AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗಂತ್ ಬಾಯಿಂದ ಕೊಟ್ಟ ಹೂವನ್ನು ತುಟಿಯಿಂದಲೇ ಸ್ವೀಕರಿಸಿದ ಐಂದ್ರಿತಾ ರೇ; ಇಲ್ಲಿದೆ ವಿಡಿಯೋ

‘ರಾಜಾ-ರಾಣಿ’ ಶೋಅನ್ನು ಸಾಕಷ್ಟು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಸ್ಪರ್ಧಿಗಳು ಹಾಗೂ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಈ ಶೋ ನಡೆಸಲಾಗುತ್ತಿದೆ.

ದಿಗಂತ್ ಬಾಯಿಂದ ಕೊಟ್ಟ ಹೂವನ್ನು ತುಟಿಯಿಂದಲೇ ಸ್ವೀಕರಿಸಿದ ಐಂದ್ರಿತಾ ರೇ; ಇಲ್ಲಿದೆ ವಿಡಿಯೋ
ದಿಗಂತ್​-ಐಂದ್ರಿತಾ ರೇ
TV9 Web
| Updated By: ಮದನ್​ ಕುಮಾರ್​|

Updated on: Sep 27, 2021 | 9:16 AM

Share

ನಟ ದಿಗಂತ್​ ಹಾಗೂ ಐಂದ್ರಿತಾ ರೇ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್​. ಇವರು ಮದುವೆ ಆಗಿ ಕೆಲ ವರ್ಷಗಳು ಕಳೆದಿವೆ. ಆದರೆ, ಇವರ ಮಧ್ಯೆ ಮೊದಲು ಎಷ್ಟು ಪ್ರೀತಿ ಇತ್ತೋ ಅಷ್ಟೇ ಪ್ರೀತಿ ಈಗಲೂ ಇದೆ. ಇಬ್ಬರೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಒಟ್ಟಾಗಿ ಸಮಯ ಕಳೆಯುವ ಸಾಕಷ್ಟು ಫೋಟೋಗಳನ್ನು ಇಬ್ಬರೂ ಆಗಾಗ ಹಂಚಿಕೊಳ್ಳುತ್ತಾರೆ. ಈಗ ದಿಗಂತ್​ ಹಾಗೂ ಐಂದ್ರಿತಾ ಕಲರ್ಸ್​ ಕನ್ನಡ ವಾಹಿನಿಯ ‘ರಾಜಾ-ರಾಣಿ’ ಶೋಗೆ ವಿಶೇಷ ಅತಿಥಿಗಳಾಗಿ ಆಗಮಿಸಿದ್ದಾರೆ. ಈ ವೇಳೆ ಮಸ್ತ್​ ಡ್ಯಾನ್ಸ್​ ಮಾಡಿದ್ದಾರೆ.

‘ರಾಜಾ-ರಾಣಿ’ ಶೋಅನ್ನು ಸಾಕಷ್ಟು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಸ್ಪರ್ಧಿಗಳು ಹಾಗೂ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಈ ಶೋ ನಡೆಸಲಾಗುತ್ತಿದೆ. ಹೆಸರೇ ಹೇಳುವಂತೆ ಇದು ಕಪಲ್​ಗಳ ಶೋ. ಈ ಕಾರಣಕ್ಕೆ ದಿಗಂತ್​ ಹಾಗೂ ಐಂದ್ರಿತಾ ‘ರಾಜಾ-ರಾಣಿ’ ವೇದಿಕೆ ಏರಿದ್ದಾರೆ. ಇದು ವೀಕ್ಷಕರಿಗೆ ಇಷ್ಟವಾಗಿದೆ.

ದಿಗಂತ್​ ನಟನೆಯ ‘ಪಂಚರಂಗಿ’ ಸಿನಿಮಾದ ‘ಉಡಿಸುವೆ ಬೆಳಕಿನ ಸೀರೆಯಾ..’ ಹಾಡು ಹಿಟ್​ ಆಗಿತ್ತು. ಈ ಹಾಡಿಗೆ ದಿಗಂತ್​ ಹಾಗೂ ಐಂದ್ರಿತಾ ಹೆಜ್ಜೆ ಹಾಕಿದ್ದಾರೆ. ಇದಾದ ನಂತರದಲ್ಲಿ ಐಂದ್ರಿತಾ ಅವರನ್ನು ದಿಗಂತ್​ ಬಾಯ್ತುಂಬ ಹೊಗಳಿದ್ದಾರೆ. ‘ನೀನು ತುಂಬಾ ಸುಂದರವಾಗಿದ್ದೀಯಾ, ಐ ಲವ್​ ಯು ಎಂದಿದ್ದಾರೆ’ ದಿಗಂತ್​. ‘ನಾನು ಈ ರೀತಿ ಕಾಂಪ್ಲಿಮೆಂಟ್​ ಕೇಳಿಯೇ ಇರಲಿಲ್ಲ’ ಎಂದರು ಐಂದ್ರಿತಾ. ಈ ವೇಳೆ ನಿರೂಪಕಿ ಅನುಪಮಾ ಗೌಡ ರೊಮ್ಯಾಂಟಿಕ್​ ಆಗಿ ಪ್ರಪೋಸ್​ ಮಾಡುವಂತೆ ಕೋರಿದರು. ಆಗ ದಿಗಂತ್​ ಗುಲಾಬಿ ಹೂವನ್ನು ಬಾಯಲ್ಲಿ ಇಟ್ಟು ಐಂದ್ರಿತಾಗೆ ನೀಡಿದ್ದಾರೆ. ಈ ಹೂವನ್ನು ಐಂದ್ರಿತಾ ತಮ್ಮ ತುಟಿ ಮೂಲಕವೇ ಪಡೆದುಕೊಂಡಿದ್ದು ವಿಶೇಷವಾಗಿತ್ತು.

ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ‘ರಾಜಾ-ರಾಣಿ’ ಶೋ ಶನಿವಾರ ಹಾಗೂ ಭಾನುವಾರ ಸಂಜೆ 7:30ಕ್ಕೆ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ

‘ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ’; ಇಶಿತಾ ಬಗ್ಗೆ ಪತಿಯ ದೂರು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!