AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್-ರಚಿತಾ ರಾಮ್ ಒಂದೇ ಧಾರಾವಾಹಿಯಲ್ಲಿ ನಟಿಸಿದ್ದರಾ? ಇಲ್ಲಿದೆ ಅಸಲಿಯತ್ತು

Yash and Rachita Ram: ನಟ ಯಶ್ ಮೊದಲು ನಾಟಕಗಳಲ್ಲಿ ನಟಿಸಿ ಬಳಿಕ ಧಾರಾವಾಹಿಗಳಲ್ಲಿ ನಟಿಸಿ ಆ ನಂತರ ಸಿನಿಮಾಕ್ಕೆ ಬಂದವರು. ರಚಿತಾ ರಾಮ್ ಸಹ ಧಾರಾವಾಹಿಗಳಿಂದಲೇ ವೃತ್ತಿ ಆರಂಭಿಸಿದವರು. ಅಂದಹಾಗೆ ಯಶ್ ಮತ್ತು ರಚಿತಾ ರಾಮ್ ಮತ್ತು ಯಶ್ ಇಬ್ಬರೂ ಒಂದೇ ಧಾರಾವಾಹಿಯಲ್ಲಿ ನಟಿಸಿದ್ದರೆ? ಇಲ್ಲಿದೆ ನೋಡಿ ಸತ್ಯ.

ಯಶ್-ರಚಿತಾ ರಾಮ್ ಒಂದೇ ಧಾರಾವಾಹಿಯಲ್ಲಿ ನಟಿಸಿದ್ದರಾ? ಇಲ್ಲಿದೆ ಅಸಲಿಯತ್ತು
Yash Rachita Ram
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Feb 22, 2025 | 7:30 AM

Share

ಯಶ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರ ಖ್ಯಾತಿ ಸಾಕಷ್ಟು ಹೆಚ್ಚಿದೆ. ಅವರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುತ್ತಾರೆ. ಯಶ್ ಅವರ ಹಳೆಯ ವಿಡಿಯೋಗಳು ಆಗಾಗ ವೈರಲ್ ಆಗುತ್ತವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ. ಈಗ ಕಿರುತೆರೆಯಲ್ಲಿ ಅವರ ಧಾರಾವಾಹಿ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಯಶ್ ಅವರು ನಟಿಯೊಬ್ಬರ ಜೊತೆ ಮಾತನಾಡುವುದು ಇದೆ. ಈ ನಟಿ ರಚಿತಾ ರಾಮ್ ಎಂದು ಅನೇಕರು ಹೇಳಿದ್ದಾರೆ. ಆದರೆ, ಅಸಲಿಗೆ ಅವರು ರಚಿತಾ ರಾಮ್ ಅಲ್ಲ, ಅವರ ಸಹೋದರಿ ನಿತ್ಯಾ ರಾಮ್. ಈ ವಿಡಿಯೋ ಕಮೆಂಟ್ ಬಾಕ್ಸ್ನಲ್ಲಿ ಕೆಲವರು ಅಸಲಿ ವಿಚಾರ ಹೇಳುವ ಪ್ರಯತ್ನ ಮಾಡಿದ್ದಾರೆ.

ನಿತ್ಯಾ ರಾಮ್ ಕೂಡ ರಚಿತಾ ರಾಮ್ ರೀತಿಯೇ ಹೀರೋಯಿನ್. ಅವರು ಸಿನಿಮಾಗಿಂತ ಧಾರಾವಾಹಿಗಳಲ್ಲಿ ನಟಿಸಿದ್ದೇ ಹೆಚ್ಚು. ಸದ್ಯ ತಮಿಳಿನ ‘ಅಣ್ಣ’ ಹಾಗೂ ಕನ್ನಡದ ‘ಶಾಂತಿ ನಿವಾಸ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಅವರು ಈ ಮೊದಲು ಯಶ್ ಜೊತೆ ಧಾರಾವಾಹಿ ಒಂದರಲ್ಲಿ ಕಾಣಿಸಿಕೊಂಡಿದ್ದರು. ಆ ದೃಶ್ಯಗಳನ್ನು ಈಗ ವೈರಲ್ ಮಾಡಲಾಗಿದೆ. ಆದರೆ, ಅವರನ್ನು ಕೆಲವರು ರಚಿತಾ ರಾಮ್ ಎಂದಿದ್ದಾರೆ.

ಯಶ್ ಅವರು ಕಿರುತೆರೆ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟವರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದರು. ಈಗ ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿದೆ. ‘ಕೆಜಿಎಫ್ 2’ ಮೂಲಕ ಸಖತ್ ಫೇಮಸ್ ಆದರು.

ಇದನ್ನೂ ಓದಿ:ನಟ ಯಶ್​ಗೆ ಅವಮಾನ ಮಾಡಿದ ಮಲಯಾಳಂ ಸಿನಿಮಾ

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಗೊವಾದಲ್ಲಿ ಸಿನಿಮಾದ ಶೂಟ್ ನಡೆದಿದೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಟೀಸರ್ಗೆ ಅಭಿಮಾನಿಗಳು ಕಾದಿದ್ದರು. ಯಶ್ ಜನ್ಮದಿನದ ಪ್ರಯುಕ್ತ ಜನವರಿ 8ರಂದು ಚಿತ್ರದ ಟೀಸರ್ ರಿಲೀಸ್ ಆಯಿತು. ಈ ಟೀಸರ್ಗ್​ಗೆ ಮಿಶ್ರಪ್ರತಿಕ್ರಿಯೆ ಕೇಳಿ ಬಂದಿದೆ. ರಚಿತಾ ರಾಮ್ ಅವರು ಇತ್ತೀಚೆಗೆ ‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ಕಾಣಿಸಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ