Dhanya Balakrishna: ಕನ್ನಡದ ನಟಿ ಧನ್ಯಾ ಬಾಲಕೃಷ್ಣ ಜತೆ ಎರಡನೇ ಮದುವೆ ಆದ ತಮಿಳು ನಿರ್ದೇಶಕ

Dhanya Balakrishna: ಈ ಬಗ್ಗೆ ಬಾಲಾಜಿ ಅವರು ಕೋರ್ಟ್​ ಮೊರೆ ಹೋಗಿದ್ದಾರೆ. ನಟಿ ಕಲ್ಪಿಕಾ ಗಣೇಶ್ ಅವರು ತಮ್ಮ ಮದುವೆ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡಿ ಮಾನ ಹಾನಿ ಮಾಡಿದ್ದಾರೆ ಎಂದು ಬಾಲಾಜಿ ಅವರು ಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

Dhanya Balakrishna: ಕನ್ನಡದ ನಟಿ ಧನ್ಯಾ ಬಾಲಕೃಷ್ಣ ಜತೆ ಎರಡನೇ ಮದುವೆ ಆದ ತಮಿಳು ನಿರ್ದೇಶಕ
ಧನ್ಯಾ ಬಾಲಕೃಷ್ಣ
Follow us
| Updated By: ರಾಜೇಶ್ ದುಗ್ಗುಮನೆ

Updated on:Dec 29, 2022 | 9:29 AM

ಕರ್ನಾಟಕ ಮೂಲದ ನಟಿ ಧನ್ಯಾ ಬಾಲಕೃಷ್ಣ (Dhanya Balakrishna) ಅವರು ತಮಿಳು ಹಾಗೂ ತೆಲುಗಿನಲ್ಲಿ ಗುರುತಿಸಿಕೊಂಡಿದ್ದೇ ಹೆಚ್ಚು. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ಅವರ ಖಾಸಗಿ ಜೀವನದ ವಿಚಾರದ ಬಗೆಗಿನ ಚರ್ಚೆ ಜೋರಾಗಿತ್ತು. ತಮಿಳು ನಿರ್ದೇಶಕ ಬಾಲಾಜಿ ಮೋಹನ್ (Balaji Mohan) ಜತೆ ಅವರು ಸೀಕ್ರೆಟ್ ಆಗಿ ಮದುವೆ ಆಗಿದ್ದಾರೆ ಎನ್ನಲಾಗಿತ್ತು. ಈಗ ಧನ್ಯಾ ಬಾಲಕೃಷ್ಣ ಹಾಗೂ ಬಾಲಾಜಿ ಮೋಹನ್ ಮದುವೆ ಆಗಿರುವ ವಿಚಾರ ಅಧಿಕೃತವಾಗಿದೆ.

ಈ ಬಗ್ಗೆ ಬಾಲಾಜಿ ಅವರು ಕೋರ್ಟ್​ ಮೊರೆ ಹೋಗಿದ್ದಾರೆ. ನಟಿ ಕಲ್ಪಿಕಾ ಗಣೇಶ್ ಅವರು ತಮ್ಮ ಮದುವೆ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡಿ ಮಾನ ಹಾನಿ ಮಾಡಿದ್ದಾರೆ ಎಂದು ಬಾಲಾಜಿ ಅವರು ಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ‘ನಾನು ಹಾಗೂ ಧನ್ಯಾ ಬಾಲಕೃಷ್ಣ ಅವರು ಕಳೆದ ಜನವರಿ 23ರಂದು ಮದುವೆ ಆಗಿದ್ದೇವೆ. ಆದರೆ ಕಲ್ಪಿಕಾ ಗಣೇಶ್ ಅವರು ನಮ್ಮ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಾ ಬಂದಿದ್ದಾರೆ. ಇದರಿಂದ ಮಾನ ಹಾನಿ ಆಗಿದೆ’ ಎಂದು ಅರ್ಜಿಯಲ್ಲಿ ಬಾಲಾಜಿ ಬರೆದುಕೊಂಡಿದ್ದಾರೆ. ಸದ್ಯ ಈ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡದಂತೆ ಕೋರ್ಟ್​ ಕಲ್ಪಿಕಾಗೆ ನಿರ್ದೇಶನ ನೀಡಿದೆ.

ಬಾಲಾಜಿಗೆ ಎರಡನೇ ಮದುವೆ

ಬಾಲಾಜಿ ಅವರು ಈ ಮೊದಲು ತಮ್ಮ ಬಾಲ್ಯದ ಗೆಳೆತಿಯನ್ನು ಮದುವೆ ಆಗಿದ್ದರು. ಆದರೆ, ಮದುವೆ ಆಗಿ ಒಂದೇ ವರ್ಷಕ್ಕೆ ಇಬ್ಬರೂ ಬೇರೆ ಆದರು. ಹೊಂದಾಣಿಕೆ ಆಗದ ಕಾರಣ ತಾವು ಬೇರೆ ಆಗುತ್ತಿದ್ದೇವೆ ಎಂದು ಬಾಲಾಜಿ ಹೇಳಿದ್ದರು.

ಧನ್ಯಾ ಬಾಲಕೃಷ್ಣ ಯಾರು?

ಧನ್ಯಾ ಮೂಲತಃ ಬೆಂಗಳೂರಿನವರು. ಅವರು 2011ರಲ್ಲಿ ತಮಿಳು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದರು. ನಂತರ ಹಲವು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ‘ಸಾರ್ವಜನಿಕರಿಗೆ ಸುವರ್ಣಾವಕಾಶ’, ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ಹೆಸರಿನ ಕನ್ನಡ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕೆಲ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:16 am, Thu, 29 December 22

ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ