AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​ 6’ ಕಪ್​ನಲ್ಲಿ ಪುನೀತ್ ರಾಜ್​ಕುಮಾರ್; ಫಿನಾಲೆ ಗೆದ್ದವರಿಗೆ ಸಿಗಲಿದೆ ವಿಶೇಷ ಬಹುಮಾನ

ಅನೇಕ ರಿಯಾಲಿಟಿ ಶೋಗಳಲ್ಲಿ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೂ ಪುನೀತ್ ಅವರನ್ನು ನೆನೆಯಲಾಗಿದೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​ 6’ ಕಪ್​ನಲ್ಲಿ ಪುನೀತ್ ರಾಜ್​ಕುಮಾರ್; ಫಿನಾಲೆ ಗೆದ್ದವರಿಗೆ ಸಿಗಲಿದೆ ವಿಶೇಷ ಬಹುಮಾನ
‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​ 6’ ಕಪ್​ನಲ್ಲಿ ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Sep 21, 2022 | 6:30 AM

Share

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ನ ಆರನೇ ಸೀಸನ್ ಸಾಕಷ್ಟು ಮನರಂಜನೆ ನೀಡಿದೆ. ಈ ಬಾರಿ ಶಿವರಾಜ್​ಕುಮಾರ್ (Shivarajkumar) ಅವರು ಈ ಶೋಗೆ ಜಡ್ಜ್​ ಆಗಿ ಬಂದಿದ್ದರು. ಈ ಕಾರಣದಿಂದಲೂ ಶೋಗೆ ಹೊಸ ಕಳೆ ಬಂದಿತ್ತು. ಆರಂಭವಾದ ಶೋಗಳು ಒಂದಲ್ಲಾ ಒಂದು ದಿನ ಪೂರ್ಣಗೊಳ್ಳಲೇಬೇಕು. ಅದೇ ರೀತಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 6’ (Dance Karnataka Dance 6) ಮುಗಿಯುವ ಹಂತಕ್ಕೆ ಬಂದಿದೆ. ಇದೇ ಶನಿವಾರ ಫಿನಾಲೆ ನಡೆಯಲಿದೆ. ಈ ಬಗ್ಗೆ ಜೀ ಕನ್ನಡ ವಾಹಿನಿ ಅಧಿಕೃತ ಘೋಷಣೆ ಮಾಡಿದೆ. ಈ ಸೀಸನ್ ಗೆದ್ದವರಿಗೆ ಅಪ್ಪು ಮೂರ್ತಿಯ ಕಪ್ ಸಿಗಲಿದೆ.

ಪುನೀತ್ ರಾಜ್​ಕುಮಾರ್ ಅವರು ನಿಧನ ಹೊಂದಿ ವರ್ಷ ಕಳೆಯುತ್ತಾ ಬಂದಿದೆ. ಆದರೂ ಅವರಿಲ್ಲ ಎಂಬ ನೋವು ಅಭಿಮಾನಿಗಳನ್ನು ಅತಿಯಾಗಿ ಕಾಡುತ್ತಿದೆ. ಹೀಗಾಗಿ, ಎಲ್ಲ ಕಡೆಗಳಲ್ಲಿ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ಅನೇಕ ರಿಯಾಲಿಟಿ ಶೋಗಳಲ್ಲಿ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೂ ಪುನೀತ್ ಅವರನ್ನು ನೆನೆಯಲಾಗಿದೆ.

ಪುನೀತ್​ ರಾಜ್​ಕುಮಾರ್ ಅವರು ಅದ್ಭುತವಾಗಿ ಡ್ಯಾನ್ಸ್ ಮಾಡುತ್ತಿದ್ದರು. ಅವರು ಸ್ಟೆಪ್ ಹಾಕುತ್ತಿದ್ದ ರೀತಿ ಅನೇಕರಿಗೆ ಇಷ್ಟವಾಗಿತ್ತು. ಈ ಕಾರಣಕ್ಕೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 6’ರ ವಿಜೇತರಿಗೆ ಅಪ್ಪು ಇರುವ ಟ್ರೋಫಿ ಸಿಗಲಿದೆ. ಶಿವರಾಜ್​ಕುಮಾರ್ ಅವರು ಈ ಟ್ರೋಫಿಯನ್ನು ಈ ಮೊದಲು ಅನಾವರಣ ಮಾಡಿದ್ದರು. ಫಿನಾಲೆಗೂ ಮುನ್ನ ಮತ್ತೊಮ್ಮೆ ಈ ಟ್ರೋಫಿಯನ್ನು ತೋರಿಸಲಾಗಿದೆ.

ಇದನ್ನೂ ಓದಿ
Image
ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ
Image
ಭೂಗತ ಲೋಕದ ಕಥೆಯಲ್ಲಿ ಶಿವರಾಜ್​​ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ
Image
ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್​ಕುಮಾರ್

ಸೆಪ್ಟೆಂಬರ್ 21, ಬುಧವಾರ ಸಂಜೆ 5.30ಕ್ಕೆ  ಕನಕಪುರದ ರೂರಲ್ ಡಿಗ್ರಿ ಕಾಲೇಜ್ ಮೈದಾನದಲ್ಲಿ ಫಿನಾಲೆ ನಡೆಯಲಿದೆ. ಶನಿವಾರ ಇದು ಟಿವಿಯಲ್ಲಿ ಪ್ರಸಾರ ಕಾಣಲಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​ ಸೀಸನ್​ 6 ಗ್ರ್ಯಾಂಡ್ ಫಿನಾಲೆ. ಪವರ್ ಸ್ಟಾರ್ ಟ್ರೋಫಿ ಗೆದ್ದು ಹೃದಯ ತುಂಬಿಕೊಳ್ಳೋಕೆ ಡ್ಯಾನ್ಸ್ ಪ್ರತಿಭೆಗಳ ರೋಚಕ ಹಣಾಹಣಿ. ಇದೇ ಶನಿವಾರ ಸಂಜೆ 6ಕ್ಕೆ’ ಎಂದು ಜೀ ಕನ್ನಡ ವಾಹಿನಿ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದೆ.

ಇದನ್ನೂ ಓದಿ: Shiva 143: ‘ಇವನು ಜೂನಿಯರ್​ ಶಿವಣ್ಣ ಆಗೋದು ಬೇಡ’; ಧೀರೇನ್​ ನಟನೆಗೆ ಶಿವರಾಜ್​ಕುಮಾರ್​ ಪ್ರತಿಕ್ರಿಯೆ

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​ನಿಂದ’ ಸಾಕಷ್ಟು ಡ್ಯಾನ್ಸರ್​ಗಳಿಗೆ ತಮ್ಮ ಕಲೆಯನ್ನು ಅಭಿವ್ಯಕ್ತಿಪಡಿಸಲು ಅವಕಾಶ ಸಿಕ್ಕಿದೆ. ಈ ವೇದಿಕೆ ಮೇಲೆ ಸಾಕಷ್ಟು ಮಂದಿ ತಮ್ಮ ಕಲೆಯನ್ನು ತೋರಿಸುತ್ತಿದ್ದಾರೆ. ಶಿವರಾಜ್​ಕುಮಾರ್ ಅವರು ಈ ರಿಯಾಲಿಟಿ ಶೋಗೆ ಜಡ್ಜ್ ಆಗಿರುವುದು ಹೊಸ ಹುರುಪು ಸಿಕ್ಕಂತೆ ಆಗಿತ್ತು.

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ