AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಪ್ಪಿಗೆ ಇಲ್ಲದೆ ಅಮಿತಾಭ್ ಬಚ್ಚನ್​ ಫೋಟೋ ಬಳಸುವಂತಿಲ್ಲ; ಕೋರ್ಟ್​ನಿಂದಲೇ ಬಂತು ಆದೇಶ

ಅಮಿತಾಭ್ ಬಚ್ಚನ್ ಅವರು ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮ ಹೆಸರು, ಭಾವಚಿತ್ರ, ಧ್ವನಿಯನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡದಂತೆ ಅಮಿತಾಭ್ ಬಚ್ಚನ್ ದೆಹಲಿ ಕೋರ್ಟ್​​ನಲ್ಲಿ ಕೋರಿದ್ದರು.

ಒಪ್ಪಿಗೆ ಇಲ್ಲದೆ ಅಮಿತಾಭ್ ಬಚ್ಚನ್​ ಫೋಟೋ ಬಳಸುವಂತಿಲ್ಲ; ಕೋರ್ಟ್​ನಿಂದಲೇ ಬಂತು ಆದೇಶ
ಅಮಿತಾಭ್ ಬಚ್ಚನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 25, 2022 | 2:54 PM

ಸೆಲೆಬ್ರಿಟಿ ಪಟ್ಟ ಸಿಕ್ಕ ನಂತರದಲ್ಲಿ ಹಲವು ಜಾಹೀರಾತುಗಳಲ್ಲಿ ನಟಿಸಲು ಅವಕಾಶ ಸಿಗುತ್ತದೆ. ಸ್ಟಾರ್​​ಗಳು ಅನೇಕ ಬ್ರ್ಯಾಂಡ್​​ಗಳಿಗೆ ರಾಯಭಾರಿ ಆಗುತ್ತಾರೆ. ಇದರಿಂದ ಕೋಟ್ಯಂತರ ರೂಪಾಯಿ ಹಣ ಹರಿದು ಬರುತ್ತದೆ. ಆದರೆ, ಕೆಲವರು ಸ್ಟಾರ್​​ಗಳ ಫೋಟೋಗಳನ್ನು ಒಪ್ಪಿಗೆ ಇಲ್ಲದೆ ಜಾಹೀರಾತಿಗೆ ಬಳಕೆ ಮಾಡಿಕೊಳ್ಳುತ್ತಾರೆ. ಈ ಮೂಲಕ ತಮ್ಮ ಬ್ರ್ಯಾಂಡ್​ಗಳ ಪ್ರಮೋಷನ್ ಮಾಡಿಕೊಳ್ಳುತ್ತಾರೆ. ಅಮಿತಾಭ್ ಬಚ್ಚನ್ (Amitabh Bachchan ) ವಿಚಾರದಲ್ಲೂ ಇದೇ ರೀತಿ ಆಗಿದೆ. ಇದಕ್ಕೆ ಸಂಬಂಧಿಸಿ ಅವರು ದೆಹಲಿ ಹೈಕೋರ್ಟ್ (Delhi High Court) ಮೆಟ್ಟಿಲು ಏರಿದ್ದಾರೆ. ಅಮಿತಾಭ್ ಬಚ್ಚನ್ ಪರವಾಗಿ ಕೋರ್ಟ್ ತೀರ್ಪು ನೀಡಿದೆ.

ಅಮಿತಾಭ್ ಬಚ್ಚನ್ ಅವರು ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮ ಹೆಸರು, ಭಾವಚಿತ್ರ, ಧ್ವನಿಯನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡದಂತೆ ಅಮಿತಾಭ್ ಬಚ್ಚನ್ ದೆಹಲಿ ಕೋರ್ಟ್​​ನಲ್ಲಿ ಕೋರಿದ್ದರು. ಅಮಿತಾಭ್ ಪರವಾಗಿ ಖ್ಯಾತ ವಕೀಲ ಹರೀಶ್ ಸಾಲ್ವೆ ಅವರು ದೆಹಲಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ನವೀನ್ ಚಾವ್ಲಾ ಅವರು ಶುಕ್ರವಾರ (ನವೆಂಬರ್ 25) ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ‘ಅಮಿತಾಭ್ ಬಚ್ಚನ್ ಅವರ ಭಾವಚಿತ್ರವನ್ನು ಉದ್ಯಮದ ಪ್ರಮೋಷನ್​ಗೆ ಬಳಕೆ ಮಾಡಬಾರದು. ಇದರಿಂದ ಅರ್ಜಿದಾರರು ಸರಿಪಡಿಸಲಾಗದ ನಷ್ಟ ಮತ್ತು ಹಾನಿಯನ್ನು ಅನುಭವಿಸಬಹುದು. ಕೆಲವು ಚಟುವಟಿಕೆಗಳು ಅವರಿಗೆ  ಅಪಖ್ಯಾತಿಯನ್ನು ಸಹ ತರಬಹುದು’ ಎಂದು ನ್ಯಾಯಮೂರ್ತಿ ನವೀನ್ ಚಾವ್ಲಾ ಹೇಳಿದ್ದಾರೆ.

ಕೌನ್ ಬನೇಗಾ ಕರೋಡ್ಪತಿಯನ್ನು ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿದ್ದಾರೆ.  ಕೆಲ ಮೊಬೈಲ್ ಅಪ್ಲಿಕೇಷನ್​ಗಳು ಕೌನ್​ ಬನೇಗಾ ಕರೋಡ್ಪತಿ ಮಾದರಿಯಲ್ಲಿ ಅಕ್ರಮವಾಗಿ ಲಾಟರಿ ವ್ಯವಹಾರ ಮಾಡಲು ಅಮಿತಾಭ್ ಬಚ್ಚನ್ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಅಮಿತಾಭ್ ವರ್ಚಸ್ಸಿಗೆ ಹಾನಿ ಉಂಟು ಮಾಡುತ್ತಿದೆ. ಈ ಕಾರಣದಿಂದ ಅಮಿತಾಭ್ ಅವರು ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಪ್ರಕರಣದ ಮುಂದಿನ ವಿಚಾರಣೆ 2023 ಮಾರ್ಚ್​​ನಲ್ಲಿ ನಡೆಯಲಿದೆ.

ಇದನ್ನೂ ಓದಿ: ಪುನೀತ್​​ ಬಗ್ಗೆ ಅಮಿತಾಭ್​ ಬಚ್ಚನ್​ ಮಾತು; ದಿಗ್ಗಜ ನಟನಿಗೂ ಕಾಡುತ್ತಿದೆ ಅಪ್ಪು ನಗು

ಅಮಿತಾಭ್ ಬಚ್ಚನ್ ನಟನೆಯ ‘ಗುಡಬೈ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸೋತಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಕೂಡ ನಟಿಸಿದ್ದರು. ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಅಮಿತಾಭ್ ಬಚ್ಚನ್ ಬ್ಯುಸಿ ಇದ್ದಾರೆ.

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು