AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಜತೆ ಮಾತನಾಡೋದು ಪಾಯಿಂಟ್​ಲೆಸ್​ ಅನಿಸುತ್ತಿದೆ’; ಮಂಜುನ ದೂರ ಮಾಡಿ ಒಬ್ಬಂಟಿಯಾದ ದಿವ್ಯಾ

ಜುಲೈ 28ರ ಎಪಿಸೋಡ್​ನಲ್ಲಿ ಮಂಜು ಹಾಗೂ ದಿವ್ಯಾ ಸುರೇಶ್​ ನಡುವೆ ಸಣ್ಣ ಮಾತಿಗೆ ಆರಂಭವಾದ ಜಗಳ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ಇಬ್ಬರೂ ಮಾತನಾಡುವುದನ್ನೇ ನಿಲ್ಲಿಸಿದ್ದರು.

‘ನಿನ್ನ ಜತೆ ಮಾತನಾಡೋದು ಪಾಯಿಂಟ್​ಲೆಸ್​ ಅನಿಸುತ್ತಿದೆ’; ಮಂಜುನ ದೂರ ಮಾಡಿ ಒಬ್ಬಂಟಿಯಾದ ದಿವ್ಯಾ
ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​
TV9 Web
| Edited By: |

Updated on: Jul 30, 2021 | 3:36 PM

Share

ದಿವ್ಯಾ ಸುರೇಶ್​ ಬಿಗ್​ ಬಾಸ್​ ಮನೆಯಲ್ಲಿ ದಿನಕಳೆದಂತೆ ಎಲ್ಲರಿಂದಲೂ ದೂರವಾಗುತ್ತಿದ್ದಾರೆ. ಮಂಜು ಪಾವಗಡ ಜತೆ ದಿವ್ಯಾ ಹೆಚ್ಚು ಸಲುಗೆಯಿಂದ ಇದ್ದರು. ಆದರೆ, ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಇಬ್ಬರೂ ಮೊದಲಿನಷ್ಟು ಆಪ್ತವಾಗಿಲ್ಲ. ಇಬ್ಬರ ನಡುವೆ ಜಗಳಗಳು ನಡೆಯುತ್ತಲೇ ಇವೆ. ಈಗ ಮತ್ತೊಮ್ಮೆ ದಿವ್ಯಾ-ಮಂಜು ನಡುವೆ ಗಂಭೀರವಾದ ಜಗಳ ನಡೆದಿದೆ.

ಜುಲೈ 28ರ ಎಪಿಸೋಡ್​ನಲ್ಲಿ ಮಂಜು ಹಾಗೂ ದಿವ್ಯಾ ಸುರೇಶ್​ ನಡುವೆ ಸಣ್ಣ ಮಾತಿಗೆ ಆರಂಭವಾದ ಜಗಳ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ಇಬ್ಬರೂ ಮಾತನಾಡುವುದನ್ನೇ ನಿಲ್ಲಿಸಿದ್ದರು. ಒಂದು ದಿನ ಕಳೆದರೂ ಇಬ್ಬರೂ ಪರಸ್ಪರ ಮಾತನಾಡಿಕೊಂಡಿಲ್ಲ. ಈ ವಿಚಾರದ ಬಗ್ಗೆ ದಿವ್ಯಾ ಅವರು ವೈಷ್ಣವಿ ಜತೆ ಚರ್ಚೆ ಮಾಡಿದ್ದಾರೆ.

‘ನಾನು ಮಂಜುಗೆ ಏನನ್ನೂ ಹೇಳಿಲ್ಲ. ಆದಾಗ್ಯೂ ಆತ ಜಗಳವಾಡಿದ್ದಾನೆ. ಇಲ್ಲಿಯವರೆಗೆ ನನ್ನನ್ನೂ ಮಾತನಾಡಿಸೋಕೂ ಬಂದಿಲ್ಲ. ಎಷ್ಟೊಂದು ವಿಚಿತ್ರ ಅನಿಸುತ್ತಿದೆ ನನಗೆ ಅದು’ ಎಂದು ವೈಷ್ಣವಿ ಬಳಿ ಅಳಲು ತೋಡಿಕೊಂಡಿದ್ದಾರೆ ದಿವ್ಯಾ  ಸುರೇಶ್​.

ಇದಾದ ಬೆನ್ನಲ್ಲೇ ಮಂಜು ಜತೆ ದಿವ್ಯಾ ಮಾತನಾಡಿದ್ದಾರೆ. ‘ಬಯ್ಯುವಂತಹದ್ದು ನಾನು ಏನು ಮಾಡಿದೆ? ಅದನ್ನೆಲ್ಲ ಕೇಳೋಕೆ ನೀನ್ಯಾರು ಅಂತ ಕೇಳಿದೆ. ಆ ರೀತಿ ಪ್ರಶ್ನೆ ಮಾಡೋ ತರಹ ನಾನೇನು ಹೇಳಿಲ್ಲ. ನಿನ್ನ ಜತೆ ಮಾತಾಡೋದು ಪಾಯಿಂಟ್​ಲೆಸ್​ ಅನಿಸುತ್ತದೆ’ ಎಂದ ದಿವ್ಯಾ ಒಂದು ಕ್ಷಣವೂ ಅಲ್ಲಿ ನಿಲ್ಲದೆ ತೆರಳಿದರು.

ದಿವ್ಯಾ ಸುರೇಶ್​ ಹೆಚ್ಚು ಕ್ಲೋಸ್​ ಆಗಿದ್ದಿದ್ದು ಪ್ರಿಯಾಂಕಾ ತಿಮ್ಮೇಶ್​ಗೆ. ಆದರೆ, ಪ್ರಿಯಾಂಕಾ ಎಲಿಮಿನೇಟ್​ ಆಗಿದ್ದಾರೆ. ಶಮಂತ್​ ಜತೆ ದಿವ್ಯಾ ಚೆನ್ನಾಗಿದ್ದಾರೆ. ಆದರೆ, ಕ್ಲೋಸ್​ನೆಸ್ ಬರುತ್ತಿಲ್ಲ. ಈಗ ಮಂಜು ಜತೆ ಪದೇಪದೇ ಜಗಳವಾಗುತ್ತಿದೆ. ಈಗ ಮಂಜು ಜತೆ ಮಾತನಾಡುವುದಿಲ್ಲ ಎಂದು ದಿವ್ಯಾ ಶಪಥ ಮಾಡಿದ್ದಾರೆ. ಹೀಗಾಗಿ, ಮನೆಯಲ್ಲಿ ದಿನಕಳೆದಂತೆ ಅವರು ಮತ್ತಷ್ಟು ಒಂಟಿಯಾಗುತ್ತಿದ್ದಾರೆ.

ಇದನ್ನೂ ಓದಿ: ದಿವ್ಯಾ ಸುರೇಶ್​ ಮೇಲೆ ನನಗೆ ನಂಬಿಕೆ ಇಲ್ಲ; ಎಲ್ಲರ ಎದುರು ನೇರವಾಗಿ ಹೇಳಿದ ಮಂಜು ಪಾವಗಡ

‘ನೀವು ನಡೆದುಕೊಂಡ ರೀತಿ ನಿಮ್ಮ ವ್ಯಕ್ತಿತ್ವಕ್ಕೆ ಸೂಕ್ತವಲ್ಲ’; ಪಂಚಾಯ್ತಿಯಲ್ಲಿ ವೈಷ್ಣವಿಗೆ ಬುದ್ಧಿ ಹೇಳಿದ ಕಿಚ್ಚ ಸುದೀಪ್​

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!