AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋಗೆ ಸುದೀಪ್ ಅತಿಥಿ; ಈ ಬಾರಿ ಶಿವಣ್ಣ-ಕಿಚ್ಚ ಕಾಂಬಿನೇಷನ್

ರಿಯಾಲಿಟಿ ಶೋಗಳ ವೇದಿಕೆ ಮೇಲೆ ಸಿನಿಮಾ ಸ್ಟಾರ್​ಗಳು ಆಗಮಿಸಿ ತಮ್ಮ ಚಿತ್ರಕ್ಕೆ ಪ್ರಚಾರ ನೀಡುವುದು ಹೊಸದೇನೂ ಅಲ್ಲ. ಈಗ ‘ಕಿಚ್ಚ’ ಸುದೀಪ್ ಅವರು ‘ಡಿಕೆಡಿ 6’ ವೇದಿಕೆ ಮೇಲೆ ‘ವಿಕ್ರಾಂತ್ ರೋಣ’ ಸಿನಿಮಾದ ಪ್ರಚಾರ ಮಾಡಲಿದ್ದಾರೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋಗೆ ಸುದೀಪ್ ಅತಿಥಿ; ಈ ಬಾರಿ ಶಿವಣ್ಣ-ಕಿಚ್ಚ ಕಾಂಬಿನೇಷನ್
ಶಿವರಾಜ್​ಕುಮಾರ್-ಸುದೀಪ್
TV9 Web
| Edited By: |

Updated on: Jun 30, 2022 | 6:35 AM

Share

ಕಿಚ್ಚ ಸುದೀಪ್ (Kichcha Sudeep) ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ತೆರೆಗೆ ಬರೋಕೆ ಒಂದು ತಿಂಗಳು ಬಾಕಿ ಇದೆ. ಈಗಾಗಲೇ ಚಿತ್ರತಂಡ ಭರ್ಜರಿಯಾಗಿ ಸಿನಿಮಾಗೆ ಪ್ರಚಾರ ನೀಡುತ್ತಿದೆ. ಬೇರೆಬೇರೆ ರಾಜ್ಯಗಳಿಗೆ ತೆರಳಿ ಸಿನಿಮಾ ಪ್ರಚಾರ ಮಾಡಲಾಗುತ್ತಿದೆ. ಈಗ ಸುದೀಪ್ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 6​’ರ ವೇದಿಕೆ ಏರಲಿದ್ದಾರೆ. ಈ ಬಾರಿ ಶಿವರಾಜ್​ಕುಮಾರ್ ಹಾಗೂ ಸುದೀಪ್​  ಕಾಂಬಿನೇಷನ್ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆಯ ಹೈಲೈಟ್ ಆಗಿರಲಿದೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ನಟನೆಯ ‘ಬೈರಾಗಿ’ ಸಿನಿಮಾ ಈ ವಾರ (ಜುಲೈ 1) ತೆರೆಗೆ ಬರುತ್ತಿದೆ. ಈ ಮಧ್ಯೆ ಅವರು ಕಿರುತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ‘ಡಿಕೆಡಿ 6’ಗೆ ಅವರು ಜಡ್ಜ್​ ಸ್ಥಾನದಲ್ಲಿ ಕೂತಿದ್ದಾರೆ. ಶಿವಣ್ಣ ಸೂಪರ್ ಆಗಿ ಡ್ಯಾನ್ಸ್ ಮಾಡುತ್ತಾರೆ. 60ನೇ ವಯಸ್ಸಿನಲ್ಲೂ ಸಖತ್ ಆಗಿ ಸ್ಟೆಪ್ ಹಾಕುತ್ತಾರೆ. ಅವರು ಅನೇಕರಿಗೆ ಮಾದರಿ. ‘ಡಿಕೆಡಿ 6’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಕೇವಲ ಜಡ್ಜ್​ ಆಗಿ ಇರದೆ ಸ್ಪರ್ಧಿಗಳಿಗೆ ಮಾರ್ಗದರ್ಶನ ಕೂಡ ನೀಡುತ್ತಿದ್ದಾರೆ. ಅವರು ಸ್ಫೂರ್ತಿದಾಯಕ ಮಾತುಗಳನ್ನು ಕೂಡ ಆಡುತ್ತಿದ್ದಾರೆ. ಈ ಕಾರಣಕ್ಕೆ ಶಿವರಾಜ್​ಕುಮಾರ್ ಎಲ್ಲರಿಗೂ ಇಷ್ಟವಾಗುತ್ತಾರೆ. ಅವರ ಜತೆ ಈ ಬಾರಿ ಕಿಚ್ಚ ಸುದೀಪ್ ಕೂಡ ಸೇರಿಕೊಳ್ಳುತ್ತಿದ್ದಾರೆ.

ಕಿರುತೆರೆಯ ವ್ಯಾಪ್ತಿ ದಿನೇ ದಿನೇ ಹಿರಿದಾಗುತ್ತಿದೆ. ರಿಯಾಲಿಟಿ ಶೋಗಳ ವೇದಿಕೆ ಮೇಲೆ ಸಿನಿಮಾ ಸ್ಟಾರ್​ಗಳು ಆಗಮಿಸಿ ತಮ್ಮ ಚಿತ್ರಕ್ಕೆ ಪ್ರಚಾರ ನೀಡುವುದು ಹೊಸದೇನೂ ಅಲ್ಲ. ಈಗ ‘ಕಿಚ್ಚ’ ಸುದೀಪ್ ಅವರು ‘ಡಿಕೆಡಿ 6’ ವೇದಿಕೆ ಮೇಲೆ ‘ವಿಕ್ರಾಂತ್ ರೋಣ’ ಸಿನಿಮಾದ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ
Image
‘ಯಾರಾದ್ರೂ ಬಿಟ್ಟು ಹೋದ್ರೆ ಹೋಗಲಿ, ಯಾವುದೋ ಒಂದು ಹೊಸದು ಆರಂಭವಾಗುತ್ತದೆ’: ಸುದೀಪ್
Image
‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಎನರ್ಜೆಟಿಕ್ ಡ್ಯಾನ್ಸ್; ಎದ್ದು ನಿಂತು ಚಪ್ಪಾಳೆ ತಟ್ಟಿದ ರಕ್ಷಿತಾ
Image
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ

‘ಈ ವಾರ ಡಿಕೆಡಿ ಸ್ಟೇಜ್​ನಲ್ಲಿ ಎಂಟರ್​ಟೇನ್​ಮೆಂಟ್ ಕಿಚ್ಚು ಹಚ್ಚೋಕೆ ಬರುತ್ತಿರುವ ಗೆಸ್ಟ್​ ಯಾರು ಎಂದು ಹೇಳಿ’ ಎಂಬ ಪೋಸ್ಟ್​ಅನ್ನು ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಇದನ್ನು ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ‘ವಿಕ್ರಾಂತ್ ರೋಣ’ ಸಿನಿಮಾದ ‘ರಾ ರಾ ರಕ್ಕಮ್ಮ’ ಹಾಡಿಗೆ ಶಿವಣ್ಣ ಹಾಗೂ ಸುದೀಪ್ ಡ್ಯಾನ್ಸ್ ಮಾಡಲಿ ಎಂದು ಆಶಿಸುತ್ತಿದ್ದಾರೆ.  ‘ವಿಕ್ರಾಂತ್ ರೋಣ’ ಚಿತ್ರವನ್ನು ಜ್ಯಾಕ್ ಮಂಜು ನಿರ್ಮಾಣ ಮಾಡಿದ್ದು ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಬಾಲಿವುಡ್​ನ ಜಾಕ್ವೆಲಿನ್ ಫರ್ನಾಂಡಿಸ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಎನರ್ಜೆಟಿಕ್ ಡ್ಯಾನ್ಸ್; ಎದ್ದು ನಿಂತು ಚಪ್ಪಾಳೆ ತಟ್ಟಿದ ರಕ್ಷಿತಾ

‘ಯಾರಾದ್ರೂ ಬಿಟ್ಟು ಹೋದ್ರೆ ಹೋಗಲಿ, ಯಾವುದೋ ಒಂದು ಹೊಸದು ಆರಂಭವಾಗುತ್ತದೆ’: ಸುದೀಪ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ