AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಶೋನಿಂದ ಎಲಿಮಿನೇಟ್​ ಆದ ನಟ ಧರ್ಮ ಕೀರ್ತಿರಾಜ್

ನಟ ಧರ್ಮ ಕೀರ್ತಿರಾಜ್​ ಅವರು ಬೇರೆ ಎಲ್ಲರಿಗಿಂತಲೂ ಭಿನ್ನವಾಗಿ ಗುರುತಿಸಿಕೊಂಡಿದ್ದರು. ಆದರೆ ಹೆಚ್ಚಾಗಿ ಅವರು ಕಾಣಿಸಿಕೊಳ್ಳುತ್ತಿರಲಿಲ್ಲ. ಬೇರೆ ಸ್ಪರ್ಧಿಗಳ ರೀತಿ ಧರ್ಮ ಜಗಳ ಮಾಡುತ್ತಿರಲಿಲ್ಲ. ಸಾಧ್ಯವಾದಷ್ಟು ಅವರು ಕೂಲ್​ ಆಗಿ ಇರುತ್ತಿದ್ದರು. ಈ ವಾರ ಅವರ ಆಟ ಅಂತ್ಯವಾಗಿದೆ. ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಿಂದ ಅವರು ಎಲಿಮಿನೇಟ್ ಆಗಿದ್ದಾರೆ.

ಬಿಗ್ ಬಾಸ್​ ಶೋನಿಂದ ಎಲಿಮಿನೇಟ್​ ಆದ ನಟ ಧರ್ಮ ಕೀರ್ತಿರಾಜ್
ಧರ್ಮ ಕೀರ್ತಿರಾಜ್​
ಮದನ್​ ಕುಮಾರ್​
|

Updated on: Nov 24, 2024 | 10:47 PM

Share

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ ಧರ್ಮ ಕೀರ್ತಿರಾಜ್ ಅವರು ಎಲಿಮಿನೇಟ್​ ಆಗಿದ್ದಾರೆ. ಆಟದಲ್ಲಾಗಲೀ, ಮನರಂಜನೆಯಲ್ಲಾಗಲೀ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿಕೊಳ್ಳದ ಅವರು ಆಟವನ್ನು ಅರ್ಧಕ್ಕೆ ನಿಲ್ಲಿಸುವಂತಾಗಿದೆ. ನಟನಾಗಿದ್ದರೂ ಕೂಡ ಧರ್ಮ ಅವರು ಬಿಗ್ ಬಾಸ್​ ಮನೆಯಲ್ಲಿ ಹೆಚ್ಚು ಮನರಂಜನೆ ನೀಡಲಿಲ್ಲ. ಎಲ್ಲ ಸ್ಪರ್ಧಿಗಳ ಜೊತೆಗೂ ಅವರು ಹೆಚ್ಚು ಬೆರೆಯಲಿಲ್ಲ. ಕಳೆದ ವಾರ ಅವರ ಸ್ನೇಹಿತೆ ಅನುಷಾ ರೈ ಎಲಿಮಿನೇಟ್​ ಆಗಿದ್ದರು. ಈ ವಾರ ಧರ್ಮ ಔಟ್ ಆಗಿದ್ದಾರೆ.

ಧರ್ಮ ಕೀರ್ತಿರಾಜ್​ ಅವರು ತಾವಾಗಿಯೇ ಕಾಲು ಕೆರೆದುಕೊಂಡು ಜಗಳಕ್ಕೆ ಹೋಗುವವರಲ್ಲ. ಈ ಮೊದಲು ಜಗದೀಶ್​ ವಿರುದ್ಧ ಇಡೀ ಮನೆಯೇ ತಿರುಗಿ ಬಿದ್ದಿದ್ದಾಗ ಧರ್ಮ ಅವರು ಅನುಷಾ ಜೊತೆ ಕಿಚನ್​ನಲ್ಲಿ ಕೂಲ್​ ಆಗಿದ್ದರು. ಅವರು ದೊಡ್ಮನೆಯಲ್ಲಿ ಕೂಗಾಡಿದ್ದು ತುಂಬಾ ಕಡಿಮೆ. ಅವರ ಈ ಒಳ್ಳೆಯತನವೇ ಅವರಿಗೆ ಮುಳುವಾಗಿದೆ ಎಂದರೂ ತಪ್ಪೇನಿಲ್ಲ. ಯಾಕೆಂದರೆ, ಬಿಗ್ ಬಾಸ್ ಮನೆಯಲ್ಲಿ ಕೂಗಾಡುತ್ತಾ ಸದ್ದು ಮಾಡುವವರೇ ಹೈಲೈಟ್​ ಆಗುವುದು ಜಾಸ್ತಿ.

2 ವಾರ ಮೊದಲೇ ಬಿಗ್ ಬಾಸ್ ಮನೆಯಿಂದ ತಾವು ಹೊರಗೆ ಹೋಗಬೇಕು ಎಂದು ಧರ್ಮ ಕೀರ್ತಿರಾಜ್​ ಅವರು ನಿರ್ಧರಿಸಿದ್ದರು. ಯಾಕೆಂದರೆ, ಈ ಹಿಂದೆ ‘ಬಿಗ್ ಬಾಸ್ ಮನೆಯಲ್ಲಿ ನಾಲಾಯಕ್ ಯಾರು’ ಎಂಬ ಪ್ರಶ್ನೆಗೆ ಅನೇಕರು ಧರ್ಮ ಅವರ ಹೆಸರನ್ನು ಹೇಳಿದ್ದರು. ಆ ಮಾತು ಕೇಳಿಸಿಕೊಂಡಿದ್ದ ಅವರಿಗೆ ಬಹಳ ನೋವಾಗಿತ್ತು. ಹಾಗಾಗಿ ಅವರು ಬಿಗ್​ ಬಾಸ್​ನಿಂದ ಹೊರಗೆ ಹೋಗುವುದೇ ಸೂಕ್ತ ಎಂದು ತೀರ್ಮಾನಿಸಿದ್ದರು.

ಇದನ್ನೂ ಓದಿ: ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್

ಈ ವಾರ ಧರ್ಮ ಕೀರ್ತಿರಾಜ್​ ಅವರೇ ಹೊರಗೆ ಹೋಗುತ್ತಾರೆ ಎಂದು ವೀಕ್ಷಕರು ಕೂಡ ಊಹಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅನೇಕರು ಕಮೆಂಟ್ ಮಾಡಿದ್ದರು. ಬಿಗ್ ಬಾಸ್ ಕಾರ್ಯಕ್ರಮದ ಯಾವುದೇ ಪ್ರೋಮೋದಲ್ಲಿ ಕೂಡ ಧರ್ಮ ಅವರು ಕಾಣಿಸಿಕೊಳ್ಳುತ್ತಿರಲಿಲ್ಲ. ಅಂದರೆ, ಅವರು ಹೈಲೈಟ್​ ಆಗುವಂತಹ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಹಾಗಾಗಿ ಅವರು ಎಲಿಮಿನೇಟ್​ ಆಗಿದ್ದರಲ್ಲಿ ಅಚ್ಚರಿ ಕೂಡ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ