AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನಂಜಯ್ ಪಿಯುಸಿಯಲ್ಲಿ ತೆಗೆದ ಅಂಕ ಎಷ್ಟು? ‘ವೀಕೆಂಡ್ ವಿತ್ ರಮೇಶ್’​ನಲ್ಲಿ ಮಾಹಿತಿ ರಿವೀಲ್

ಧನಂಜಯ್ ಅವರು ಪಿಯುಸಿ ಓದಿದ್ದು ಮೈಸೂರಿನಲ್ಲಿ. ಮರಿ ಮಲ್ಲಪ್ಪ ಕಾಲೇಜಿನಲ್ಲಿ ವಿಜ್ಞಾನ ವಿಷಯ ಓದಿದ್ದರು. ಓದೋಕೆ ಒಳ್ಳೆಯ ವಾತಾವರಣ ಇದೆ ಎಂದು ಅವರನ್ನು ಈ ಕಾಲೇಜಿಗೆ ತಂದೆ ಸೇರಿಸಿದ್ದರು.

ಧನಂಜಯ್ ಪಿಯುಸಿಯಲ್ಲಿ ತೆಗೆದ ಅಂಕ ಎಷ್ಟು? ‘ವೀಕೆಂಡ್ ವಿತ್ ರಮೇಶ್’​ನಲ್ಲಿ ಮಾಹಿತಿ ರಿವೀಲ್
ಧನಂಜಯ್
ರಾಜೇಶ್ ದುಗ್ಗುಮನೆ
|

Updated on:Apr 17, 2023 | 9:28 AM

Share

‘ವೀಕೆಂಡ್ ವಿತ್ ರಮೇಶ್ ಸೀಸನ್​ 5’ ಆರಂಭ ಆಗಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರತಿ ಶನಿವಾರ ಹಾಗೂ ಭಾನುವಾರ ಶೋ ಪ್ರಸಾರ ಕಾಣುತ್ತಿದೆ. ಕಳೆದ ನಾಲ್ಕು ಸೀಸನ್​ನಲ್ಲಿ ಸಾಕಷ್ಟು ಸಾಧಕರು ಈ ಶೋಗೆ ಬಂದು ಹೋಗಿದ್ದಾರೆ. ಈ ಸೀಸನ್​ನಲ್ಲೂ ಅನೇಕ ಸಾಧಕರು ವೇದಿಕೆ ಏರಿದ್ದಾರೆ. ಧನಂಜಯ್ (Dhananjay) ಕೂಡ ವೀಕೆಂಡ್ ವಿತ್ ರಮೇಶ್ ಎಪಿಸೋಡ್​’ಗೆ ಬಂದಿದ್ದಾರೆ. ಅವರು ತುಂಬಾನೇ ಬ್ರಿಲಿಯಂಟ್ ಸ್ಟೂಡೆಂಟ್ ಆಗಿದ್ದರು. ಈ ವಿಚಾರ ವೀಕೆಂಡ್ ವಿತ್ ರಮೇಶ್ (Weekend With Ramesh) ಎಪಿಸೋಡ್​ನಲ್ಲಿ ರಿವೀಲ್ ಆಗಿದೆ.

ಧನಂಜಯ್ ಅವರು ಪಿಯುಸಿ ಓದಿದ್ದು ಮೈಸೂರಿನಲ್ಲಿ. ಮರಿ ಮಲ್ಲಪ್ಪ ಕಾಲೇಜಿನಲ್ಲಿ ವಿಜ್ಞಾನ ವಿಷಯ ಓದಿದ್ದರು. ಓದೋಕೆ ಒಳ್ಳೆಯ ವಾತಾವರಣ ಇದೆ ಎಂದು ಧನಂಜಯ್ ಅವರನ್ನು ಈ ಕಾಲೇಜಿಗೆ ತಂದೆ ಸೇರಿಸಿದ್ದರು. ‘ಓಡೋ ಕುದುರೆ ಜೊತೆ ನಮ್ಮದೊಂದು ಕುಂಟು ಕುದುರೆ. ಎಲ್ಲರ ಜೊತೆ ಸೇರಿ ಈ ಕುದುರೆ ಓಡಲಿ’ ಎಂದು ಡಾಲಿ ಧನಂಜಯ್ ತಂದೆ ಹೇಳಿದ್ದರಂತೆ. ‘ನಾನು ತುಂಬಾನೇ ಬ್ರಿಲಿಯಂಟ್ ಸ್ಟೂಡೆಂಟ್. ಹಾಗಿದ್ದರೂ, ನನ್ನನ್ನು ಅವರು ಕುಂಟು ಕುದುರೆ ಎಂದು ಹೇಳ್ತಿರೋದು ಏಕೆ ಎನ್ನುವ ಪ್ರಶ್ನೆ ಮೂಡಿತ್ತು. ಆ ಕಾಲೇಜಿಗೆ ಸೇರಿದ ಮೇಲೆ ನಾನು ನಿಜಕ್ಕೂ ಕುಂಟು ಕುದುರೆ ಎನಿಸಿತ್ತು’ ಎಂದಿದ್ದಾರೆ ಧನಂಜಯ್.

ಇದನ್ನೂ ಓದಿ: ಧನಂಜಯ್​ಗೆ ಇತ್ತೀಚೆಗೆ ಬೀಳುತ್ತಿದೆ ಕೆಟ್ಟ ಕನಸು; ಕಾರಣ ತಿಳಿಸಿದ ಡಾಲಿ

ಧನಂಜಯ್ ದ್ವಿತೀಯ ಪಿಯುಸಿಯಲ್ಲಿ 600ಕ್ಕೆ 520 ಅಂಕ ಗಳಿಸಿದ್ದರು. ಫಿಸಿಕ್ಸ್​ಗೆ 99 ಅಂಕ ಬಂದಿತ್ತು. ಧನಂಜಯ್ ಬ್ರಿಲಿಯಂಟ್ ಸ್ಟೂಡೆಂಟ್ ಎಂಬುದಕ್ಕೆ ಇದು ಒಳ್ಳೆಯ ಉದಾಹರಣೆ. ಪಿಯುಸಿ ಮುಗಿದ ಬಳಿಕ ಅವರು ಇಂಜಿನಿಯರಿಂಗ್ ಸೇರಿದರು. ಆಗಲೇ ಅವರು ರಂಗಾಯಣಕ್ಕೆ ಹೋಗುತ್ತಿದ್ದರು. ಬಳಿಕ ಕೆಲಸಕ್ಕೂ ಸೇರಿದರು. ಆದರೆ, ಅವರನ್ನು ಬಣ್ಣದ ಲೋಕ ಕೈ ಬೀಸಿ ಕರೆಯಿತು.

ಇದನ್ನೂ ಓದಿ: ವೀಕೆಂಡ್ ವಿತ್ ರಮೇಶ್​ಗೆ ಡಾಲಿ ಧನಂಜಯ್, ಹಲವು ಅಚ್ಚರಿಯ ಅತಿಥಿಗಳು!

‘ಧನಂಜಯ್ ಅವರಿಗೆ ಸಾಕಷ್ಟು ಅವಮಾನ ಆಗಿದೆ. ಆದರೆ, ಅವರು ತಲೆ ತಗ್ಗಿಸಿಲ್ಲ. ಬದಲಿಗೆ ಎಲ್ಲರನ್ನೂ ಕ್ಷಮಿಸಬೇಕು ಎಂದು ಹೇಳುತ್ತಿದ್ದರು’ ಎಂದಿದ್ದಾರೆ ಧನಂಜಯ್ ಗೆಳೆಯರು. ಸದ್ಯ ಧನಂಜಯ್ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಕನ್ನಡದ ಬೇಡಿಕೆಯ ಹೀರೋ ಆಗಿ ಧನಂಜಯ್ ಹೊರಹೊಮ್ಮಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:33 am, Mon, 17 April 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!