AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಕಿರುತೆರೆ ನಟಿ ದಿವ್ಯಾ ಶ್ರೀಧರ್​ ಮೇಲೆ ಹಲ್ಲೆ ಮಾಡಿದ ಪತಿ ಅಮ್ಜದ್ ಖಾನ್; ಆಸ್ಪತ್ರೆಗೆ ದಾಖಲಾದ ಹೀರೋಯಿನ್

ಲಾಕ್​ಡೌನ್​ ನಂತರದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಮದುವೆ ನಂತರ ಈ ದಂಪತಿ ಚೆನ್ನೈನಲ್ಲಿ ನೆಲೆಸಿದ್ದರು. ಈಗ ನಟಿ ವಿವಾದದ ಮೂಲಕ ಸುದ್ದಿ ಆಗಿದ್ದಾರೆ.   

ಕನ್ನಡ ಕಿರುತೆರೆ ನಟಿ ದಿವ್ಯಾ ಶ್ರೀಧರ್​ ಮೇಲೆ ಹಲ್ಲೆ ಮಾಡಿದ ಪತಿ ಅಮ್ಜದ್ ಖಾನ್; ಆಸ್ಪತ್ರೆಗೆ ದಾಖಲಾದ ಹೀರೋಯಿನ್
ಅಮ್ಜದ್-ದಿವ್ಯಾ
TV9 Web
| Edited By: |

Updated on: Oct 06, 2022 | 7:53 PM

Share

ನಟಿ ದಿವ್ಯಾ ಶ್ರೀಧರ್ (Divya Sridhar) ಅವರು ಕಿರುತೆರೆ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ‘ಆಕಾಶ ದೀಪ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. 2015ರಲ್ಲಿ ಪ್ರಸಾರ ಕಂಡ ತಮಿಳಿನ ‘ಕೆಳದಿ ಕಣ್ಮಣಿ’ ಧಾರಾವಾಹಿಯ ಸಹ ನಟ ಅಮ್ಜದ್ ಖಾನ್​ (Amjath Khan) ಅವರನ್ನು ದಿವ್ಯಾ ಮದುವೆ ಆಗಿದ್ದರು. ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳು ಬಂದಿದ್ದವು. ಈಗ ಇವರ ಸಂಸಾರದಲ್ಲಿ ಬಿರುಕು ಮೂಡಿದೆ. ಪತಿ ವಿರುದ್ಧ ಹಲ್ಲೆ, ಕಿರುಕುಳ ಆರೋಪವನ್ನು ದಿವ್ಯಾ ಹೊರಿಸಿದ್ದಾರೆ.

2017ರಿಂದ ದಿವ್ಯಾ ಶ್ರೀಧರ್ ಹಾಗೂ ಅಮ್ಜದ್ ಪ್ರೀತಿ ಮಾಡುತ್ತಿದ್ದರು. ಲಾಕ್​ಡೌನ್​ ವೇಳೆ ಅಮ್ಜದ್ ಸಂಕಷ್ಟದಲ್ಲಿದ್ದರು ಎನ್ನಲಾಗಿದೆ. ಈ ವೇಳೆ ದಿವ್ಯಾ ಸಹಾಯ ಮಾಡಿದ್ದರಂತೆ. ಲಾಕ್​ಡೌನ್​ ನಂತರದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಮದುವೆ ನಂತರ ಈ ದಂಪತಿ ಚೆನ್ನೈನಲ್ಲಿ ನೆಲೆಸಿದ್ದರು. ಈಗ ನಟಿ ವಿವಾದದ ಮೂಲಕ ಸುದ್ದಿ ಆಗಿದ್ದಾರೆ.

‘ನೀನು ಕನ್ನಡದ ನಟಿ. ನಮ್ಮ ರಾಜ್ಯಕ್ಕೆ ಬಂದು ಏನೂ ಮಾಡೋಕೆ ಆಗುವುದಿಲ್ಲ. ಇಲ್ಲಿ ನನ್ನ ಕಡೆಯವರು ತುಂಬಾ ಜನ ಇದ್ದಾರೆ’ ಎಂದು ಅಮ್ಜದ್ ಪತ್ನಿಗೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ದಿವ್ಯಾ ಪರ ವಕೀಲರು ಟಿವಿ9 ಕನ್ನಡದ ಜತೆ ಮಾಹಿತಿ ಹಂಚಿಕೊಂಡಿದ್ದಾರೆ.

ದಿವ್ಯಾ ಮೂರು ತಿಂಗಳ ಪ್ರೆಗ್ನೆಂಟ್. ಈ ವಿಚಾರ ಗೊತ್ತಿದ್ದರೂ ಅಮ್ಜದ್ ಹೊಟ್ಟೆಗೆ ಒದ್ದಿದ್ದಾರೆ, ಕಪಾಳಕ್ಕೆ ಹೊಡೆದಿದ್ದಾರೆ. ಸದ್ಯ ದಿವ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪೊಲೀಸರು ದಿವ್ಯಾ ಹೇಳಿಕೆ ಪಡೆದಿದ್ದಾರೆ. ಅವರು ಆಸ್ಪತ್ರೆಯಿಂದ ಆಚೆಬಂದ ಮೇಲೆ ಪೊಲೀಸರಿಗೆ ದೂರು ಕೊಡುತ್ತೇವೆ’ ಎಂದು ದಿವ್ಯಾ ಪರ ವಕೀಲರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Lokesh Rajendran: ಖ್ಯಾತ ಕಿರುತೆರೆ ನಟ ಆತ್ಮಹತ್ಯೆ; ಪತ್ನಿಯಿಂದ ಡಿವೋರ್ಸ್​ ನೋಟಿಸ್​ ಬಂದ ಬೆನ್ನಲ್ಲೇ ದುರಂತ ಅಂತ್ಯ

2017ರಿಂದ ದಿವ್ಯಾ-ಅಮ್ಜದ್ ಲಿವಿನ್​ ರಿಲೇಶನ್​​ಶಿಪ್​ನಲ್ಲಿದ್ದರು ಎನ್ನಲಾಗಿದೆ. ಅಮ್ಜದ್ ​​ಗೆ ಕೆಲಸ ಇಲ್ಲದೆ ಇದ್ದಾಗ ಅವರನ್ನು ನೋಡಿಕೊಂಡಿದ್ದು ದಿವ್ಯಾ ಎನ್ನಲಾಗಿದೆ. ದಿವ್ಯಾ ಅವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿಸಿ ಅಮ್ಜದ್ ಮದುವೆ ಆಗಿದ್ದರು. 2022 ಜೂನ್​ನಲ್ಲಿ ಮುಸ್ಲಿಂ ಧರ್ಮದ ಪ್ರಕಾರ ಮದುವೆ ನಡೆದಿದೆ ಎನ್ನಲಾಗಿದೆ. ಆದರೆ, ಮದುವೆ ವಿಚಾರ ಗುಟ್ಟಾಗಿ ಇಡುವ ಆಲೋಚನೆ ಅಮ್ಜದ್​ಗೆ ಇತ್ತು. ಈಗ ಗರ್ಭಿಣಿ ಆದ ನಂತರದಲ್ಲಿ ಈ ವಿಚಾರವನ್ನು ದಿವ್ಯಾ ಗೆಳತಿಯರ ಜತೆ ಹಂಚಿಕೊಂಡಿದ್ದರು. ಮದುವೆಯ ವಿಚಾರ ರಿವೀಲ್ ಮಾಡಿದ್ದು ಏಕೆ ಎಂದು ಅಮ್ಜದ್ ಗಲಾಟೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ