AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇನಿದು ಅಚ್ಚರಿ, ಕಿರುತೆರೆಗೆ ಕಾಲಿಟ್ಟ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್

Mahanati: ‘ಕಾಟೇರ’ ದಂಥಹಾ ಸೂಪರ್ ಹಿಟ್ ಸಿನಿಮಾ ನೀಡಿರುವ ನಿರ್ದೇಶಕ ತರುಣ್ ಸುಧೀರ್ ದಿಢೀರ್ ಎಂದು ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆಯಲ್ಲಿ ಏನು ಮಾಡಲು ಬಂದಿದ್ದಾರೆ ತರುಣ್ ಸುಧೀರ್?

ಇದೇನಿದು ಅಚ್ಚರಿ, ಕಿರುತೆರೆಗೆ ಕಾಲಿಟ್ಟ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್
ಮಂಜುನಾಥ ಸಿ.
|

Updated on:Mar 26, 2024 | 9:02 PM

Share

ದೊಡ್ಡ ಪರದೆಯಲ್ಲಿ ಅವಕಾಶಗಳು ಕಡಿಮೆಯಾದಾಗಷ್ಟೆ ಸಿನಿಮಾ ನಟರು, ನಿರ್ದೇಶಕರು ಕಿರುತೆರೆ (Tv) ಕಡೆ ಮುಖ ಮಾಡುತ್ತಾರೆ ಎಂಬ ಮಾತು ಮುಂಚೆ ಇತ್ತು ಆದರೆ ಈಗದು ಬದಲಾಗಿದೆ. ಕೆಲವು ಸ್ಟಾರ್ ನಟರು ಮಾತ್ರ ರಿಯಾಲಿಟಿ ಶೋ ನಿರೂಪಕರಾಗಿ ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಾರೆ, ಸಿನಿಮಾಗಳಷ್ಟೆ ಜನಪ್ರಿಯತೆ, ಜನಾನುರಾಗ ಗಳಿಸುತ್ತಾರೆ. ಹಲವು ಸಿನಿಮಾ ನಟ-ನಟಿಯರು, ತಂತ್ರಜ್ಞರು ಟಿವಿ ರಿಯಾಲಿಟಿ ಶೋಗಳಲ್ಲಿ (Reality Show) ಭಾಗಿಯಾಗಿದ್ದಾರೆ. ಇತ್ತೀಚೆಗೆ ಸೂಪರ್-ಡೂಪರ್ ಹಿಟ್ ಸಿನಿಮಾ ನೀಡಿರುವ ನಿರ್ದೇಶಕ, ನಟ ತರುಣ್ ಸುಧೀರ್ ದಿಢೀರ್ ಎಂದು ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ‘ಮಹಾನಟಿ’ ಹೆಸರಿನ ರಿಯಾಲಿಟಿ ಶೋ ಪ್ರಸಾರವಾಗಲಿದ್ದು, ತರುಣ್ ಸುಧೀರ್ ಈ ರಿಯಾಲಿಟಿ ಶೋನ ತೀರ್ಪುಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡಕ್ಕೆ ಹೊರಗಿನಿಂದ ನಾಯಕಿಯರನ್ನು ಕರೆತರುವ ಸಂಪ್ರದಾಯ ಮೊದಲಿನಿಂದಲೂ ಇದೆ. ಕೆಲವರಂತೂ ಕನ್ನಡದಲ್ಲಿ ಒಳ್ಳೆಯ ನಟಿಯರ ಕೊರತೆ ಇದೆಯೆಂಬ ಮಾತುಗಳನ್ನು ಆಗಾಗ್ಗೆ ಆಡುವುದುಂಟು. ಈ ಕೊರತೆಯನ್ನು ನೀಗಿಸಲೆಂದು ‘ಮಹಾನಟಿ’ ರಿಯಾಲಿಟಿ ಶೋ ಪ್ರಾರಂಭವಾಗಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ನಟಿಯಾಗುವ ಅರ್ಹತೆಯುಳ್ಳವರನ್ನು ಆರಿಸಿಕೊಂಡು ಬರಲಾಗಿದ್ದು, ರಿಯಾಲಿಟಿ ಶೋ ಮೂಲಕ ಒಬ್ಬ ‘ಮಹಾನಟಿ’ಯನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:‘ಕಾಟೇರ 2’ ಬರುತ್ತಾ? ನಿರ್ದೇಶಕ ತರುಣ್ ಸುಧೀರ್ ಹೇಳಿದ್ದು ಹೀಗೆ…

ತರುಣ್ ಸುಧೀರ್ ಈ ರಿಯಾಲಿಟಿ ಶೋನ ತೀರ್ಪುಗಾರರಲ್ಲಿ ಒಬ್ಬರಾಗಿದ್ದು, ರಿಯಾಲಿಟಿ ಶೋನ ಪ್ರೋಮೋನಲ್ಲಿ ತರುಣ್ ಸುಧೀರ್ ಕಾಣಿಸಿಕೊಂಡಿದ್ದಾರೆ. ನಟಿಯೊಬ್ಬರ ಗಳಿಕೆ ಬಗ್ಗೆ ಕೀಳಾಗಿ ಮಾತನಾಡುವ ವ್ಯಕ್ತಿಯೊಬ್ಬನಿಗೆ ತರುಣ್ ಸುಧೀರ್ ಬುದ್ಧಿಹೇಳುವ ವಿಡಿಯೋ ಒಂದನ್ನು ‘ಮಹಾನಟಿ’ಯ ಪ್ರೋಮೋ ಆಗಿ ಬಿಡುಗಡೆ ಮಾಡಲಾಗಿದೆ. ರಿಯಾಲಿಟಿ ಶೋ ಇದೇ ಶನಿವಾರದಿಂದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

‘ಮಹಾನಟಿ’ ರಿಯಾಲಿಟಿ ಶೋಗಾಗಿ ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೀ ಕನ್ನಡ ತಂಡದವರು ಆಡಿಷನ್ ಮಾಡಿ ನಟಿಯಾಗಲು ಬಯಸುವ ಕೆಲವರನ್ನು ಆರಿಸಿ ತಂದಿದ್ದಾರೆ. ರಿಯಾಲಿಟಿ ಶೋ ಮೂಲಕ ಅವರಲ್ಲಿ ಅತ್ಯುತ್ತಮವಾದ ನಟಿಯನ್ನು ಆಯ್ಕೆ ಮಾಡಲಾಗುತ್ತದೆ. ಈ ನಟಿಗೆ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುವ ಅವಕಾಶವನ್ನು ಸಹ ನೀಡುವ ಸಾಧ್ಯತೆ ಇದೆ. ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿರುವ ಹಲವು ಕಲಾವಿದರು ಕನ್ನಡ ಚಿತ್ರರಂಗದಲ್ಲಿ ಬಹಳ ಒಳ್ಳೆಯ ನಟರಾಗಿ ಈಗಾಗಲೇ ಗುರುತಿಸಿಕೊಂಡಿದ್ದಾರೆ. ‘ಮಹಾನಟಿ’ ರಿಯಾಲಿಟಿ ಶೋನಿಂದ ಯಾವ ಪ್ರತಿಭೆಗಳು ಹೊರಗೆ ಬರುತ್ತವೆಯೋ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:00 pm, Tue, 26 March 24

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್