AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಶೋನಿಂದ ಎಲಿಮಿನೇಟ್​ ಆದ ನಟ ಧರ್ಮ ಕೀರ್ತಿರಾಜ್

ನಟ ಧರ್ಮ ಕೀರ್ತಿರಾಜ್​ ಅವರು ಬೇರೆ ಎಲ್ಲರಿಗಿಂತಲೂ ಭಿನ್ನವಾಗಿ ಗುರುತಿಸಿಕೊಂಡಿದ್ದರು. ಆದರೆ ಹೆಚ್ಚಾಗಿ ಅವರು ಕಾಣಿಸಿಕೊಳ್ಳುತ್ತಿರಲಿಲ್ಲ. ಬೇರೆ ಸ್ಪರ್ಧಿಗಳ ರೀತಿ ಧರ್ಮ ಜಗಳ ಮಾಡುತ್ತಿರಲಿಲ್ಲ. ಸಾಧ್ಯವಾದಷ್ಟು ಅವರು ಕೂಲ್​ ಆಗಿ ಇರುತ್ತಿದ್ದರು. ಈ ವಾರ ಅವರ ಆಟ ಅಂತ್ಯವಾಗಿದೆ. ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಿಂದ ಅವರು ಎಲಿಮಿನೇಟ್ ಆಗಿದ್ದಾರೆ.

ಬಿಗ್ ಬಾಸ್​ ಶೋನಿಂದ ಎಲಿಮಿನೇಟ್​ ಆದ ನಟ ಧರ್ಮ ಕೀರ್ತಿರಾಜ್
ಧರ್ಮ ಕೀರ್ತಿರಾಜ್​
ಮದನ್​ ಕುಮಾರ್​
|

Updated on: Nov 24, 2024 | 10:47 PM

Share

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ ಧರ್ಮ ಕೀರ್ತಿರಾಜ್ ಅವರು ಎಲಿಮಿನೇಟ್​ ಆಗಿದ್ದಾರೆ. ಆಟದಲ್ಲಾಗಲೀ, ಮನರಂಜನೆಯಲ್ಲಾಗಲೀ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿಕೊಳ್ಳದ ಅವರು ಆಟವನ್ನು ಅರ್ಧಕ್ಕೆ ನಿಲ್ಲಿಸುವಂತಾಗಿದೆ. ನಟನಾಗಿದ್ದರೂ ಕೂಡ ಧರ್ಮ ಅವರು ಬಿಗ್ ಬಾಸ್​ ಮನೆಯಲ್ಲಿ ಹೆಚ್ಚು ಮನರಂಜನೆ ನೀಡಲಿಲ್ಲ. ಎಲ್ಲ ಸ್ಪರ್ಧಿಗಳ ಜೊತೆಗೂ ಅವರು ಹೆಚ್ಚು ಬೆರೆಯಲಿಲ್ಲ. ಕಳೆದ ವಾರ ಅವರ ಸ್ನೇಹಿತೆ ಅನುಷಾ ರೈ ಎಲಿಮಿನೇಟ್​ ಆಗಿದ್ದರು. ಈ ವಾರ ಧರ್ಮ ಔಟ್ ಆಗಿದ್ದಾರೆ.

ಧರ್ಮ ಕೀರ್ತಿರಾಜ್​ ಅವರು ತಾವಾಗಿಯೇ ಕಾಲು ಕೆರೆದುಕೊಂಡು ಜಗಳಕ್ಕೆ ಹೋಗುವವರಲ್ಲ. ಈ ಮೊದಲು ಜಗದೀಶ್​ ವಿರುದ್ಧ ಇಡೀ ಮನೆಯೇ ತಿರುಗಿ ಬಿದ್ದಿದ್ದಾಗ ಧರ್ಮ ಅವರು ಅನುಷಾ ಜೊತೆ ಕಿಚನ್​ನಲ್ಲಿ ಕೂಲ್​ ಆಗಿದ್ದರು. ಅವರು ದೊಡ್ಮನೆಯಲ್ಲಿ ಕೂಗಾಡಿದ್ದು ತುಂಬಾ ಕಡಿಮೆ. ಅವರ ಈ ಒಳ್ಳೆಯತನವೇ ಅವರಿಗೆ ಮುಳುವಾಗಿದೆ ಎಂದರೂ ತಪ್ಪೇನಿಲ್ಲ. ಯಾಕೆಂದರೆ, ಬಿಗ್ ಬಾಸ್ ಮನೆಯಲ್ಲಿ ಕೂಗಾಡುತ್ತಾ ಸದ್ದು ಮಾಡುವವರೇ ಹೈಲೈಟ್​ ಆಗುವುದು ಜಾಸ್ತಿ.

2 ವಾರ ಮೊದಲೇ ಬಿಗ್ ಬಾಸ್ ಮನೆಯಿಂದ ತಾವು ಹೊರಗೆ ಹೋಗಬೇಕು ಎಂದು ಧರ್ಮ ಕೀರ್ತಿರಾಜ್​ ಅವರು ನಿರ್ಧರಿಸಿದ್ದರು. ಯಾಕೆಂದರೆ, ಈ ಹಿಂದೆ ‘ಬಿಗ್ ಬಾಸ್ ಮನೆಯಲ್ಲಿ ನಾಲಾಯಕ್ ಯಾರು’ ಎಂಬ ಪ್ರಶ್ನೆಗೆ ಅನೇಕರು ಧರ್ಮ ಅವರ ಹೆಸರನ್ನು ಹೇಳಿದ್ದರು. ಆ ಮಾತು ಕೇಳಿಸಿಕೊಂಡಿದ್ದ ಅವರಿಗೆ ಬಹಳ ನೋವಾಗಿತ್ತು. ಹಾಗಾಗಿ ಅವರು ಬಿಗ್​ ಬಾಸ್​ನಿಂದ ಹೊರಗೆ ಹೋಗುವುದೇ ಸೂಕ್ತ ಎಂದು ತೀರ್ಮಾನಿಸಿದ್ದರು.

ಇದನ್ನೂ ಓದಿ: ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್

ಈ ವಾರ ಧರ್ಮ ಕೀರ್ತಿರಾಜ್​ ಅವರೇ ಹೊರಗೆ ಹೋಗುತ್ತಾರೆ ಎಂದು ವೀಕ್ಷಕರು ಕೂಡ ಊಹಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅನೇಕರು ಕಮೆಂಟ್ ಮಾಡಿದ್ದರು. ಬಿಗ್ ಬಾಸ್ ಕಾರ್ಯಕ್ರಮದ ಯಾವುದೇ ಪ್ರೋಮೋದಲ್ಲಿ ಕೂಡ ಧರ್ಮ ಅವರು ಕಾಣಿಸಿಕೊಳ್ಳುತ್ತಿರಲಿಲ್ಲ. ಅಂದರೆ, ಅವರು ಹೈಲೈಟ್​ ಆಗುವಂತಹ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಹಾಗಾಗಿ ಅವರು ಎಲಿಮಿನೇಟ್​ ಆಗಿದ್ದರಲ್ಲಿ ಅಚ್ಚರಿ ಕೂಡ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್