AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಬಿಗ್ ಬಾಸ್​ನಲ್ಲಿ 7 ಮಂದಿ ನಾಮಿನೇಟ್; ಯಾರಿಗೆ ಕಾದಿದೆ ಗೇಟ್​ಪಾಸ್​?

ಕಳೆದ ವಾರ ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಿಂದ ಮಾಸನಾ ಎಲಿಮಿನೇಟ್ ಆಗಿದ್ದರು. ಈ ವಾರ 7 ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಯಾರಿಗೆ ಎಷ್ಟು ಬಲ ಇದೆ? ಯಾರ ದುರ್ಬಲತೆ ಏನು ಎಂಬ ಲೆಕ್ಕಾಚಾರ ಹಾಕಲಾಗುತ್ತಿದೆ. ದಿನ ಕಳೆದಂತೆಲ್ಲ ಬಿಗ್ ಬಾಸ್​ ಮನೆಯೊಳಗಿನ ರೋಚಕತೆ ಜಾಸ್ತಿ ಆಗುತ್ತಿದೆ. ಅದೇ ರೀತಿ ಜಗಳವೂ ಹೆಚ್ಚಾಗುತ್ತಿದೆ.

ಈ ವಾರ ಬಿಗ್ ಬಾಸ್​ನಲ್ಲಿ 7 ಮಂದಿ ನಾಮಿನೇಟ್; ಯಾರಿಗೆ ಕಾದಿದೆ ಗೇಟ್​ಪಾಸ್​?
ಬಿಗ್ ಬಾಸ್​ ಕನ್ನಡ ನಾಮಿನೇಷನ್
ಮದನ್​ ಕುಮಾರ್​
|

Updated on: Nov 07, 2024 | 10:32 PM

Share

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ 39 ದಿನಗಳ ಕಳೆದಿವೆ. ಪ್ರತಿ ವಾರವೂ ಸ್ಪರ್ಧಿಗಳಿಗೆ ಎಲಿಮಿನೇಷನ್​ ಭಯ ಇರುತ್ತದೆ. ಮಾನಸಾ ಅವರು ಕಳೆದ ವಾರ ಬಿಗ್ ಬಾಸ್ ಮನೆಯಿಂದ ಹೊರಬಿದ್ದರು. ಈ ವಾರ ಯಾರು ಹೊರಗೆ ಹೋಗುತ್ತಾರೆ ಎಂಬ ಕೌತುಕ ಮೂಡಿದೆ. ನಾಮಿನೇಷನ್​ನಲ್ಲಿ ಒಟ್ಟು 7 ಜನರ ಹೆಸರು ಇದೆ. ಧರ್ಮ ಕೀರ್ತಿರಾಜ್, ಭವ್ಯಾ, ಚೈತ್ರಾ ಕುಂದಾಪುರ, ತ್ರಿವಿಕ್ರಮ್, ಮೋಕ್ಷಿತಾ ಪೈ, ಗೋಲ್ಡ್ ಸುರೇಶ್ ಹಾಗೂ ಧನರಾಜ್ ಅವರು ನಾಮಿನೇಟ್​ ಆಗಿದ್ದಾರೆ. ಇವರ ಪೈಕಿ ಒಬ್ಬರಿಗೆ ಈ ವಾರ ಬಿಗ್ ಬಾಸ್ ಪಯಣ ಅಂತ್ಯವಾಗಲಿದೆ.

ಭವ್ಯ ಅವರು ಟಾಸ್ಕ್​ನಲ್ಲಿ ಚೆನ್ನಾಗಿಯೇ ಆಡುತ್ತಿದ್ದಾರೆ. ಆದರೆ ಮನರಂಜನೆ ವಿಚಾರದಲ್ಲಿ ಅವರು ಹಿಂದೆ ಬೀಳುತ್ತಿದ್ದಾರೆ. ಹಾಗಾಗಿ ಅವರಿಗೆ ಎಲಿಮಿನೇಷನ್​ನ ಆತಂಕ ಇದೆ. ಚೈತ್ರಾ ಕುಂದಾಪುರ ಅವರು ಕೇವಲ ಮಾತಿನ ಮೂಲಕವೇ ಆಟ ಆಡಲು ಪ್ರಯತ್ನಿಸುತ್ತಾರೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಪ್ರತಿ ವಾರ ಕೂಡ ಅವರು ನಾಮಿನೇಟ್​ ಆಗುತ್ತಿದ್ದಾರೆ. ಈ ವಾರ ಅವರಿಗೆ ಪ್ರೇಕ್ಷಕರ ಬೆಂಬಲ ಸಿಗುತ್ತಾ ಅಥವಾ ಇಲ್ಲವಾ ಎಂಬುದು ಸದ್ಯದಲ್ಲೇ ತಿಳಿಯಲಿದೆ.

ಧನರಾಜ್ ಅವರು ಕಾಮಿಡಿ ಮಾಡುತ್ತಿದ್ದಾರೆ. ಆದರೆ ಎಲ್ಲರ ಜೊತೆಗೂ ಅವರು ಬೆರೆಯುತ್ತಿಲ್ಲ. ಕೇವಲ ಹನುಮಂತನ ಜೊತೆ ಅವರು ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಅಲ್ಲದೇ, ಅವರು ಸ್ಟ್ರಾಂಗ್ ಸ್ಪರ್ಧಿ ಕೂಡ ಅಲ್ಲ. ಎಮೋಷನಲಿ ಅವರು ಕುಗ್ಗುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದ ಅವರು ಕಡಿಮೆ ವೋಟ್​ ಪಡೆದರೂ ಅಚ್ಚರಿ ಏನಿಲ್ಲ. ಹಾಗೆಯೇ ಧರ್ಮ ಕೀರ್ತಿರಾಜ್ ಅವರು ತಮ್ಮ ಛಾಪು ಮೂಡಿಸುವುದು ಬಾಕಿ ಇದೆ. ಅವರಿಗೆ ಜನರು ಇನ್ನಷ್ಟು ಸಮಯಾವಕಾಶ ನೀಡುತ್ತಾರೋ ಇಲ್ಲವೋ ಎಂಬ ಅನುಮಾನ ಮೂಡಿದೆ.

ಎರಡು ವಾರದ ಹಿಂದೆ ಮೋಕ್ಷಿತಾ ಅವರ ಆಟದ ವೈಖರಿ ಬದಲಾಯಿತು. ತ್ರಿವಿಕ್ರಮ್ ವಿರುದ್ಧ ಮೋಕ್ಷಿತಾ ತಿರುಗಿ ಬಿದ್ದಿದ್ದಾರೆ. ಇಷ್ಟು ದಿನ ಆಪ್ತವಾಗಿದ್ದ ಉಗ್ರಂ ಮಂಜು ಜೊತೆಗೂ ಅವರು ಕಿರಿಕ್ ಮಾಡಿಕೊಂಡಿದ್ದಾರೆ. ಸಾಧ್ಯವಾದಷ್ಟು ನಿಷ್ಠುರವಾಗಿ ಅವರು ನಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಮೋಕ್ಷಿತಾ ಅವರನ್ನು ಈ ವಾರ ವೀಕ್ಷಕರು ಸೇವ್ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ: ಧನರಾಜ್, ಹನುಮಂತ ಫ್ರೇಮ್​ನಲ್ಲಿ ಇದ್ದರೆ ಬಿಗ್ ಬಾಸ್ ಪ್ರೇಕ್ಷಕರಿಗೆ ಡಬಲ್ ಕಾಮಿಡಿ

ಗೋಲ್ಡ್ ಸುರೇಶ್ ಅವರ ಆಟ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಮನರಂಜನೆ ನೀಡುವ ವಿಚಾರದಲ್ಲಿ ಅವರ ಯಾವಾಗಲೂ ಹಿಂದಿರುತ್ತಾರೆ. ಅಲ್ಲದೇ, ಅವರ ಕಾಲಿಗೆ ಈ ವಾರ ಏಟು ಕೂಡ ಆಗಿದೆ. ಬೇಗ ಅವರು ಚೇತರಿಸಿಕೊಳ್ಳದೇ ಇದ್ದರೆ ಮುಂದಿನ ದಿನಗಳ ಟಾಸ್ಕ್​ಗಳಲ್ಲಿ ಅವರು ಹಿಂದುಳಿಯುವ ಸಾಧ್ಯತೆ ಇದೆ. ಇನ್ನು, ತ್ರಿವಿಕ್ರಮ್ ಅವರು ಹಲವರ ವಿರೋಧ ಕಟ್ಟಿಕೊಂಡಿದ್ದಾರೆ. ಆದರೆ ಅವರು ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ