AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗಂತ್ ಬಾಯಿಂದ ಕೊಟ್ಟ ಹೂವನ್ನು ತುಟಿಯಿಂದಲೇ ಸ್ವೀಕರಿಸಿದ ಐಂದ್ರಿತಾ ರೇ; ಇಲ್ಲಿದೆ ವಿಡಿಯೋ

‘ರಾಜಾ-ರಾಣಿ’ ಶೋಅನ್ನು ಸಾಕಷ್ಟು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಸ್ಪರ್ಧಿಗಳು ಹಾಗೂ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಈ ಶೋ ನಡೆಸಲಾಗುತ್ತಿದೆ.

ದಿಗಂತ್ ಬಾಯಿಂದ ಕೊಟ್ಟ ಹೂವನ್ನು ತುಟಿಯಿಂದಲೇ ಸ್ವೀಕರಿಸಿದ ಐಂದ್ರಿತಾ ರೇ; ಇಲ್ಲಿದೆ ವಿಡಿಯೋ
ದಿಗಂತ್​-ಐಂದ್ರಿತಾ ರೇ
TV9 Web
| Edited By: |

Updated on: Sep 27, 2021 | 9:16 AM

Share

ನಟ ದಿಗಂತ್​ ಹಾಗೂ ಐಂದ್ರಿತಾ ರೇ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್​. ಇವರು ಮದುವೆ ಆಗಿ ಕೆಲ ವರ್ಷಗಳು ಕಳೆದಿವೆ. ಆದರೆ, ಇವರ ಮಧ್ಯೆ ಮೊದಲು ಎಷ್ಟು ಪ್ರೀತಿ ಇತ್ತೋ ಅಷ್ಟೇ ಪ್ರೀತಿ ಈಗಲೂ ಇದೆ. ಇಬ್ಬರೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಒಟ್ಟಾಗಿ ಸಮಯ ಕಳೆಯುವ ಸಾಕಷ್ಟು ಫೋಟೋಗಳನ್ನು ಇಬ್ಬರೂ ಆಗಾಗ ಹಂಚಿಕೊಳ್ಳುತ್ತಾರೆ. ಈಗ ದಿಗಂತ್​ ಹಾಗೂ ಐಂದ್ರಿತಾ ಕಲರ್ಸ್​ ಕನ್ನಡ ವಾಹಿನಿಯ ‘ರಾಜಾ-ರಾಣಿ’ ಶೋಗೆ ವಿಶೇಷ ಅತಿಥಿಗಳಾಗಿ ಆಗಮಿಸಿದ್ದಾರೆ. ಈ ವೇಳೆ ಮಸ್ತ್​ ಡ್ಯಾನ್ಸ್​ ಮಾಡಿದ್ದಾರೆ.

‘ರಾಜಾ-ರಾಣಿ’ ಶೋಅನ್ನು ಸಾಕಷ್ಟು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಸ್ಪರ್ಧಿಗಳು ಹಾಗೂ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಈ ಶೋ ನಡೆಸಲಾಗುತ್ತಿದೆ. ಹೆಸರೇ ಹೇಳುವಂತೆ ಇದು ಕಪಲ್​ಗಳ ಶೋ. ಈ ಕಾರಣಕ್ಕೆ ದಿಗಂತ್​ ಹಾಗೂ ಐಂದ್ರಿತಾ ‘ರಾಜಾ-ರಾಣಿ’ ವೇದಿಕೆ ಏರಿದ್ದಾರೆ. ಇದು ವೀಕ್ಷಕರಿಗೆ ಇಷ್ಟವಾಗಿದೆ.

ದಿಗಂತ್​ ನಟನೆಯ ‘ಪಂಚರಂಗಿ’ ಸಿನಿಮಾದ ‘ಉಡಿಸುವೆ ಬೆಳಕಿನ ಸೀರೆಯಾ..’ ಹಾಡು ಹಿಟ್​ ಆಗಿತ್ತು. ಈ ಹಾಡಿಗೆ ದಿಗಂತ್​ ಹಾಗೂ ಐಂದ್ರಿತಾ ಹೆಜ್ಜೆ ಹಾಕಿದ್ದಾರೆ. ಇದಾದ ನಂತರದಲ್ಲಿ ಐಂದ್ರಿತಾ ಅವರನ್ನು ದಿಗಂತ್​ ಬಾಯ್ತುಂಬ ಹೊಗಳಿದ್ದಾರೆ. ‘ನೀನು ತುಂಬಾ ಸುಂದರವಾಗಿದ್ದೀಯಾ, ಐ ಲವ್​ ಯು ಎಂದಿದ್ದಾರೆ’ ದಿಗಂತ್​. ‘ನಾನು ಈ ರೀತಿ ಕಾಂಪ್ಲಿಮೆಂಟ್​ ಕೇಳಿಯೇ ಇರಲಿಲ್ಲ’ ಎಂದರು ಐಂದ್ರಿತಾ. ಈ ವೇಳೆ ನಿರೂಪಕಿ ಅನುಪಮಾ ಗೌಡ ರೊಮ್ಯಾಂಟಿಕ್​ ಆಗಿ ಪ್ರಪೋಸ್​ ಮಾಡುವಂತೆ ಕೋರಿದರು. ಆಗ ದಿಗಂತ್​ ಗುಲಾಬಿ ಹೂವನ್ನು ಬಾಯಲ್ಲಿ ಇಟ್ಟು ಐಂದ್ರಿತಾಗೆ ನೀಡಿದ್ದಾರೆ. ಈ ಹೂವನ್ನು ಐಂದ್ರಿತಾ ತಮ್ಮ ತುಟಿ ಮೂಲಕವೇ ಪಡೆದುಕೊಂಡಿದ್ದು ವಿಶೇಷವಾಗಿತ್ತು.

ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ‘ರಾಜಾ-ರಾಣಿ’ ಶೋ ಶನಿವಾರ ಹಾಗೂ ಭಾನುವಾರ ಸಂಜೆ 7:30ಕ್ಕೆ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ

‘ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ’; ಇಶಿತಾ ಬಗ್ಗೆ ಪತಿಯ ದೂರು

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ