AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಮ್ಯತೆಯೇ ಮುಳುವಾಯಿತು; ಬಿಗ್ ಬಾಸ್ ಮನೆಯಿಂದ ಧರ್ಮ ಹೊರ ಹೋಗಲು ಕಾರಣವಾದ ಅಂಶಗಳಿವು

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧರ್ಮ ಹಾಗೂ ಅನುಷಾ ಒಟ್ಟಿಗೆ ದೊಡ್ಮನೆ ಸೇರಿದರು. ಅನುಷಾ ಹಾಗೂ ಧರ್ಮ ಕ್ಲೋಸ್ ಆಗಿ ಇದ್ದರು. ಇವರು ಒಂದೇ ವಾರ ಎಲಿಮಿನೇಟ್ ಆಗುತ್ತಾರೇನೋ ಎನ್ನುವ ಅನುಮಾನ ಮೂಡಿತ್ತು. ಈ ಮೊದಲು ಅನುಷಾ ಅವರು ಎಲಿಮಿನೇಟ್ ಆಗಿದ್ದರು. ಈ ವಾರ ಅವರು ಎಲಿಮಿನೇಟ್ ಆಗಿದ್ದಾರೆ.

ಸೌಮ್ಯತೆಯೇ ಮುಳುವಾಯಿತು; ಬಿಗ್ ಬಾಸ್ ಮನೆಯಿಂದ ಧರ್ಮ ಹೊರ ಹೋಗಲು ಕಾರಣವಾದ ಅಂಶಗಳಿವು
ಧರ್ಮ
ರಾಜೇಶ್ ದುಗ್ಗುಮನೆ
|

Updated on: Nov 25, 2024 | 7:32 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧರ್ಮ ಅವರು ಎಲಿಮಿನೇಟ್ ಆಗಿದ್ದಾರೆ. ದೊಡ್ಮನೆಯಲ್ಲಿ ಹಲವು ದಿನಗಳ ಕಾಲ ಉತ್ತಮವಾಗಿ ಆಟ ಆಡಿದ ಅವರು ಕೊನೆಗೂ ಔಟ್ ಆಗಿದ್ದಾರೆ. ಈ ಮೊದಲು ಅವರ ಗೆಳತಿ ಅನುಷಾ ರೈ ಅವರು ಎಲಿಮಿನೇಟ್ ಆಗಿದ್ದರು. ಇದಾದ ಬೆನ್ನಲ್ಲೇ ಧರ್ಮ ಕೂಡ ಮನೆಯಿಂದ ಹೊರ ಹೋಗಿದ್ದಾರೆ. ಅವರು ಸೌಮ್ಯವಾಗಿ ನಡೆದುಕೊಳ್ಳುತ್ತಿದ್ದುದೇ ಮುಳುವಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧರ್ಮ ಹಾಗೂ ಅನುಷಾ ಒಟ್ಟಿಗೆ ದೊಡ್ಮನೆ ಸೇರಿದರು. ಅನುಷಾ ಹಾಗೂ ಧರ್ಮ ಕ್ಲೋಸ್ ಆಗಿ ಇದ್ದರು. ಇವರು ಒಂದೇ ವಾರ ಎಲಿಮಿನೇಟ್ ಆಗುತ್ತಾರೇನೋ ಎನ್ನುವ ಅನುಮಾನ ಮೂಡಿತ್ತು. ಅನುಷಾ ಎಲಿಮಿನೇಟ್ ಆಗುವಾಗ ಕೊನೆಯಲ್ಲಿ ಇದ್ದಿದ್ದು ಧರ್ಮ ಅವರೇ ಆಗಿತ್ತು. ಆ ವಾರ ಅವರು ಉಳಿದುಕೊಂಡಿದ್ದರು. ಈ ವಾರ ಅವರು ಎಲಿಮಿನೇಟ್ ಆಗಿದ್ದಾರೆ.

ದೊಡ್ಮನೆಯಲ್ಲಿ ಇರಬೇಕು ಎಂದರೆ ರಫ್ ಆ್ಯಂಡ್ ಟಫ್ ಆಗಿರಬೇಕು. ಆದರೆ, ಧರ್ಮ ಅವರಲ್ಲಿ ಆ ಯಾವ ಅಂಶವೂ ಇರಲಿಲ್ಲ. ಅವರು ಸದಾ ಕೂಲ್ ಆಗಿಯೇ ಇರುತ್ತಿದ್ದರು. ಎಂಥದ್ದೇ ಪರಿಸ್ಥಿತಿ ಬಂದರೂ ಅವರು ಕಿತ್ತಾಟಕ್ಕೆ ಹೋಗುತ್ತಿರಲಿಲ್ಲ. ತಾಳ್ಮೆ ಕಳೆದುಕೊಂಡು ಒಂದು ದಿನ ಕೂಗಾಡಿದವರಲ್ಲ. ಇದೆಲ್ಲವೂ ಅವರ ತಾಳ್ಮೆಯ ಸ್ವರೂಪವನ್ನು ತೋರಿಸುತ್ತದೆ. ಇದು ಅವರಿಗೆ ಮುಳುವಾಗಿದೆ.

ಇದನ್ನೂ ಓದಿ: ಬಿಗ್ ಬಾಸ್​ ಶೋನಿಂದ ಎಲಿಮಿನೇಟ್​ ಆದ ನಟ ಧರ್ಮ ಕೀರ್ತಿರಾಜ್

ಅವರಿಗಿಂತ ಕೊನೆಗೆ ವೈಲ್ಡ್ ಕಾರ್ಡ್​ನಲ್ಲಿ ಬಂದ ಹನುಮಂತ, ರಜತ್, ಶೋಭಾ ಶೆಟ್ಟಿ ಸಾಕಷ್ಟು ಗಮನ ಸೆಳೆಯುತ್ತಿದ್ದರು. ಆದರೆ, ಧರ್ಮ ಎಲ್ಲಿಯೂ ಹೈಲೈಟ್ ಆಗುತ್ತಾ ಇರಲಿಲ್ಲ. ಈ ಮೊದಲು ಲಾಯರ್ ಜಗದೀಶ್ ವಿರುದ್ಧ ಇಡೀ ಮನೆ ತಿರುಗಿ ಬಿದ್ದಾಗಲೂ ಧರ್ಮ ಅವರು ಫೈಟ್​ಗೆ ಹೋಗಿರಲಿಲ್ಲ. ಇದು ಅವರ ಸೌಮ್ಯತೆಯನ್ನು ಎತ್ತಿ ತೋರಿಸುತ್ತದೆ. ಒಟ್ಟಾರೆ ಈ ಸೌಮ್ಯತೆಯ ಕಾರಣದಿಂದಲೇ ಅವರು ಎಲಿಮಿನೇಟ್ ಆಗಬೇಕಾದ ಪರಿಸ್ಥಿತಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್