AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravichandran: ಕ್ರೇಜಿಸ್ಟಾರ್ ರವಿಚಂದ್ರನ್ ಕಿಡ್ನಾಪ್; ಕಾರಣ ಊಹಿಸುತ್ತಿದ್ದಾರೆ ನೆಟ್ಟಿಗರು!

ಕ್ರೇಜಿ ಸ್ಟಾರ್ ರವಿಚಂದ್ರನ್ ಅಪಹರಣಕ್ಕೆ ಒಳಗಾಗಿದ್ದಾರೆ. ವೈರಲ್ ಆಗುತ್ತಿರುವ ಈ ವಿಡಿಯೋಕ್ಕೆ ಒಂದು ವಿಶೇಷ ಕಾರಣವಿದೆ ಎನ್ನುವುದು ನೆಟ್ಟಿಗರ ಊಹೆ. ಏನದು? ಇಲ್ಲಿದೆ ಹೊಸ ಸಮಾಚಾರ.

Ravichandran: ಕ್ರೇಜಿಸ್ಟಾರ್ ರವಿಚಂದ್ರನ್ ಕಿಡ್ನಾಪ್; ಕಾರಣ ಊಹಿಸುತ್ತಿದ್ದಾರೆ ನೆಟ್ಟಿಗರು!
ರವಿಚಂದ್ರನ್
TV9 Web
| Edited By: |

Updated on: Feb 09, 2022 | 8:12 PM

Share

ಕನ್ನಡ ಚಿತ್ರರಂಗದ ಹಿರಿಯ ನಟ ಕ್ರೇಜಿ ಸ್ಟಾರ್ ರವಿಚಂದ್ರನ್ (V Ravichandran) ಈಗಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಅವರು ಇದೀಗ ಕಿರುತೆರೆಯಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಇತ್ತೀಚೆಗೆ ಅವರ ಅಪಹರಣದ ವಿಡಿಯೋವೊಂದು ವೈರಲ್ ಆಗಿದೆ! ಅರೇ! ರವಿಚಂದ್ರನ್ ನಿಜವಾಗಿಯೂ ಕಿಡ್ನಾಪ್ ಆದರೇ? ಎಂದು ಯೋಚಿಸಬೇಡಿ. ಇದು ವಾಹಿನಿಯೊಂದರ ಪ್ರೋಮೋ. ಹೌದು. ಜೀ ಕನ್ನಡ ವಾಹಿನಿ ಕ್ರಿಯಾತ್ಮಕವಾಗಿ ಹೊಸ ಪ್ರೋಮೋ ತಯಾರಿಸಿದೆ. ಇದರಲ್ಲಿ ರವಿಚಂದ್ರನ್ ಅವರನ್ನು ಕಿಡ್ನಾಪ್ ಮಾಡುವುದನ್ನು ತೋರಿಸಲಾಗಿದೆ. ವೀಕ್ಷಕರಲ್ಲಿ ಕುತೂಹಲ ಉಳಿಸುವ ದೃಷ್ಟಿಯಿಂದ ಸಂಪೂರ್ಣ ಸಸ್ಪೆನ್ಸ್ ಅನ್ನು ವಾಹಿನಿ ಉಳಿಸಿಕೊಂಡಿದೆ. ವಿಡಿಯೋಗೆ ಕ್ಯಾಪ್ಶನ್ ನೀಡಿರುವ ವಾಹಿನಿ, ‘ಕ್ರೇಜಿ಼ Starನೇ ಕಿಡ್ನ್ಯಾಪ್! ಯಾರಿರಬಹುದು? ಯಾಕಿರಬಹುದು? ಉದ್ದೇಶ ಏನು?’ ಎಂದು ಬರೆದುಕೊಂಡಿದೆ. ಪ್ರೋಮೋ ಸದ್ಯ ವೈರಲ್ ಆಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.

ಜೀ ಕನ್ನಡ ವಾಹಿನಿ ಬಿಡುಗಡೆ ಮಾಡಿರುವ ರವಿಚಂದ್ರನ್ ಕಿಡ್ನಾಪ್ ಪ್ರೋಮೋ ಇಲ್ಲಿದೆ:

ಪ್ರೇಕ್ಷಕರ ಊಹೆ ಏನು?

ರವಿಚಂದ್ರನ್ ಈ ಹಿಂದೆ ಡಾನ್ಸಿಂಗ್ ರಿಯಾಲಿಟಿ ಶೋ ಒಂದರ ಜಡ್ಜ್ ಆಗಿದ್ದರು. ಇದೀಗ ರವಿಚಂದ್ರನ್ ‘ಡ್ರಾಮಾ ಜ್ಯೂನಿಯರ್ಸ್​’ನ (Drama Juniors) ಮುಂದಿನ ಸೀಸನ್​ಗೆ ನಿರ್ಣಾಯಕರಾಗಿ ರವಿಚಂದ್ರನ್ ಕಾಣಿಸಿಕೊಳ್ಳಲಿದ್ದಾರೆ ಎಂದು ನೆಟ್ಟಿಗರು ಊಹಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಪ್ರೋಮೋದಲ್ಲಿ ವಾಹಿನಿ ನೀಡಿರುವ ಸಣ್ಣ ಸುಳಿವನ್ನು ಉದಾಹರಿಸಿದ್ದಾರೆ. ಪ್ರೋಮೋದಲ್ಲಿ ರವಿಚಂದ್ರನ್ ಓಡಾಟದ ಕುರಿತು ಸಂವಹನ ನಡೆಸುತ್ತಿರುವುದು ಮಕ್ಕಳು. ಆದ್ದರಿಂದ ಮಕ್ಕಳೇ ಕಿಡ್ನಾಪ್ ಮಾಡಿದ್ದಾರೆ. ರಿಯಾಲಿಟಿ ಶೋಗೆ ಕರೆದೊಯ್ಯುವಂತೆ ಪ್ರೋಮೋ ಮೂಡಿಬರಬಹುದು. ಆದ್ದರಿಂದ ರವಿಚಂದ್ರನ್ ಡ್ರಾಮಾ ಜ್ಯೂನಿಯರ್ಸ್​​ನಲ್ಲಿ ಕಾಣಿಸಿಕೊಳ್ಳಬಹುದು ಎನ್ನುವುದು ಪ್ರೇಕ್ಷಕರ ವಾದ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

ಆದರೆ ಪ್ರೋಮೋದಲ್ಲಿ ಇದಿನ್ನೂ ಮುಂದುವರೆಯುತ್ತದೆ ಎಂದು ವಾಹಿನಿ ಕುತೂಹಲ ಉಳಿಸಿಕೊಂಡಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಲಿದೆ. ಚಿತ್ರಗಳ ವಿಷಯಕ್ಕೆ ಬಂದರೆ, ರವಿಚಂದ್ರನ್ ‘ದೃಶ್ಯ 2’ ಹಾಗೂ ‘ಕನ್ನಡಿಗ’ದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ:

Allu Arjun: ಅಲ್ಲು ಅರ್ಜುನ್ ‘ಪುಷ್ಪ’ಕ್ಕೆ ತಯಾರಾಗಿದ್ದು ಹೇಗೆ? ಇಲ್ಲಿದೆ ತೆರೆಯ ಹಿಂದಿನ ವಿಶೇಷ ವಿಡಿಯೋ

ತಾಯಿಯಾಗುತ್ತಿರುವ ಕಾಜಲ್​ಗೂ ಎದುರಾಯ್ತು ಬಾಡಿ ಶೇಮಿಂಗ್; ಕೀಳು ಮನಸ್ಥಿತಿಗಳಿಗೆ ನಟಿ ಕೊಟ್ಟ ಉತ್ತರ ಹೇಗಿತ್ತು ಗೊತ್ತಾ?

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?