AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಮ್ಯತೆಯೇ ಮುಳುವಾಯಿತು; ಬಿಗ್ ಬಾಸ್ ಮನೆಯಿಂದ ಧರ್ಮ ಹೊರ ಹೋಗಲು ಕಾರಣವಾದ ಅಂಶಗಳಿವು

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧರ್ಮ ಹಾಗೂ ಅನುಷಾ ಒಟ್ಟಿಗೆ ದೊಡ್ಮನೆ ಸೇರಿದರು. ಅನುಷಾ ಹಾಗೂ ಧರ್ಮ ಕ್ಲೋಸ್ ಆಗಿ ಇದ್ದರು. ಇವರು ಒಂದೇ ವಾರ ಎಲಿಮಿನೇಟ್ ಆಗುತ್ತಾರೇನೋ ಎನ್ನುವ ಅನುಮಾನ ಮೂಡಿತ್ತು. ಈ ಮೊದಲು ಅನುಷಾ ಅವರು ಎಲಿಮಿನೇಟ್ ಆಗಿದ್ದರು. ಈ ವಾರ ಅವರು ಎಲಿಮಿನೇಟ್ ಆಗಿದ್ದಾರೆ.

ಸೌಮ್ಯತೆಯೇ ಮುಳುವಾಯಿತು; ಬಿಗ್ ಬಾಸ್ ಮನೆಯಿಂದ ಧರ್ಮ ಹೊರ ಹೋಗಲು ಕಾರಣವಾದ ಅಂಶಗಳಿವು
ಧರ್ಮ
ರಾಜೇಶ್ ದುಗ್ಗುಮನೆ
|

Updated on: Nov 25, 2024 | 7:32 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧರ್ಮ ಅವರು ಎಲಿಮಿನೇಟ್ ಆಗಿದ್ದಾರೆ. ದೊಡ್ಮನೆಯಲ್ಲಿ ಹಲವು ದಿನಗಳ ಕಾಲ ಉತ್ತಮವಾಗಿ ಆಟ ಆಡಿದ ಅವರು ಕೊನೆಗೂ ಔಟ್ ಆಗಿದ್ದಾರೆ. ಈ ಮೊದಲು ಅವರ ಗೆಳತಿ ಅನುಷಾ ರೈ ಅವರು ಎಲಿಮಿನೇಟ್ ಆಗಿದ್ದರು. ಇದಾದ ಬೆನ್ನಲ್ಲೇ ಧರ್ಮ ಕೂಡ ಮನೆಯಿಂದ ಹೊರ ಹೋಗಿದ್ದಾರೆ. ಅವರು ಸೌಮ್ಯವಾಗಿ ನಡೆದುಕೊಳ್ಳುತ್ತಿದ್ದುದೇ ಮುಳುವಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧರ್ಮ ಹಾಗೂ ಅನುಷಾ ಒಟ್ಟಿಗೆ ದೊಡ್ಮನೆ ಸೇರಿದರು. ಅನುಷಾ ಹಾಗೂ ಧರ್ಮ ಕ್ಲೋಸ್ ಆಗಿ ಇದ್ದರು. ಇವರು ಒಂದೇ ವಾರ ಎಲಿಮಿನೇಟ್ ಆಗುತ್ತಾರೇನೋ ಎನ್ನುವ ಅನುಮಾನ ಮೂಡಿತ್ತು. ಅನುಷಾ ಎಲಿಮಿನೇಟ್ ಆಗುವಾಗ ಕೊನೆಯಲ್ಲಿ ಇದ್ದಿದ್ದು ಧರ್ಮ ಅವರೇ ಆಗಿತ್ತು. ಆ ವಾರ ಅವರು ಉಳಿದುಕೊಂಡಿದ್ದರು. ಈ ವಾರ ಅವರು ಎಲಿಮಿನೇಟ್ ಆಗಿದ್ದಾರೆ.

ದೊಡ್ಮನೆಯಲ್ಲಿ ಇರಬೇಕು ಎಂದರೆ ರಫ್ ಆ್ಯಂಡ್ ಟಫ್ ಆಗಿರಬೇಕು. ಆದರೆ, ಧರ್ಮ ಅವರಲ್ಲಿ ಆ ಯಾವ ಅಂಶವೂ ಇರಲಿಲ್ಲ. ಅವರು ಸದಾ ಕೂಲ್ ಆಗಿಯೇ ಇರುತ್ತಿದ್ದರು. ಎಂಥದ್ದೇ ಪರಿಸ್ಥಿತಿ ಬಂದರೂ ಅವರು ಕಿತ್ತಾಟಕ್ಕೆ ಹೋಗುತ್ತಿರಲಿಲ್ಲ. ತಾಳ್ಮೆ ಕಳೆದುಕೊಂಡು ಒಂದು ದಿನ ಕೂಗಾಡಿದವರಲ್ಲ. ಇದೆಲ್ಲವೂ ಅವರ ತಾಳ್ಮೆಯ ಸ್ವರೂಪವನ್ನು ತೋರಿಸುತ್ತದೆ. ಇದು ಅವರಿಗೆ ಮುಳುವಾಗಿದೆ.

ಇದನ್ನೂ ಓದಿ: ಬಿಗ್ ಬಾಸ್​ ಶೋನಿಂದ ಎಲಿಮಿನೇಟ್​ ಆದ ನಟ ಧರ್ಮ ಕೀರ್ತಿರಾಜ್

ಅವರಿಗಿಂತ ಕೊನೆಗೆ ವೈಲ್ಡ್ ಕಾರ್ಡ್​ನಲ್ಲಿ ಬಂದ ಹನುಮಂತ, ರಜತ್, ಶೋಭಾ ಶೆಟ್ಟಿ ಸಾಕಷ್ಟು ಗಮನ ಸೆಳೆಯುತ್ತಿದ್ದರು. ಆದರೆ, ಧರ್ಮ ಎಲ್ಲಿಯೂ ಹೈಲೈಟ್ ಆಗುತ್ತಾ ಇರಲಿಲ್ಲ. ಈ ಮೊದಲು ಲಾಯರ್ ಜಗದೀಶ್ ವಿರುದ್ಧ ಇಡೀ ಮನೆ ತಿರುಗಿ ಬಿದ್ದಾಗಲೂ ಧರ್ಮ ಅವರು ಫೈಟ್​ಗೆ ಹೋಗಿರಲಿಲ್ಲ. ಇದು ಅವರ ಸೌಮ್ಯತೆಯನ್ನು ಎತ್ತಿ ತೋರಿಸುತ್ತದೆ. ಒಟ್ಟಾರೆ ಈ ಸೌಮ್ಯತೆಯ ಕಾರಣದಿಂದಲೇ ಅವರು ಎಲಿಮಿನೇಟ್ ಆಗಬೇಕಾದ ಪರಿಸ್ಥಿತಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!