Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಎಲಿಮಿನೇಟ್ ಆಗೋದು ಯಾರು? ಇಲ್ಲಿದೆ ಸಾಧ್ಯಾಸಾಧ್ಯತೆ

ಈ ವಾರ ಚೈತ್ರಾ, ಮಂಜು, ತ್ರಿವಿಕ್ರಂ, ಮೋಕ್ಷಿತಾ, ಗೌತಮಿ, ಧರ್ಮ ಹಾಗೂ ಹನುಮಂತ ನಾಮಿನೇಷನ್ ಲಿಸ್ಟ್​ನಲ್ಲಿ ಇದ್ದಾರೆ. ಈಗಾಗಲೇ ಬಿಗ್ ಬಾಸ್​ನಲ್ಲಿ 50 ದಿನಗಳು ಪೂರ್ಣಗೊಂಡಿರುವುದರಿಂದ ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳು ಎಂದೇ ಗುರುತಿಸಲ್ಪಟ್ಟಿದ್ದಾರೆ ಎನ್ನಬಹುದು. ಸದ್ಯ ಜಿಯೋ ಸಿನಿಮಾದಲ್ಲಿ ವೋಟಿಂಗ್​ಗೆ ಅವಕಾಶ ಇದ್ದು, ಯಾರು ಎಲಿಮಿನೇಟ್ ಆಗುತ್ತಾರೆ ಅನ್ನೋದು ಭಾನುವಾರ ತಿಳಿಯಲಿದೆ.

ಈ ವಾರ ಎಲಿಮಿನೇಟ್ ಆಗೋದು ಯಾರು? ಇಲ್ಲಿದೆ ಸಾಧ್ಯಾಸಾಧ್ಯತೆ
ಈ ವಾರ ಎಲಿಮಿನೇಟ್ ಆಗೋದು ಯಾರು? ಇಲ್ಲಿದೆ ಸಾಧ್ಯಾಸಾಧ್ಯತೆ
Follow us
ರಾಜೇಶ್ ದುಗ್ಗುಮನೆ
|

Updated on: Nov 22, 2024 | 2:00 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವಾರ ಕಳೆದಂತೆ ಸ್ಪರ್ಧೆ ಜೋರಾಗುತ್ತಿದೆ. ಯಾರು ಎಲಿಮಿನೇಟ್ ಆಗುತ್ತಾರೆ ಯಾರು ಸೇವ್ ಆಗುತ್ತಾರೆ ಎನ್ನುವ ಕುತೂಹಲ ಪ್ರತಿ ವಾರವೂ ಇರುತ್ತದೆ. ಈ ವಾರವೂ ಘಟಾನುಘಟಿಗಳು ನಾಮಿನೇಟ್ ಆಗಿದ್ದಾರೆ. ಈ ಕಾರಣಕ್ಕೆ ಎಲಿಮಿನೇಟ್ ಆಗೋದು ಯಾರು ಎಂದು ಹೇಳೋದು ಈ ಬಾರಿ ಅಷ್ಟು ಸುಲಭದಲ್ಲಿ ಇಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಈ ವಾರ ಚೈತ್ರಾ, ಮಂಜು, ತ್ರಿವಿಕ್ರಂ, ಮೋಕ್ಷಿತಾ, ಗೌತಮಿ, ಧರ್ಮ ಹಾಗೂ ಹನುಮಂತ ನಾಮಿನೇಷನ್ ಲಿಸ್ಟ್​ನಲ್ಲಿ ಇದ್ದಾರೆ. ಈಗಾಗಲೇ ಬಿಗ್ ಬಾಸ್​ನಲ್ಲಿ 50 ದಿನಗಳು ಪೂರ್ಣಗೊಂಡಿರುವುದರಿಂದ ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳು ಎಂದೇ ಗುರುತಿಸಲ್ಪಟ್ಟಿದ್ದಾರೆ ಎನ್ನಬಹುದು. ಸದ್ಯ ಜಿಯೋ ಸಿನಿಮಾದಲ್ಲಿ ವೋಟಿಂಗ್​ಗೆ ಅವಕಾಶ ಇದ್ದು, ಯಾರು ಎಲಿಮಿನೇಟ್ ಆಗುತ್ತಾರೆ ಅನ್ನೋದು ಭಾನುವಾರ ತಿಳಿಯಲಿದೆ.

ಕಳೆದ ವಾರ ಚೈತ್ರಾ ಅವರು ನಾನು ಮನೆಯಿಂದ ಹೊರ ಹೋಗುತ್ತೇನೆ ಎಂದು ಹೇಳಿದ್ದರು. ಆದರೆ, ಈ ವಾರ ಅವರು ಚಿಗುರಿದ್ದಾರೆ. ಈ ಕಾರಣಕ್ಕೆ ಅವರು ಈ ವಾರ ಹೊರ ಹೋಗುವುದು ಅನುಮಾನ. ಇನ್ನು, ಮಂಜು, ತ್ರವಿಕ್ರಂ, ಮೋಕ್ಷಿತಾ, ಗೌತಮಿ, ಹನುಮಂತ ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ. ಅವರು ಯಾರಿಗೂ ಎಲಿಮಿನೇಷನ್ ಭಯ ಇಲ್ಲ.

ಕೊನೆಯಲ್ಲಿ ಉಳಿದವರು ಧರ್ಮ. ತಮ್ಮ ಒಳ್ಳೆಯ ಮನಸ್ಸಿನಿಂದ ಧರ್ಮ ಅವರು ಎಲ್ಲರಿಗೂ ಇಷ್ಟ ಆಗುತ್ತಿದ್ದಾರೆ. ಆದರೆ, ಅವರು ಉತ್ತಮ ಆಟ ತೋರಿಸುತ್ತಿಲ್ಲ ಎಂದು ಅನೇಕರು ಅಪಸ್ವರ ತೆಗೆದಿದ್ದು ಇದೆ. ಈ ಕಾರಣಕ್ಕೆ ಅವರು ಎಲಿಮಿನೇಟ್ ಆದರೂ ಆಗಬಹುದು ಎಂದು ಕೆಲವರು ಊಹಿಸಿದ್ದಾರೆ.

ಇದನ್ನೂ ಓದಿ: ಕೇವಲ ಸಿಟ್ಟಲ್ಲ; ಬಿಗ್ ಬಾಸ್ ಮನೆಯಲ್ಲಿ ಅನಾವಾರಣ ಆಯಿತು ಶೋಭಾ ಶೆಟ್ಟಿ ಮತ್ತೊಂದು ಮುಖ

ಇದು ಬಿಗ್ ಬಾಸ್ ಆಟ. ಯಾರು ಯಾವಾಗ ಎಲಿಮಿನೇಟ್ ಆಗುತ್ತಾರೆ ಎಂದು ಹೇಳೋಕೆ ಸಾಧ್ಯವಿಲ್ಲ. ಈ ವಾರ ವೋಟಿಂಗ್ ಆಧಾರಾದ ಮೇಲೆ ಒಬ್ಬರು ಸೇವ್ ಆಗಲಿದ್ದಾರೆ. ಅತಿ ಕಡಿಮೆ ವೋಟ್ ಪಡೆದವರು ಎಲಿಮಿನೇಟ್ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ