AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗಂತ್ ಬಾಯಿಂದ ಕೊಟ್ಟ ಹೂವನ್ನು ತುಟಿಯಿಂದಲೇ ಸ್ವೀಕರಿಸಿದ ಐಂದ್ರಿತಾ ರೇ; ಇಲ್ಲಿದೆ ವಿಡಿಯೋ

‘ರಾಜಾ-ರಾಣಿ’ ಶೋಅನ್ನು ಸಾಕಷ್ಟು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಸ್ಪರ್ಧಿಗಳು ಹಾಗೂ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಈ ಶೋ ನಡೆಸಲಾಗುತ್ತಿದೆ.

ದಿಗಂತ್ ಬಾಯಿಂದ ಕೊಟ್ಟ ಹೂವನ್ನು ತುಟಿಯಿಂದಲೇ ಸ್ವೀಕರಿಸಿದ ಐಂದ್ರಿತಾ ರೇ; ಇಲ್ಲಿದೆ ವಿಡಿಯೋ
ದಿಗಂತ್​-ಐಂದ್ರಿತಾ ರೇ
TV9 Web
| Updated By: ಮದನ್​ ಕುಮಾರ್​|

Updated on: Sep 27, 2021 | 9:16 AM

Share

ನಟ ದಿಗಂತ್​ ಹಾಗೂ ಐಂದ್ರಿತಾ ರೇ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್​. ಇವರು ಮದುವೆ ಆಗಿ ಕೆಲ ವರ್ಷಗಳು ಕಳೆದಿವೆ. ಆದರೆ, ಇವರ ಮಧ್ಯೆ ಮೊದಲು ಎಷ್ಟು ಪ್ರೀತಿ ಇತ್ತೋ ಅಷ್ಟೇ ಪ್ರೀತಿ ಈಗಲೂ ಇದೆ. ಇಬ್ಬರೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಒಟ್ಟಾಗಿ ಸಮಯ ಕಳೆಯುವ ಸಾಕಷ್ಟು ಫೋಟೋಗಳನ್ನು ಇಬ್ಬರೂ ಆಗಾಗ ಹಂಚಿಕೊಳ್ಳುತ್ತಾರೆ. ಈಗ ದಿಗಂತ್​ ಹಾಗೂ ಐಂದ್ರಿತಾ ಕಲರ್ಸ್​ ಕನ್ನಡ ವಾಹಿನಿಯ ‘ರಾಜಾ-ರಾಣಿ’ ಶೋಗೆ ವಿಶೇಷ ಅತಿಥಿಗಳಾಗಿ ಆಗಮಿಸಿದ್ದಾರೆ. ಈ ವೇಳೆ ಮಸ್ತ್​ ಡ್ಯಾನ್ಸ್​ ಮಾಡಿದ್ದಾರೆ.

‘ರಾಜಾ-ರಾಣಿ’ ಶೋಅನ್ನು ಸಾಕಷ್ಟು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಸ್ಪರ್ಧಿಗಳು ಹಾಗೂ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಈ ಶೋ ನಡೆಸಲಾಗುತ್ತಿದೆ. ಹೆಸರೇ ಹೇಳುವಂತೆ ಇದು ಕಪಲ್​ಗಳ ಶೋ. ಈ ಕಾರಣಕ್ಕೆ ದಿಗಂತ್​ ಹಾಗೂ ಐಂದ್ರಿತಾ ‘ರಾಜಾ-ರಾಣಿ’ ವೇದಿಕೆ ಏರಿದ್ದಾರೆ. ಇದು ವೀಕ್ಷಕರಿಗೆ ಇಷ್ಟವಾಗಿದೆ.

ದಿಗಂತ್​ ನಟನೆಯ ‘ಪಂಚರಂಗಿ’ ಸಿನಿಮಾದ ‘ಉಡಿಸುವೆ ಬೆಳಕಿನ ಸೀರೆಯಾ..’ ಹಾಡು ಹಿಟ್​ ಆಗಿತ್ತು. ಈ ಹಾಡಿಗೆ ದಿಗಂತ್​ ಹಾಗೂ ಐಂದ್ರಿತಾ ಹೆಜ್ಜೆ ಹಾಕಿದ್ದಾರೆ. ಇದಾದ ನಂತರದಲ್ಲಿ ಐಂದ್ರಿತಾ ಅವರನ್ನು ದಿಗಂತ್​ ಬಾಯ್ತುಂಬ ಹೊಗಳಿದ್ದಾರೆ. ‘ನೀನು ತುಂಬಾ ಸುಂದರವಾಗಿದ್ದೀಯಾ, ಐ ಲವ್​ ಯು ಎಂದಿದ್ದಾರೆ’ ದಿಗಂತ್​. ‘ನಾನು ಈ ರೀತಿ ಕಾಂಪ್ಲಿಮೆಂಟ್​ ಕೇಳಿಯೇ ಇರಲಿಲ್ಲ’ ಎಂದರು ಐಂದ್ರಿತಾ. ಈ ವೇಳೆ ನಿರೂಪಕಿ ಅನುಪಮಾ ಗೌಡ ರೊಮ್ಯಾಂಟಿಕ್​ ಆಗಿ ಪ್ರಪೋಸ್​ ಮಾಡುವಂತೆ ಕೋರಿದರು. ಆಗ ದಿಗಂತ್​ ಗುಲಾಬಿ ಹೂವನ್ನು ಬಾಯಲ್ಲಿ ಇಟ್ಟು ಐಂದ್ರಿತಾಗೆ ನೀಡಿದ್ದಾರೆ. ಈ ಹೂವನ್ನು ಐಂದ್ರಿತಾ ತಮ್ಮ ತುಟಿ ಮೂಲಕವೇ ಪಡೆದುಕೊಂಡಿದ್ದು ವಿಶೇಷವಾಗಿತ್ತು.

ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ‘ರಾಜಾ-ರಾಣಿ’ ಶೋ ಶನಿವಾರ ಹಾಗೂ ಭಾನುವಾರ ಸಂಜೆ 7:30ಕ್ಕೆ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ

‘ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ’; ಇಶಿತಾ ಬಗ್ಗೆ ಪತಿಯ ದೂರು

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ