AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಪ್ಪಿಗೆ ಇಲ್ಲದೆ ಅಮಿತಾಭ್ ಬಚ್ಚನ್​ ಫೋಟೋ ಬಳಸುವಂತಿಲ್ಲ; ಕೋರ್ಟ್​ನಿಂದಲೇ ಬಂತು ಆದೇಶ

ಅಮಿತಾಭ್ ಬಚ್ಚನ್ ಅವರು ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮ ಹೆಸರು, ಭಾವಚಿತ್ರ, ಧ್ವನಿಯನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡದಂತೆ ಅಮಿತಾಭ್ ಬಚ್ಚನ್ ದೆಹಲಿ ಕೋರ್ಟ್​​ನಲ್ಲಿ ಕೋರಿದ್ದರು.

ಒಪ್ಪಿಗೆ ಇಲ್ಲದೆ ಅಮಿತಾಭ್ ಬಚ್ಚನ್​ ಫೋಟೋ ಬಳಸುವಂತಿಲ್ಲ; ಕೋರ್ಟ್​ನಿಂದಲೇ ಬಂತು ಆದೇಶ
ಅಮಿತಾಭ್ ಬಚ್ಚನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 25, 2022 | 2:54 PM

Share

ಸೆಲೆಬ್ರಿಟಿ ಪಟ್ಟ ಸಿಕ್ಕ ನಂತರದಲ್ಲಿ ಹಲವು ಜಾಹೀರಾತುಗಳಲ್ಲಿ ನಟಿಸಲು ಅವಕಾಶ ಸಿಗುತ್ತದೆ. ಸ್ಟಾರ್​​ಗಳು ಅನೇಕ ಬ್ರ್ಯಾಂಡ್​​ಗಳಿಗೆ ರಾಯಭಾರಿ ಆಗುತ್ತಾರೆ. ಇದರಿಂದ ಕೋಟ್ಯಂತರ ರೂಪಾಯಿ ಹಣ ಹರಿದು ಬರುತ್ತದೆ. ಆದರೆ, ಕೆಲವರು ಸ್ಟಾರ್​​ಗಳ ಫೋಟೋಗಳನ್ನು ಒಪ್ಪಿಗೆ ಇಲ್ಲದೆ ಜಾಹೀರಾತಿಗೆ ಬಳಕೆ ಮಾಡಿಕೊಳ್ಳುತ್ತಾರೆ. ಈ ಮೂಲಕ ತಮ್ಮ ಬ್ರ್ಯಾಂಡ್​ಗಳ ಪ್ರಮೋಷನ್ ಮಾಡಿಕೊಳ್ಳುತ್ತಾರೆ. ಅಮಿತಾಭ್ ಬಚ್ಚನ್ (Amitabh Bachchan ) ವಿಚಾರದಲ್ಲೂ ಇದೇ ರೀತಿ ಆಗಿದೆ. ಇದಕ್ಕೆ ಸಂಬಂಧಿಸಿ ಅವರು ದೆಹಲಿ ಹೈಕೋರ್ಟ್ (Delhi High Court) ಮೆಟ್ಟಿಲು ಏರಿದ್ದಾರೆ. ಅಮಿತಾಭ್ ಬಚ್ಚನ್ ಪರವಾಗಿ ಕೋರ್ಟ್ ತೀರ್ಪು ನೀಡಿದೆ.

ಅಮಿತಾಭ್ ಬಚ್ಚನ್ ಅವರು ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮ ಹೆಸರು, ಭಾವಚಿತ್ರ, ಧ್ವನಿಯನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡದಂತೆ ಅಮಿತಾಭ್ ಬಚ್ಚನ್ ದೆಹಲಿ ಕೋರ್ಟ್​​ನಲ್ಲಿ ಕೋರಿದ್ದರು. ಅಮಿತಾಭ್ ಪರವಾಗಿ ಖ್ಯಾತ ವಕೀಲ ಹರೀಶ್ ಸಾಲ್ವೆ ಅವರು ದೆಹಲಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ನವೀನ್ ಚಾವ್ಲಾ ಅವರು ಶುಕ್ರವಾರ (ನವೆಂಬರ್ 25) ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ‘ಅಮಿತಾಭ್ ಬಚ್ಚನ್ ಅವರ ಭಾವಚಿತ್ರವನ್ನು ಉದ್ಯಮದ ಪ್ರಮೋಷನ್​ಗೆ ಬಳಕೆ ಮಾಡಬಾರದು. ಇದರಿಂದ ಅರ್ಜಿದಾರರು ಸರಿಪಡಿಸಲಾಗದ ನಷ್ಟ ಮತ್ತು ಹಾನಿಯನ್ನು ಅನುಭವಿಸಬಹುದು. ಕೆಲವು ಚಟುವಟಿಕೆಗಳು ಅವರಿಗೆ  ಅಪಖ್ಯಾತಿಯನ್ನು ಸಹ ತರಬಹುದು’ ಎಂದು ನ್ಯಾಯಮೂರ್ತಿ ನವೀನ್ ಚಾವ್ಲಾ ಹೇಳಿದ್ದಾರೆ.

ಕೌನ್ ಬನೇಗಾ ಕರೋಡ್ಪತಿಯನ್ನು ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿದ್ದಾರೆ.  ಕೆಲ ಮೊಬೈಲ್ ಅಪ್ಲಿಕೇಷನ್​ಗಳು ಕೌನ್​ ಬನೇಗಾ ಕರೋಡ್ಪತಿ ಮಾದರಿಯಲ್ಲಿ ಅಕ್ರಮವಾಗಿ ಲಾಟರಿ ವ್ಯವಹಾರ ಮಾಡಲು ಅಮಿತಾಭ್ ಬಚ್ಚನ್ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಅಮಿತಾಭ್ ವರ್ಚಸ್ಸಿಗೆ ಹಾನಿ ಉಂಟು ಮಾಡುತ್ತಿದೆ. ಈ ಕಾರಣದಿಂದ ಅಮಿತಾಭ್ ಅವರು ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಪ್ರಕರಣದ ಮುಂದಿನ ವಿಚಾರಣೆ 2023 ಮಾರ್ಚ್​​ನಲ್ಲಿ ನಡೆಯಲಿದೆ.

ಇದನ್ನೂ ಓದಿ: ಪುನೀತ್​​ ಬಗ್ಗೆ ಅಮಿತಾಭ್​ ಬಚ್ಚನ್​ ಮಾತು; ದಿಗ್ಗಜ ನಟನಿಗೂ ಕಾಡುತ್ತಿದೆ ಅಪ್ಪು ನಗು

ಅಮಿತಾಭ್ ಬಚ್ಚನ್ ನಟನೆಯ ‘ಗುಡಬೈ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸೋತಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಕೂಡ ನಟಿಸಿದ್ದರು. ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಅಮಿತಾಭ್ ಬಚ್ಚನ್ ಬ್ಯುಸಿ ಇದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ