Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಕಿರುತೆರೆ ನಟಿ ದಿವ್ಯಾ ಶ್ರೀಧರ್​ ಮೇಲೆ ಹಲ್ಲೆ ಮಾಡಿದ ಪತಿ ಅಮ್ಜದ್ ಖಾನ್; ಆಸ್ಪತ್ರೆಗೆ ದಾಖಲಾದ ಹೀರೋಯಿನ್

ಲಾಕ್​ಡೌನ್​ ನಂತರದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಮದುವೆ ನಂತರ ಈ ದಂಪತಿ ಚೆನ್ನೈನಲ್ಲಿ ನೆಲೆಸಿದ್ದರು. ಈಗ ನಟಿ ವಿವಾದದ ಮೂಲಕ ಸುದ್ದಿ ಆಗಿದ್ದಾರೆ.   

ಕನ್ನಡ ಕಿರುತೆರೆ ನಟಿ ದಿವ್ಯಾ ಶ್ರೀಧರ್​ ಮೇಲೆ ಹಲ್ಲೆ ಮಾಡಿದ ಪತಿ ಅಮ್ಜದ್ ಖಾನ್; ಆಸ್ಪತ್ರೆಗೆ ದಾಖಲಾದ ಹೀರೋಯಿನ್
ಅಮ್ಜದ್-ದಿವ್ಯಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 06, 2022 | 7:53 PM

ನಟಿ ದಿವ್ಯಾ ಶ್ರೀಧರ್ (Divya Sridhar) ಅವರು ಕಿರುತೆರೆ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ‘ಆಕಾಶ ದೀಪ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. 2015ರಲ್ಲಿ ಪ್ರಸಾರ ಕಂಡ ತಮಿಳಿನ ‘ಕೆಳದಿ ಕಣ್ಮಣಿ’ ಧಾರಾವಾಹಿಯ ಸಹ ನಟ ಅಮ್ಜದ್ ಖಾನ್​ (Amjath Khan) ಅವರನ್ನು ದಿವ್ಯಾ ಮದುವೆ ಆಗಿದ್ದರು. ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳು ಬಂದಿದ್ದವು. ಈಗ ಇವರ ಸಂಸಾರದಲ್ಲಿ ಬಿರುಕು ಮೂಡಿದೆ. ಪತಿ ವಿರುದ್ಧ ಹಲ್ಲೆ, ಕಿರುಕುಳ ಆರೋಪವನ್ನು ದಿವ್ಯಾ ಹೊರಿಸಿದ್ದಾರೆ.

2017ರಿಂದ ದಿವ್ಯಾ ಶ್ರೀಧರ್ ಹಾಗೂ ಅಮ್ಜದ್ ಪ್ರೀತಿ ಮಾಡುತ್ತಿದ್ದರು. ಲಾಕ್​ಡೌನ್​ ವೇಳೆ ಅಮ್ಜದ್ ಸಂಕಷ್ಟದಲ್ಲಿದ್ದರು ಎನ್ನಲಾಗಿದೆ. ಈ ವೇಳೆ ದಿವ್ಯಾ ಸಹಾಯ ಮಾಡಿದ್ದರಂತೆ. ಲಾಕ್​ಡೌನ್​ ನಂತರದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಮದುವೆ ನಂತರ ಈ ದಂಪತಿ ಚೆನ್ನೈನಲ್ಲಿ ನೆಲೆಸಿದ್ದರು. ಈಗ ನಟಿ ವಿವಾದದ ಮೂಲಕ ಸುದ್ದಿ ಆಗಿದ್ದಾರೆ.

‘ನೀನು ಕನ್ನಡದ ನಟಿ. ನಮ್ಮ ರಾಜ್ಯಕ್ಕೆ ಬಂದು ಏನೂ ಮಾಡೋಕೆ ಆಗುವುದಿಲ್ಲ. ಇಲ್ಲಿ ನನ್ನ ಕಡೆಯವರು ತುಂಬಾ ಜನ ಇದ್ದಾರೆ’ ಎಂದು ಅಮ್ಜದ್ ಪತ್ನಿಗೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ದಿವ್ಯಾ ಪರ ವಕೀಲರು ಟಿವಿ9 ಕನ್ನಡದ ಜತೆ ಮಾಹಿತಿ ಹಂಚಿಕೊಂಡಿದ್ದಾರೆ.

ದಿವ್ಯಾ ಮೂರು ತಿಂಗಳ ಪ್ರೆಗ್ನೆಂಟ್. ಈ ವಿಚಾರ ಗೊತ್ತಿದ್ದರೂ ಅಮ್ಜದ್ ಹೊಟ್ಟೆಗೆ ಒದ್ದಿದ್ದಾರೆ, ಕಪಾಳಕ್ಕೆ ಹೊಡೆದಿದ್ದಾರೆ. ಸದ್ಯ ದಿವ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪೊಲೀಸರು ದಿವ್ಯಾ ಹೇಳಿಕೆ ಪಡೆದಿದ್ದಾರೆ. ಅವರು ಆಸ್ಪತ್ರೆಯಿಂದ ಆಚೆಬಂದ ಮೇಲೆ ಪೊಲೀಸರಿಗೆ ದೂರು ಕೊಡುತ್ತೇವೆ’ ಎಂದು ದಿವ್ಯಾ ಪರ ವಕೀಲರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Lokesh Rajendran: ಖ್ಯಾತ ಕಿರುತೆರೆ ನಟ ಆತ್ಮಹತ್ಯೆ; ಪತ್ನಿಯಿಂದ ಡಿವೋರ್ಸ್​ ನೋಟಿಸ್​ ಬಂದ ಬೆನ್ನಲ್ಲೇ ದುರಂತ ಅಂತ್ಯ

2017ರಿಂದ ದಿವ್ಯಾ-ಅಮ್ಜದ್ ಲಿವಿನ್​ ರಿಲೇಶನ್​​ಶಿಪ್​ನಲ್ಲಿದ್ದರು ಎನ್ನಲಾಗಿದೆ. ಅಮ್ಜದ್ ​​ಗೆ ಕೆಲಸ ಇಲ್ಲದೆ ಇದ್ದಾಗ ಅವರನ್ನು ನೋಡಿಕೊಂಡಿದ್ದು ದಿವ್ಯಾ ಎನ್ನಲಾಗಿದೆ. ದಿವ್ಯಾ ಅವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿಸಿ ಅಮ್ಜದ್ ಮದುವೆ ಆಗಿದ್ದರು. 2022 ಜೂನ್​ನಲ್ಲಿ ಮುಸ್ಲಿಂ ಧರ್ಮದ ಪ್ರಕಾರ ಮದುವೆ ನಡೆದಿದೆ ಎನ್ನಲಾಗಿದೆ. ಆದರೆ, ಮದುವೆ ವಿಚಾರ ಗುಟ್ಟಾಗಿ ಇಡುವ ಆಲೋಚನೆ ಅಮ್ಜದ್​ಗೆ ಇತ್ತು. ಈಗ ಗರ್ಭಿಣಿ ಆದ ನಂತರದಲ್ಲಿ ಈ ವಿಚಾರವನ್ನು ದಿವ್ಯಾ ಗೆಳತಿಯರ ಜತೆ ಹಂಚಿಕೊಂಡಿದ್ದರು. ಮದುವೆಯ ವಿಚಾರ ರಿವೀಲ್ ಮಾಡಿದ್ದು ಏಕೆ ಎಂದು ಅಮ್ಜದ್ ಗಲಾಟೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ