AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಬಂದ ಪತ್ನಿ ಬಳಿ ಎರಡನೇ ಮಗುವಿಗೆ ಬೇಡಿಕೆ ಇಟ್ಟ ಧನರಾಜ್

ಬಿಗ್ ಬಾಸ್ ಕನ್ನಡದ ಫ್ಯಾಮಿಲಿ ವೀಕ್‌ನಲ್ಲಿ ಧನರಾಜ್ ಅವರ ಕುಟುಂಬದ ಆಗಮನವು ಸಾಕಷ್ಟು ಉತ್ಸಾಹ ತಂದಿದೆ. ಪತ್ನಿ ಪ್ರಜ್ಞಾ ಅವರೊಂದಿಗೆ ನಡೆದ ಸಂಭಾಷಣೆಯಲ್ಲಿ, ಧನರಾಜ್ ಎರಡನೇ ಮಗುವನ್ನು ಹೊಂದುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಪ್ರಜ್ಞಾ ಅವರು ಆಶ್ಚರ್ಯಚಕಿತರಾದರೂ, ಭವಿಷ್ಯದಲ್ಲಿ ಚರ್ಚಿಸುವುದಾಗಿ ಹೇಳಿದ್ದಾರೆ. ಈ ಭೇಟಿಯು ಸ್ಪರ್ಧಿಗಳ ನಡುವಿನ ಒತ್ತಡವನ್ನು ಕಡಿಮೆ ಮಾಡಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಿದೆ.

ಬಿಗ್ ಬಾಸ್ ಮನೆಗೆ ಬಂದ ಪತ್ನಿ ಬಳಿ ಎರಡನೇ ಮಗುವಿಗೆ ಬೇಡಿಕೆ ಇಟ್ಟ ಧನರಾಜ್
ಧನರಾಜ್-ಪ್ರಜ್ಞಾ
ರಾಜೇಶ್ ದುಗ್ಗುಮನೆ
|

Updated on: Jan 03, 2025 | 7:12 AM

Share

ಬಿಗ್ ಬಾಸ್ ಮನೆಯಲ್ಲಿ ಈ ವಾರ ಎಲ್ಲರೂ ಜಾಲಿ ಮೂಡ್​ನಲ್ಲಿ ಇದ್ದಾರೆ. ಏಕೆಂದರೆ ಇದು ಫ್ಯಾಮಿಲಿ ವೀಕ್. ಸ್ಪರ್ಧಿಗಳ ಮಧ್ಯೆ ಇದ್ದ ವೈರತ್ವವೆಲ್ಲ ಮರೆತು ಎಲ್ಲರೂ ಹಾಯಾಗಿ ಸಮಯ ಕಳೆಯುವಂತೆ ಮಾಡಿದ್ದು ಈ ವಾರ. ಟಾಸ್ಕ್​ನ ಜಂಜಾಟ ಬದಿಗಿಟ್ಟು ಸ್ಪರ್ಧಿಗಳ ಗಮನ ಆಟದ ಮೇಲೆ ಇದೆ. ಜನವರಿ 2ರ ಎಪಿಸೋಡ್​ನಲ್ಲಿ ಧನರಾಜ್ ಅವರ ಕುಟುಂಬ ದೊಡ್ಮನೆಗೆ ಬಂದಿದೆ. ಅಷ್ಟೇ ಅಲ್ಲ, ಅಲ್ಲಿ ಸಾಕಷ್ಟು ಫನ್ ಆ್ಯಕ್ಟಿವಿಟಿ ನಡೆದಿದೆ. ಈ ವೇಳೆ ಧನರಾಜ್ ಅವರು ಪತ್ನಿ ಬಳಿ ಎರಡನೇ ಮಗುವನ್ನು ಹೊಂದುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ಧನರಾಜ್ ಅವರ ಪತ್ನಿಯ ಹೆಸರು ಪ್ರಜ್ಞಾ ಆಚಾರ್ಯ. ಅವರು ಕೂಡ ಪತಿಯ ಜೊತೆ ಸೇರಿ ವಿಡಿಯೋ ಕಂಟೆಂಟ್​ಗಳನ್ನು ಮಾಡುತ್ತಾ ಇರುತ್ತಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ ಒಂದೂವರೆ ಲಕ್ಷ ಜನ ಹಿಂಬಾಲಕರು ಇದ್ದಾರೆ. ಈಗ ಅವರು ಬಿಗ್ ಬಾಸ್ ಮನೆ ಒಳಗೆ ಬಂದಿದ್ದಾರೆ. ಪತ್ನಿ ಬಳಿ ಅವರು ನೇರ ಮಾತುಗಳಲ್ಲಿ ಎಲ್ಲವನ್ನೂ ಹೇಳಿಕೊಂಡಿದ್ದಾರೆ.

ಬಿಗ್ ಬಾಸ್ ಮನೆಯ ಮುಖ್ಯದ್ವಾರದ ಎದುರು ಕುಳಿತುಕೊಳ್ಳಲು ಜಾಗವಿದೆ. ಅದು ಧನರಾಜ್ ಹಾಗೂ ಹನುಮಂತ ಅವರ ಫೇವರಿಟ್ ಜಾಗ. ಅಲ್ಲಿಯೇ ಕುಳಿತು ಧನರಾಜ್ ಅವರು ಕ್ಯಾಪ್ಟನ್ ಆಗುವ, ಉತ್ತಮ ಪಡೆಯುವ ಹಾಗೂ ಕಿಚ್ಚನ ಚಪ್ಪಾಳೆ ಪಡೆಯುವ ಕನಸು ಕಂಡಿದ್ದರು. ಅದು ನಿಜವಾಗಿದೆ. ಈ ವಿಚಾರವನ್ನು ಅವರು ಪತ್ನಿ ಬಳಿ ಹೇಳಿಕೊಂಡಿದ್ದಾರೆ. ಇದಕ್ಕೆ ಪ್ರಜ್ಞಾ ಅವರು ‘ಹಾಗಾದರೆ ಈಗೇನು ಕೇಳಿಕೊಳ್ಳುತ್ತೀರಿ’ ಎಂದು ಕೇಳಿದ್ದಾರೆ. ಆಗ ಧನರಾಜ್ ಅವರು ಮುಚ್ಚುಮರೆ ಇಲ್ಲದೆ ಉತ್ತರಿಸಿದ್ದಾರೆ.

ಇದನ್ನೂ ಓದಿ:  ಐಶ್ವರ್ಯಾಗೆ ಲೈನ್ ಹೊಡೀತಿದ್ರಾ ಧನರಾಜ್? ಪತ್ನಿಗೆ ಮೂಡಿದೆ ಅನುಮಾನ

‘ನನಗೆ ಎರಡನೇ ಮಗು ಬೇಕು’ ಎಂದಾಗ ಪ್ರಜ್ಞಾ ಅವರು ‘ಎಂತ ಮರಾಯಾ ನೀನು’ ಎಂದು ನಾಚಿ ನೀರಾದರು. ಆಗ ಧನರಾಜ್, ‘ನೀನು ರೆಡಿ ಇಲ್ವ? ಬೇಡವಾ’ ಎಂದು ಕೇಳಿದರು. ‘ಈಗ ಮಾತನಾಡೋದು ಬೇಡ, ಇದನ್ನೆಲ್ಲ ಮನೆಗೆ ಬಂದು ಮಾತಾಡಬೇಕಲ್ವ’ ಎಂದರು ಪ್ರಜ್ಞಾ. ಆ ಬಳಿಕ ಧನರಾಜ್ ಅವರು ಸೈಲೆಂಟ್ ಆದರು. ಇತ್ತೀಚೆಗೆ ಜನಿಸಿದ ಮಗುವನ್ನು ಎತ್ತಾಡಿ ಧನರಾಜ್ ಖುಷಿಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ