಟ್ಟಕ್ಕನಿಗೆ ಜೊತೆಯಾಗಿ ನಿಂತವರು ಮಗಳು ಸಹನಾ, ಸ್ನೇಹಾ, ಸುಮಾ. ಗೆಳತಿ ಬಂಗಾರಮ್ಮ. ಅಳಿಯ ಕಂಠಿ ಮತ್ತಿತರ ಪಾತ್ರ.

ಇದೀಗ ಈ ಧಾರಾವಾಹಿ ಮಹತ್ತರ ಘಟ್ಟದಲ್ಲಿ ಬಂದು ನಿಂತಿದೆ. ತನ್ನ ಆಸೆ, ಕನಸಿನಂತೆ ಜಿಲ್ಲಾಧಿಕಾರಿ ಆಗಿದ್ದ ಸ್ನೇಹಾ, ರಸ್ತೆ ಅಪಘಾತದಲ್ಲಿ ತೀರಿಕೊಂಡಿದ್ದಳು. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಆಗಿದ್ದ ಅವಳ ಮೇಲೆ ನಿಧನದ ಬಳಿಕವೂ ಅವ್ಯವಹಾರದ ಆರೋಪ ಬಂದಿದ್ದು, ಮಗಳ ಪರವಾಗಿ ಪುಟ್ಟಕ್ಕ ಹೋರಾಟಕ್ಕೆ ಮುಂದಾಗಿದ್ದಾಳೆ. ಮಗಳು ಸ್ನೇಹಾ ಮೇಲಿನ ಸುಳ್ಳು ಆರೋಪಕ್ಕೆ ಪ್ರತಿಯಾಗಿ ಪಾದಯಾತ್ರೆ ಮಾಡುತ್ತಿದ್ದು, ನ್ಯಾಯಕ್ಕಾಗಿ ಹಂಬಲಿಸುತ್ತಿದ್ದಾಳೆ.

ಇದನ್ನೂ ಓದಿ
Image
ಸೀರಿಯಲ್ ಟಿಆರ್​ಪಿಯಲ್ಲಿ ಈ ಧಾರಾವಾಹಿಯೇ ನಂಬರ್ 1; ದಾಖಲೆಗಳೆಲ್ಲ ಉಡೀಸ್
Image
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ನಿಲ್ಲಿಸಲು ಬೇಡಿಕೆ ಇಟ್ಟ ವೀಕ್ಷಕರು; ಕಾರಣ?
Image
ಸಿಹಿಯ ಆತ್ಮ ಹಿಡಿದುಕೊಂಡ ಅಘೋರಿ; ಪ್ರಯಾಗ್​ರಾಜ್​​ನಲ್ಲಿ ‘ಸೀತಾ ರಾಮ’ ತಂಡ
Image
ತ್ರಿವಿಕ್ರಂ ಪಾಲಿಗೆ ಒಲಿದ ಅದೃಷ್ಟ; ಹೊಸ ಸೀರಿಯಲ್​ಗೆ ಹೀರೋ ಆದ ನಟ

ಇದನ್ನೂ ಓದಿ: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಗುಡ್​ಬೈ ಹೇಳಿದ ಸಂಜನಾ ಈಗೇನು ಮಾಡ್ತಿದ್ದಾರೆ? 

ಮಗಳಿಗೆ ಅಂಟಿದ ಕಳಂಕ ತೊಳೆಯುವ ಈ ಕಾರ್ಯಕ್ಕೆ ಯಾರಿಂದಲೂ ನಿರೀಕ್ಷಿತ ಬೆಂಬಲ ಸಿಕ್ಕಿಲ್ಲ. ಹೀಗೆ ಬೇಸತ್ತಿರುವ ಪುಟ್ಟಕ್ಕನಿಗೆ ಸಾಥ್ ಕೊಡಲು ‘ಕ್ರೇಜಿ ಸ್ಟಾರ್ ರವಿಚಂದ್ರನ್’ ಮುಂದಾಗಿದ್ದಾರೆ. ಜಸ್ಟಿಸ್ ಫಾರ್ ಸ್ನೇಹಾ ಹೋರಾಟಕ್ಕೆ ಪುಟ್ನಂಜ ಕೈ ಜೋಡಿಸಿದ್ದಾರೆ. ಪುಟ್ನಂಜ ಸಿನಿಮಾದಲ್ಲಿ ಮೋಡಿ ಮಾಡಿದ್ದ ಉಮಾಶ್ರೀ ಮತ್ತು ರವಿಚಂದ್ರನ್, ಇದೀಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೂಲಕ ಕಿರುತೆರೆಯಲ್ಲಿ ಒಂದಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರವಿಚಂದ್ರನ್ ಅವರಿಂದ ಪುಟ್ಟಕ್ಕನ ಹೋರಾಟಕ್ಕೆ ನ್ಯಾಯ ಸಿಗುತ್ತಾ? ಮಗಳಿಗೆ ಅಂಟಿದ ಕಳಂಕ ಹೋಗುತ್ತಾ ಎನ್ನೋದನ್ನು ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!