AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗಂತ್ ಬಾಯಿಂದ ಕೊಟ್ಟ ಹೂವನ್ನು ತುಟಿಯಿಂದಲೇ ಸ್ವೀಕರಿಸಿದ ಐಂದ್ರಿತಾ ರೇ; ಇಲ್ಲಿದೆ ವಿಡಿಯೋ

‘ರಾಜಾ-ರಾಣಿ’ ಶೋಅನ್ನು ಸಾಕಷ್ಟು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಸ್ಪರ್ಧಿಗಳು ಹಾಗೂ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಈ ಶೋ ನಡೆಸಲಾಗುತ್ತಿದೆ.

ದಿಗಂತ್ ಬಾಯಿಂದ ಕೊಟ್ಟ ಹೂವನ್ನು ತುಟಿಯಿಂದಲೇ ಸ್ವೀಕರಿಸಿದ ಐಂದ್ರಿತಾ ರೇ; ಇಲ್ಲಿದೆ ವಿಡಿಯೋ
ದಿಗಂತ್​-ಐಂದ್ರಿತಾ ರೇ
TV9 Web
| Edited By: |

Updated on: Sep 27, 2021 | 9:16 AM

Share

ನಟ ದಿಗಂತ್​ ಹಾಗೂ ಐಂದ್ರಿತಾ ರೇ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್​. ಇವರು ಮದುವೆ ಆಗಿ ಕೆಲ ವರ್ಷಗಳು ಕಳೆದಿವೆ. ಆದರೆ, ಇವರ ಮಧ್ಯೆ ಮೊದಲು ಎಷ್ಟು ಪ್ರೀತಿ ಇತ್ತೋ ಅಷ್ಟೇ ಪ್ರೀತಿ ಈಗಲೂ ಇದೆ. ಇಬ್ಬರೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಒಟ್ಟಾಗಿ ಸಮಯ ಕಳೆಯುವ ಸಾಕಷ್ಟು ಫೋಟೋಗಳನ್ನು ಇಬ್ಬರೂ ಆಗಾಗ ಹಂಚಿಕೊಳ್ಳುತ್ತಾರೆ. ಈಗ ದಿಗಂತ್​ ಹಾಗೂ ಐಂದ್ರಿತಾ ಕಲರ್ಸ್​ ಕನ್ನಡ ವಾಹಿನಿಯ ‘ರಾಜಾ-ರಾಣಿ’ ಶೋಗೆ ವಿಶೇಷ ಅತಿಥಿಗಳಾಗಿ ಆಗಮಿಸಿದ್ದಾರೆ. ಈ ವೇಳೆ ಮಸ್ತ್​ ಡ್ಯಾನ್ಸ್​ ಮಾಡಿದ್ದಾರೆ.

‘ರಾಜಾ-ರಾಣಿ’ ಶೋಅನ್ನು ಸಾಕಷ್ಟು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಸ್ಪರ್ಧಿಗಳು ಹಾಗೂ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಈ ಶೋ ನಡೆಸಲಾಗುತ್ತಿದೆ. ಹೆಸರೇ ಹೇಳುವಂತೆ ಇದು ಕಪಲ್​ಗಳ ಶೋ. ಈ ಕಾರಣಕ್ಕೆ ದಿಗಂತ್​ ಹಾಗೂ ಐಂದ್ರಿತಾ ‘ರಾಜಾ-ರಾಣಿ’ ವೇದಿಕೆ ಏರಿದ್ದಾರೆ. ಇದು ವೀಕ್ಷಕರಿಗೆ ಇಷ್ಟವಾಗಿದೆ.

ದಿಗಂತ್​ ನಟನೆಯ ‘ಪಂಚರಂಗಿ’ ಸಿನಿಮಾದ ‘ಉಡಿಸುವೆ ಬೆಳಕಿನ ಸೀರೆಯಾ..’ ಹಾಡು ಹಿಟ್​ ಆಗಿತ್ತು. ಈ ಹಾಡಿಗೆ ದಿಗಂತ್​ ಹಾಗೂ ಐಂದ್ರಿತಾ ಹೆಜ್ಜೆ ಹಾಕಿದ್ದಾರೆ. ಇದಾದ ನಂತರದಲ್ಲಿ ಐಂದ್ರಿತಾ ಅವರನ್ನು ದಿಗಂತ್​ ಬಾಯ್ತುಂಬ ಹೊಗಳಿದ್ದಾರೆ. ‘ನೀನು ತುಂಬಾ ಸುಂದರವಾಗಿದ್ದೀಯಾ, ಐ ಲವ್​ ಯು ಎಂದಿದ್ದಾರೆ’ ದಿಗಂತ್​. ‘ನಾನು ಈ ರೀತಿ ಕಾಂಪ್ಲಿಮೆಂಟ್​ ಕೇಳಿಯೇ ಇರಲಿಲ್ಲ’ ಎಂದರು ಐಂದ್ರಿತಾ. ಈ ವೇಳೆ ನಿರೂಪಕಿ ಅನುಪಮಾ ಗೌಡ ರೊಮ್ಯಾಂಟಿಕ್​ ಆಗಿ ಪ್ರಪೋಸ್​ ಮಾಡುವಂತೆ ಕೋರಿದರು. ಆಗ ದಿಗಂತ್​ ಗುಲಾಬಿ ಹೂವನ್ನು ಬಾಯಲ್ಲಿ ಇಟ್ಟು ಐಂದ್ರಿತಾಗೆ ನೀಡಿದ್ದಾರೆ. ಈ ಹೂವನ್ನು ಐಂದ್ರಿತಾ ತಮ್ಮ ತುಟಿ ಮೂಲಕವೇ ಪಡೆದುಕೊಂಡಿದ್ದು ವಿಶೇಷವಾಗಿತ್ತು.

ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ‘ರಾಜಾ-ರಾಣಿ’ ಶೋ ಶನಿವಾರ ಹಾಗೂ ಭಾನುವಾರ ಸಂಜೆ 7:30ಕ್ಕೆ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ

‘ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ’; ಇಶಿತಾ ಬಗ್ಗೆ ಪತಿಯ ದೂರು

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು