AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಕನ್ನಡ: ಟಾಪ್ 6 ಆಟದಿಂದ ಗಿಲ್ಲಿ ನಟ ಔಟ್; ಎಲ್ಲರಿಗೂ ಶಾಕ್

ಗಿಲ್ಲಿ ನಟ ಅವರು ಬಿಗ್ ಬಾಸ್ ಆಟದ ಕೊನೇ ಹಂತದಲ್ಲಿ ಎಡವಿದ್ದಾರೆ. ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ‘ಟಿಕೆಟ್ ಟು ಟಾಪ್ 6’ ಟಾಸ್ಕ್ ವೇಳೆ ಧ್ರುವಂತ್ ಹಾಗೂ ಗಿಲ್ಲಿ ನಟ ನಡುವೆ ಭಾರಿ ಪೈಪೋಟಿ ನಡೆಯಿತು. ಈ ಟಾಸ್ಕ್ ವೇಳೆ ಗಿಲ್ಲಿ ನಟ ಅವರು ಸೋತರು. ಇದರಿಂದ ಧ್ರುವಂತ್ ಅವರಿಗೆ ಫಿನಾಲೆ ಹಾದಿ ಸುಲಭವಾಯಿತು.

ಬಿಗ್ ಬಾಸ್ ಕನ್ನಡ: ಟಾಪ್ 6 ಆಟದಿಂದ ಗಿಲ್ಲಿ ನಟ ಔಟ್; ಎಲ್ಲರಿಗೂ ಶಾಕ್
Kavya Shaiva, Gilli Nata
ಮದನ್​ ಕುಮಾರ್​
|

Updated on: Jan 06, 2026 | 10:30 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈಗ ‘ಟಿಕೆಟ್ ಟು ಫಿನಾಲೆ’ (Ticket to Finale) ಟಾಸ್ಕ್ ನಡೆಯುತ್ತಿದೆ. ಅಂದರೆ ಈ ಟಾಸ್ಕ್​​ನಲ್ಲಿ ಗೆಲ್ಲುವವರು ಫಿನಾಲೆಯ ಟಿಕೆಟ್ ಪಡೆಯುತ್ತಾರೆ. ಆದರೆ ಈ ಟಾಸ್ಕ್ ಪ್ರಕ್ರಿಯೆಯ ಆರಂಭದಲ್ಲೇ ಒಂದು ಶಾಕ್ ನೀಡಲಾಗಿದೆ. ಒಬ್ಬರನ್ನು ಟಾಸ್ಕ್​​ನಿಂದ ಹೊರಗಿಡಲು ನಿರ್ಧರಿಸಲಾಗಿದೆ. ಅಚ್ಚರಿ ಎಂದರೆ ಈ ಪ್ರಕ್ರಿಯೆಯಲ್ಲಿ ಧ್ರುವಂತ್ (Dhruvanth) ಮತ್ತು ಗಿಲ್ಲಿ ನಟ ನಡುವೆ ಪೈಪೋಟಿ ಬೆಳೆಯಿತು. ಮೊದಲ ಹಂತದಲ್ಲೇ ಧ್ರುವಂತ್ ಅವರು ಗಿಲ್ಲಿಯನ್ನು ಸೋಲಿಸಿದರು. ಆದ್ದರಿಂದ ಗಿಲ್ಲಿ ನಟ (Gilli Nata) ಅವರು ‘ಟಿಕೆಟ್ ಟು ಟಾಪ್ 6’ ಆಟದಿಂದ ಹೊರಗೆ ಉಳಿಯುವಂತಾಗಿದೆ.

ಆರಂಭದಲ್ಲಿ ಒಂದು ಟ್ವಿಸ್ಟ್ ನೀಡಲಾಗಿತ್ತು. ಮನೆಯ ಕ್ಯಾಪ್ಟನ್ ಧನುಷ್ ಅವರು ಒಬ್ಬರನ್ನು ‘ಟಿಕೆಟ್ ಟು ಟಾಪ್ 6’ ಆಟದಿಂದ ಹೊರಗೆ ಇಡಬೇಕು ಎಂದು ಸೂಚಿಸಲಾಯಿತು. ಆಗ ಧನುಷ್ ಅವರು ಧ್ರುವಂತ್ ಹೆಸರನ್ನು ಹೇಳಿದರು. ಆದರೆ ಧ್ರುವಂತ್ ಅವರು ತಮ್ಮನ್ನು ತಾವು ಸಮರ್ಥರು ಎಂದು ಸಾಬೀತು ಮಾಡಿಕೊಳ್ಳಲು ಒಂದು ಅವಕಾಶ ನೀಡಲಾಯಿತು.

ತಮ್ಮ ಎದುರಾಳಿಯನ್ನು ಆಯ್ಕೆ ಮಾಡಿಕೊಂಡು ಟಾಸ್ಕ್ ಗೆಲ್ಲುವಂತೆ ಸವಾಲು ಒಡ್ಡಲಾಯಿತು. ಆಗ ಧ್ರುವಂತ್ ಅವರು ಗಿಲ್ಲಿಯನ್ನು ಎದುರಾಳಿಯಾಗಿ ಆಯ್ಕೆ ಮಾಡಿಕೊಂಡರು. ಇಬ್ಬರ ನಡುವೆ ಟಾಸ್ಕ್ ನಡೆಯಿತು. ತೀವ್ರ ಹಣಾಹಣಿ ಬಳಿಕ ಧ್ರುವಂತ್ ಅವರು ವಿನ್ ಆದರು. ಆಟದಲ್ಲಿ ಸೋತ ಗಿಲ್ಲಿ ನಟ ಅವರು ‘ಟಿಕೆಟ್ ಟು ಟಾಪ್ 6’ ಆಟದಿಂದ ಔಟ್ ಆದರು.

ಗಿಲ್ಲಿ ಅವರಿಗೆ ಇದರಿಂದ ತೀವ್ರ ಹಿನ್ನಡೆ ಆಗಿದೆ. ಹಾಗಾಗಿ ಕಾವ್ಯಾ, ರಘು, ರಾಶಿಕಾ, ರಕ್ಷಿತಾ, ಧನುಷ್ ಅವರಿಗೆ ಶಾಕ್ ಆಗಿದೆ. ಅಲ್ಲದೇ ಗಿಲ್ಲಿಯನ್ನು ಬೆಂಬಲಿಸುವ ಪ್ರೇಕ್ಷಕರಿಗೂ ಬೇಸರ ಆಗಿದೆ. ಮುಂದಿನ ದಿನಗಳಲ್ಲಿ ಗಿಲ್ಲಿ ಅವರ ಪರಿಸ್ಥಿತಿ ಏನಾಗಲಿದೆ ಎಂಬುದನ್ನು ಯೋಚಿಸಲಾಗುತ್ತಿದೆ. ಫಿನಾಲೆಯ ಟಿಕೆಟ್ ಪಡೆಯಲು ಎಲ್ಲರೂ ಕಷ್ಟಪಟ್ಟು ಆಟ ಆಡುತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ಧನುಷ್ ಬಿಟ್ಟು ಇಡೀ ಮನೆ ನಾಮಿನೇಟ್; ಗಿಲ್ಲಿಗೆ ದೊಡ್ಡ ಶಾಕ್

ಮೊದಲಿನಿಂದಲೂ ಧ್ರುವಂತ್ ಅವರನ್ನು ಗಿಲ್ಲಿ ನಟ ಸಿಕ್ಕಾಪಟ್ಟೆ ಹೀಯಾಳಿಸುತ್ತಿದ್ದರು. ಅಲ್ಲದೇ ಧ್ರುವಂತ್ ಅವರು ಅಶ್ವಿನಿ ಗೌಡ ಜೊತೆ ಕ್ಲೋಸ್ ಆಗಿರುವ ಕಾರಣಕ್ಕೆ ಅವರನ್ನು ಗಿಲ್ಲಿ ನಟ ಟಾರ್ಗೆಟ್ ಮಾಡಿದ್ದರು. ಆದರೆ ಈಗ ಕೊನೇ ಹಂತದಲ್ಲಿ ಧ್ರುವಂತ್ ಅವರಿಂದಲೇ ಗಿಲ್ಲಿ ನಟ ಸೋಲುವಂತಾಯಿತು. ಹಾಗಾಗಿ ಧ್ರುವಂತ್ ಅವರು ಈ ಗೆಲುವಿನ ಬಳಿಕ ಭರ್ಜರಿಯಾಗಿ ಸಂಭ್ರಮಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ