AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕ್ಷಗಾನಕ್ಕೆ ಅವಮಾನ ಆರೋಪ: ಕ್ಷಮೆ ಕೇಳಿದ ಜೀ ಕನ್ನಡ ವಾಹಿನಿ

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​ 6’ ವೇದಿಕೆ ಮೇಲೆ ಕಳೆದ ವಾರ ಯಕ್ಷಗಾನ ಮಾಡಲಾಗಿತ್ತು. ಈ ವೇಳೆ ಯಕ್ಷಗಾನಕ್ಕೆ ಅವಮಾನ ಆಗಿದೆ ಎನ್ನುವ ಆರೋಪಗಳು ಕೇಳಿ ಬಂದವು.

ಯಕ್ಷಗಾನಕ್ಕೆ ಅವಮಾನ ಆರೋಪ: ಕ್ಷಮೆ ಕೇಳಿದ ಜೀ ಕನ್ನಡ ವಾಹಿನಿ
zee kannada
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 25, 2022 | 10:39 PM

ಜೀ ಕನ್ನಡ (Zee Kannada) ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ (Dance Karnataka Dance) ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿದೆ. ಆದರೆ, ಕಳೆದ ವಾರದ ಎಪಿಸೋಡ್​ನಲ್ಲಿ ಯಕ್ಷಗಾನಕ್ಕೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಂದೋಲನಗಳೂ ಆದವು. ಕ್ಷಮೆ ಯಾಚಿಸಲು ಯಕ್ಷಗಾನ ಪ್ರಿಯರು ಪಟ್ಟು ಹಿಡಿದರು. ಇದಕ್ಕೆ ಜೀ ಕನ್ನಡ ವಾಹಿನಿ ಮಣಿದಿದೆ. ಕ್ಷಮೆ ಕೇಳಿ ಪೋಸ್ಟ್ ಹಾಕಿದೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​ 6’ ವೇದಿಕೆ ಮೇಲೆ ಕಳೆದ ವಾರ ಯಕ್ಷಗಾನ ಮಾಡಲಾಗಿತ್ತು. ಈ ವೇಳೆ ಯಕ್ಷಗಾನಕ್ಕೆ ಅವಮಾನ ಆಗಿದೆ ಎನ್ನುವ ಆರೋಪಗಳು ಕೇಳಿ ಬಂದವು. ಈಗ ಇದಕ್ಕೆ ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆ ಕೇಳಿದೆ.

ಇದನ್ನೂ ಓದಿ
Image
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್
Image
‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ
Image
ಭೂಗತ ಲೋಕದ ಕಥೆಯಲ್ಲಿ ಶಿವರಾಜ್​​ಕುಮಾರ್; ‘ಓಂ’ ರೀತಿಯಲ್ಲಿ ಹೊಸ ಸಿನಿಮಾ
Image
ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್​ಕುಮಾರ್

‘ಜೀ ಕನ್ನಡ ವಾಹಿನಿಯು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆಯ ಮೂಲಕ ಅನೇಕ ಕಲಾ ಪ್ರಕಾರಗಳನ್ನು ಗೌರವಿಸುತ್ತ, ನಾಡಿನ ಜನತೆಗೆ ಪರಿಚಯಿಸುತ್ತಲೇ ಬಂದಿದೆ. ನಮ್ಮ ವೇದಿಕೆಯಲ್ಲಿ ಯಕ್ಷಗಾನಕ್ಕೂ ಸಹ ಪ್ರಾಮುಖ್ಯತೆ ನೀಡಿದ್ದು, ನೃತ್ಯಾಭಿಮಾನಿಗಳ ಪ್ರಶಂಸೆ ಪಡೆದಿದ್ದೇವೆ’ ಎಂದು ಪೋಸ್ಟ್ ಆರಂಭಿಸಲಾಗಿದೆ.

View this post on Instagram

A post shared by Zee Kannada (@zeekannada)

‘ಕಳೆದ ವಾರ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಪ್ರಸಾರವಾದ ಯಕ್ಷಗಾನ ಕೆಲವರ ಭಾವನೆಗೆ ಧಕ್ಕೆಯಾಗಿದ್ದು ನಮ್ಮ ಗಮನಕ್ಕೆ ಬಂದಿದೆ. ಇದು ಉದ್ದೇಶಪೂರ್ವಕವಾಗಿ ಆಗಿದ್ದಲ್ಲವೆಂದು ವಾಹಿನಿ ಸ್ಪಷ್ಟಿಕರಿಸಲು ಬಯಸುತ್ತದೆ ಮತ್ತು ಈ ಮೂಲಕ ಕ್ಷಮೆಯಾಚಿಸುತ್ತೇವೆ. ನಮ್ಮ ಅತ್ಯುತ್ತಮ ಕೆಲಸಗಳಿಗೆ ನೀವು ಕೊಟ್ಟ ಗೌರವ ಹಾಗೂ ನಾವು ಎಡವಿದಾಗ ನೀವು ಕೊಡುವ ಸಲಹೆಯನ್ನು ನಾವು ಸ್ವೀಕರಿಸುತ್ತೇವೆ. ಇಲ್ಲಿವರೆಗೂ ನೀವು ಕೊಟ್ಟ ಪ್ರೋತ್ಸಾಹ, ಬೆಂಬಲ ಹಾಗೆಯೇ ಮುಂದುವರಿಯಲಿ ಎಂದು ಜೀ ಕನ್ನಡ ವಾಹಿನಿ ಆಶಿಸುತ್ತದೆ’ ಎಂದು ಪೋಸ್ಟ್ ಪೂರ್ಣಗೊಳಿಸಲಾಗಿದೆ.

ಇದನ್ನೂ ಓದಿ: ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ವೇದಿಕೆ ಮೇಲೆ ಲಗೇಜ್ ಆಟೋದಲ್ಲಿ ಅನುಶ್ರೀ-ಅರ್ಜುನ್ ಜನ್ಯ ರೈಡ್​

ಈ ಕ್ಷಮೆಯಿಂದ ಯಕ್ಷಗಾನ ಪ್ರಿಯರ ಕೋಪ ಕಡಿಮೆ ಆಗಿಲ್ಲ. ‘ಅವಮಾನ ಮಾಡಿದ ಎಲ್ಲರೂ ಕ್ಷಮೆ ಕೇಳಬೇಕು. ಅದನ್ನು ಯಾವ ಕಾರಣಕ್ಕೂ ಮರು ಪ್ರಸಾರ ಮಾಡಬಾರದು. ಅದರ ವಿಡಿಯೋ zee 5 ಆ್ಯಪ್​ನಿಂದ ಅಳಿಸಬೇಕು. ಇನ್ನಿತರ zee ಸೋಶಿಯಲ್ ಮೀಡಿಯಾ ಪೇಜ್​ಗಳಿಂದ ಡಿಲಿಟ್ ಮಾಡಬೇಕು’ ಎಂದು ಕೆಲವರು ಆಗ್ರಹಿಸಿದ್ದಾರೆ. ಇನ್ನೂ ಕೆಲವರು ‘ಅವಮಾನ ಆಗಿದ್ದು ಡಿಕೆಡಿ ವೇದಿಕೆಯಲ್ಲಿ. ಅದೇ ವೇದಿಕೆಯಲ್ಲಿ ಕ್ಷಮೆ ಕೇಳಿ’ ಎಂದು ಆಗ್ರಹಿಸಿದ್ದಾರೆ.

Published On - 10:37 pm, Mon, 25 July 22

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ