AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಶೋನಿಂದ ಎಲಿಮಿನೇಟ್​ ಆದ ನಟ ಧರ್ಮ ಕೀರ್ತಿರಾಜ್

ನಟ ಧರ್ಮ ಕೀರ್ತಿರಾಜ್​ ಅವರು ಬೇರೆ ಎಲ್ಲರಿಗಿಂತಲೂ ಭಿನ್ನವಾಗಿ ಗುರುತಿಸಿಕೊಂಡಿದ್ದರು. ಆದರೆ ಹೆಚ್ಚಾಗಿ ಅವರು ಕಾಣಿಸಿಕೊಳ್ಳುತ್ತಿರಲಿಲ್ಲ. ಬೇರೆ ಸ್ಪರ್ಧಿಗಳ ರೀತಿ ಧರ್ಮ ಜಗಳ ಮಾಡುತ್ತಿರಲಿಲ್ಲ. ಸಾಧ್ಯವಾದಷ್ಟು ಅವರು ಕೂಲ್​ ಆಗಿ ಇರುತ್ತಿದ್ದರು. ಈ ವಾರ ಅವರ ಆಟ ಅಂತ್ಯವಾಗಿದೆ. ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಿಂದ ಅವರು ಎಲಿಮಿನೇಟ್ ಆಗಿದ್ದಾರೆ.

ಬಿಗ್ ಬಾಸ್​ ಶೋನಿಂದ ಎಲಿಮಿನೇಟ್​ ಆದ ನಟ ಧರ್ಮ ಕೀರ್ತಿರಾಜ್
ಧರ್ಮ ಕೀರ್ತಿರಾಜ್​
ಮದನ್​ ಕುಮಾರ್​
|

Updated on: Nov 24, 2024 | 10:47 PM

Share

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ ಧರ್ಮ ಕೀರ್ತಿರಾಜ್ ಅವರು ಎಲಿಮಿನೇಟ್​ ಆಗಿದ್ದಾರೆ. ಆಟದಲ್ಲಾಗಲೀ, ಮನರಂಜನೆಯಲ್ಲಾಗಲೀ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿಕೊಳ್ಳದ ಅವರು ಆಟವನ್ನು ಅರ್ಧಕ್ಕೆ ನಿಲ್ಲಿಸುವಂತಾಗಿದೆ. ನಟನಾಗಿದ್ದರೂ ಕೂಡ ಧರ್ಮ ಅವರು ಬಿಗ್ ಬಾಸ್​ ಮನೆಯಲ್ಲಿ ಹೆಚ್ಚು ಮನರಂಜನೆ ನೀಡಲಿಲ್ಲ. ಎಲ್ಲ ಸ್ಪರ್ಧಿಗಳ ಜೊತೆಗೂ ಅವರು ಹೆಚ್ಚು ಬೆರೆಯಲಿಲ್ಲ. ಕಳೆದ ವಾರ ಅವರ ಸ್ನೇಹಿತೆ ಅನುಷಾ ರೈ ಎಲಿಮಿನೇಟ್​ ಆಗಿದ್ದರು. ಈ ವಾರ ಧರ್ಮ ಔಟ್ ಆಗಿದ್ದಾರೆ.

ಧರ್ಮ ಕೀರ್ತಿರಾಜ್​ ಅವರು ತಾವಾಗಿಯೇ ಕಾಲು ಕೆರೆದುಕೊಂಡು ಜಗಳಕ್ಕೆ ಹೋಗುವವರಲ್ಲ. ಈ ಮೊದಲು ಜಗದೀಶ್​ ವಿರುದ್ಧ ಇಡೀ ಮನೆಯೇ ತಿರುಗಿ ಬಿದ್ದಿದ್ದಾಗ ಧರ್ಮ ಅವರು ಅನುಷಾ ಜೊತೆ ಕಿಚನ್​ನಲ್ಲಿ ಕೂಲ್​ ಆಗಿದ್ದರು. ಅವರು ದೊಡ್ಮನೆಯಲ್ಲಿ ಕೂಗಾಡಿದ್ದು ತುಂಬಾ ಕಡಿಮೆ. ಅವರ ಈ ಒಳ್ಳೆಯತನವೇ ಅವರಿಗೆ ಮುಳುವಾಗಿದೆ ಎಂದರೂ ತಪ್ಪೇನಿಲ್ಲ. ಯಾಕೆಂದರೆ, ಬಿಗ್ ಬಾಸ್ ಮನೆಯಲ್ಲಿ ಕೂಗಾಡುತ್ತಾ ಸದ್ದು ಮಾಡುವವರೇ ಹೈಲೈಟ್​ ಆಗುವುದು ಜಾಸ್ತಿ.

2 ವಾರ ಮೊದಲೇ ಬಿಗ್ ಬಾಸ್ ಮನೆಯಿಂದ ತಾವು ಹೊರಗೆ ಹೋಗಬೇಕು ಎಂದು ಧರ್ಮ ಕೀರ್ತಿರಾಜ್​ ಅವರು ನಿರ್ಧರಿಸಿದ್ದರು. ಯಾಕೆಂದರೆ, ಈ ಹಿಂದೆ ‘ಬಿಗ್ ಬಾಸ್ ಮನೆಯಲ್ಲಿ ನಾಲಾಯಕ್ ಯಾರು’ ಎಂಬ ಪ್ರಶ್ನೆಗೆ ಅನೇಕರು ಧರ್ಮ ಅವರ ಹೆಸರನ್ನು ಹೇಳಿದ್ದರು. ಆ ಮಾತು ಕೇಳಿಸಿಕೊಂಡಿದ್ದ ಅವರಿಗೆ ಬಹಳ ನೋವಾಗಿತ್ತು. ಹಾಗಾಗಿ ಅವರು ಬಿಗ್​ ಬಾಸ್​ನಿಂದ ಹೊರಗೆ ಹೋಗುವುದೇ ಸೂಕ್ತ ಎಂದು ತೀರ್ಮಾನಿಸಿದ್ದರು.

ಇದನ್ನೂ ಓದಿ: ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್

ಈ ವಾರ ಧರ್ಮ ಕೀರ್ತಿರಾಜ್​ ಅವರೇ ಹೊರಗೆ ಹೋಗುತ್ತಾರೆ ಎಂದು ವೀಕ್ಷಕರು ಕೂಡ ಊಹಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅನೇಕರು ಕಮೆಂಟ್ ಮಾಡಿದ್ದರು. ಬಿಗ್ ಬಾಸ್ ಕಾರ್ಯಕ್ರಮದ ಯಾವುದೇ ಪ್ರೋಮೋದಲ್ಲಿ ಕೂಡ ಧರ್ಮ ಅವರು ಕಾಣಿಸಿಕೊಳ್ಳುತ್ತಿರಲಿಲ್ಲ. ಅಂದರೆ, ಅವರು ಹೈಲೈಟ್​ ಆಗುವಂತಹ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಹಾಗಾಗಿ ಅವರು ಎಲಿಮಿನೇಟ್​ ಆಗಿದ್ದರಲ್ಲಿ ಅಚ್ಚರಿ ಕೂಡ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ