AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಎಲಿಮಿನೇಟ್ ಆಗೋದು ಯಾರು? ಇಲ್ಲಿದೆ ಸಾಧ್ಯಾಸಾಧ್ಯತೆ

ಈ ವಾರ ಚೈತ್ರಾ, ಮಂಜು, ತ್ರಿವಿಕ್ರಂ, ಮೋಕ್ಷಿತಾ, ಗೌತಮಿ, ಧರ್ಮ ಹಾಗೂ ಹನುಮಂತ ನಾಮಿನೇಷನ್ ಲಿಸ್ಟ್​ನಲ್ಲಿ ಇದ್ದಾರೆ. ಈಗಾಗಲೇ ಬಿಗ್ ಬಾಸ್​ನಲ್ಲಿ 50 ದಿನಗಳು ಪೂರ್ಣಗೊಂಡಿರುವುದರಿಂದ ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳು ಎಂದೇ ಗುರುತಿಸಲ್ಪಟ್ಟಿದ್ದಾರೆ ಎನ್ನಬಹುದು. ಸದ್ಯ ಜಿಯೋ ಸಿನಿಮಾದಲ್ಲಿ ವೋಟಿಂಗ್​ಗೆ ಅವಕಾಶ ಇದ್ದು, ಯಾರು ಎಲಿಮಿನೇಟ್ ಆಗುತ್ತಾರೆ ಅನ್ನೋದು ಭಾನುವಾರ ತಿಳಿಯಲಿದೆ.

ಈ ವಾರ ಎಲಿಮಿನೇಟ್ ಆಗೋದು ಯಾರು? ಇಲ್ಲಿದೆ ಸಾಧ್ಯಾಸಾಧ್ಯತೆ
ಈ ವಾರ ಎಲಿಮಿನೇಟ್ ಆಗೋದು ಯಾರು? ಇಲ್ಲಿದೆ ಸಾಧ್ಯಾಸಾಧ್ಯತೆ
ರಾಜೇಶ್ ದುಗ್ಗುಮನೆ
|

Updated on: Nov 22, 2024 | 2:00 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವಾರ ಕಳೆದಂತೆ ಸ್ಪರ್ಧೆ ಜೋರಾಗುತ್ತಿದೆ. ಯಾರು ಎಲಿಮಿನೇಟ್ ಆಗುತ್ತಾರೆ ಯಾರು ಸೇವ್ ಆಗುತ್ತಾರೆ ಎನ್ನುವ ಕುತೂಹಲ ಪ್ರತಿ ವಾರವೂ ಇರುತ್ತದೆ. ಈ ವಾರವೂ ಘಟಾನುಘಟಿಗಳು ನಾಮಿನೇಟ್ ಆಗಿದ್ದಾರೆ. ಈ ಕಾರಣಕ್ಕೆ ಎಲಿಮಿನೇಟ್ ಆಗೋದು ಯಾರು ಎಂದು ಹೇಳೋದು ಈ ಬಾರಿ ಅಷ್ಟು ಸುಲಭದಲ್ಲಿ ಇಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಈ ವಾರ ಚೈತ್ರಾ, ಮಂಜು, ತ್ರಿವಿಕ್ರಂ, ಮೋಕ್ಷಿತಾ, ಗೌತಮಿ, ಧರ್ಮ ಹಾಗೂ ಹನುಮಂತ ನಾಮಿನೇಷನ್ ಲಿಸ್ಟ್​ನಲ್ಲಿ ಇದ್ದಾರೆ. ಈಗಾಗಲೇ ಬಿಗ್ ಬಾಸ್​ನಲ್ಲಿ 50 ದಿನಗಳು ಪೂರ್ಣಗೊಂಡಿರುವುದರಿಂದ ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳು ಎಂದೇ ಗುರುತಿಸಲ್ಪಟ್ಟಿದ್ದಾರೆ ಎನ್ನಬಹುದು. ಸದ್ಯ ಜಿಯೋ ಸಿನಿಮಾದಲ್ಲಿ ವೋಟಿಂಗ್​ಗೆ ಅವಕಾಶ ಇದ್ದು, ಯಾರು ಎಲಿಮಿನೇಟ್ ಆಗುತ್ತಾರೆ ಅನ್ನೋದು ಭಾನುವಾರ ತಿಳಿಯಲಿದೆ.

ಕಳೆದ ವಾರ ಚೈತ್ರಾ ಅವರು ನಾನು ಮನೆಯಿಂದ ಹೊರ ಹೋಗುತ್ತೇನೆ ಎಂದು ಹೇಳಿದ್ದರು. ಆದರೆ, ಈ ವಾರ ಅವರು ಚಿಗುರಿದ್ದಾರೆ. ಈ ಕಾರಣಕ್ಕೆ ಅವರು ಈ ವಾರ ಹೊರ ಹೋಗುವುದು ಅನುಮಾನ. ಇನ್ನು, ಮಂಜು, ತ್ರವಿಕ್ರಂ, ಮೋಕ್ಷಿತಾ, ಗೌತಮಿ, ಹನುಮಂತ ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ. ಅವರು ಯಾರಿಗೂ ಎಲಿಮಿನೇಷನ್ ಭಯ ಇಲ್ಲ.

ಕೊನೆಯಲ್ಲಿ ಉಳಿದವರು ಧರ್ಮ. ತಮ್ಮ ಒಳ್ಳೆಯ ಮನಸ್ಸಿನಿಂದ ಧರ್ಮ ಅವರು ಎಲ್ಲರಿಗೂ ಇಷ್ಟ ಆಗುತ್ತಿದ್ದಾರೆ. ಆದರೆ, ಅವರು ಉತ್ತಮ ಆಟ ತೋರಿಸುತ್ತಿಲ್ಲ ಎಂದು ಅನೇಕರು ಅಪಸ್ವರ ತೆಗೆದಿದ್ದು ಇದೆ. ಈ ಕಾರಣಕ್ಕೆ ಅವರು ಎಲಿಮಿನೇಟ್ ಆದರೂ ಆಗಬಹುದು ಎಂದು ಕೆಲವರು ಊಹಿಸಿದ್ದಾರೆ.

ಇದನ್ನೂ ಓದಿ: ಕೇವಲ ಸಿಟ್ಟಲ್ಲ; ಬಿಗ್ ಬಾಸ್ ಮನೆಯಲ್ಲಿ ಅನಾವಾರಣ ಆಯಿತು ಶೋಭಾ ಶೆಟ್ಟಿ ಮತ್ತೊಂದು ಮುಖ

ಇದು ಬಿಗ್ ಬಾಸ್ ಆಟ. ಯಾರು ಯಾವಾಗ ಎಲಿಮಿನೇಟ್ ಆಗುತ್ತಾರೆ ಎಂದು ಹೇಳೋಕೆ ಸಾಧ್ಯವಿಲ್ಲ. ಈ ವಾರ ವೋಟಿಂಗ್ ಆಧಾರಾದ ಮೇಲೆ ಒಬ್ಬರು ಸೇವ್ ಆಗಲಿದ್ದಾರೆ. ಅತಿ ಕಡಿಮೆ ವೋಟ್ ಪಡೆದವರು ಎಲಿಮಿನೇಟ್ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್