AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಇದ್ದರೂ ದಿವ್ಯಾಗೆ ಕಾಡುತ್ತಿದೆ ಏಕಾಂಗಿತನ

ದಿವ್ಯಾ ಅತ್ತ ವಿಚಾರ ಮಂಜು ಗಮನಕ್ಕೆ ಬಂದಿದೆ. ನಿನ್ನೆ ಅಳುತ್ತಿದ್ದೆ ಏಕೆ ಎಂದು ಪ್ರಶ್ನೆ ಮಾಡಿದ್ದಾರೆ ಮಂಜು. ‘ನೀವೆಲ್ಲ ನಿಮ್ಮ ಫ್ರೆಂಡ್ಸ್​ ಜತೆ ಸಮಯ ಕಳೆಯೋದು ನೋಡಿದ್ರೆ ನನಗೆ ಬೇಜಾರು ಆಗುತ್ತೆ. ನನಗೂ ನನ್​ ಫ್ರೆಂಡ್ ಇದ್ದರೆ ನಾನು ಅವಳ ಜತೆ ಸುದ್ದಿ ಹೇಳಿಕೊಂಡಿರಬಹುದಿತ್ತು ಅನ್ನಿಸಿತು ಅಷ್ಟೇ’ ಎಂದಿದ್ದಾರೆ ದಿವ್ಯಾ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಇದ್ದರೂ ದಿವ್ಯಾಗೆ ಕಾಡುತ್ತಿದೆ ಏಕಾಂಗಿತನ
ದಿವ್ಯಾ ಸುರೇಶ್
TV9 Web
| Edited By: |

Updated on: Jul 21, 2021 | 7:10 AM

Share

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್ ನಡುವೆ ಮೊದಲಿದ್ದ ಆಪ್ತತೆ ಈಗ ಇಲ್ಲ. ಇಬ್ಬರೂ ಅಷ್ಟಾಗಿ ಕ್ಲೋಸ್​ ಆಗಿ ನಡೆದುಕೊಳ್ಳುತ್ತಿಲ್ಲ. ಈ ವಿಚಾರದ ಬಗ್ಗೆ ದಿವ್ಯಾ ಸುರೇಶ್​ ಸಾಕಷ್ಟು ಬೇಸರಗೊಂಡಿದ್ದಾರೆ. ಅಷ್ಟೇ ಅಲ್ಲ, ಮಂಜು ಎದುರು ಈ ಬಗ್ಗೆ ಹೇಳಿಕೊಂಡಿದ್ದಾರೆ.

ಮಂಜು ಪಾವಗಡ ಅವರು ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಸಾಕಷ್ಟು ಬದಲಾಗಿದ್ದಾರೆ. ಅವರು ಕೇವಲ ದಿವ್ಯಾ ಸುರೇಶ್​ಗೆ ಮಾತ್ರ ಸೀಮಿತವಾಗಿಲ್ಲ. ಬಿಗ್​ ಬಾಸ್​ ಮನೆಯಲ್ಲಿ ಶುಭಾ ಪೂಂಜಾ, ಅರವಿಂದ್, ಚಕ್ರವರ್ತಿ ಸೇರಿ ಎಲ್ಲರ ಜತೆಗೂ ಮಾತುಕತೆ ನಡೆಸುತ್ತಾರೆ. ಉಳಿದವರ ಜತೆ ಬೆರೆತಷ್ಟು ದಿವ್ಯಾ ಜತೆ ಮಂಜು ಬೆರೆಯುತ್ತಿಲ್ಲ. ಇದು ದಿವ್ಯಾ ಗಮನಕ್ಕೆ ಬಂದಿದೆ.

ದಿವ್ಯಾ ಬಿಗ್​ ಬಾಸ್​ ಮನೆಯಲ್ಲಿ ಪ್ರಿಯಾಂಕ ತಿಮ್ಮೇಶ್​ ಜತೆ ತುಂಬಾನೇ ಕ್ಲೋಸ್​ ಆಗಿದ್ದರು. ಆದರೆ, ಕಳೆದವಾರ ಅವರು ಎಲಿಮಿನೇಟ್​ ಆಗಿದ್ದಾರೆ. ಇನ್ನು, ದಿವ್ಯಾ ಅವರು ಶಮಂತ್​ ಬ್ರೋ ಗೌಡ ಜತೆ ಕನೆಕ್ಟ್​ ಆಗೋಕೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಶುಭಾ ಜತೆ ಮಂಜು ಸಮಯ ಕಳೆಯುತ್ತಿರುವುದಕ್ಕೆ ದಿವ್ಯಾ ಏಕಾಂಗಿಯಾಗಿದ್ದಾರೆ.

ದಿವ್ಯಾ ಉರುಡುಗ-ಅರವಿಂದ್ ಒಂದು ಕಡೆ ಇರುತ್ತಾರೆ. ಪ್ರಶಾಂತ್​ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ಹಾಗೂ ಶಮಂತ್​ ಗುಂಪು ಮಾಡಿಕೊಂಡಿದ್ದಾರೆ. ಶುಭಾ-ಮಂಜು ಒಂದೆಡೆ ಇರುತ್ತಾರೆ. ವೈಷ್ಣವಿ ಎಲ್ಲರ ಜತೆಯೂ ಬೆರೆತರೂ ಬೆರೆಯದಂತೆ ಇರುತ್ತಾರೆ.  ಈ ಕಾರಣಕ್ಕೆ ದಿವ್ಯಾಗೆ ಜತೆ ಸಿಗುತ್ತಿಲ್ಲ. ಹೀಗಾಗಿ, ಒಬ್ಬರೇ ಕೂತು ಅವರು ಅತ್ತಿದ್ದಾರೆ.

ದಿವ್ಯಾ ಅತ್ತ ವಿಚಾರ ಮಂಜು ಗಮನಕ್ಕೆ ಬಂದಿದೆ. ನಿನ್ನೆ ಅಳುತ್ತಿದ್ದೆ ಏಕೆ ಎಂದು ಪ್ರಶ್ನೆ ಮಾಡಿದ್ದಾರೆ ಮಂಜು. ‘ನೀವೆಲ್ಲ ನಿಮ್ಮ ಫ್ರೆಂಡ್ಸ್​ ಜತೆ ಸಮಯ ಕಳೆಯೋದು ನೋಡಿದ್ರೆ ನನಗೆ ಬೇಜಾರು ಆಗುತ್ತೆ. ನನಗೂ ನನ್​ ಫ್ರೆಂಡ್ ಇದ್ದರೆ ನಾನು ಅವಳ ಜತೆ ಸುದ್ದಿ ಹೇಳಿಕೊಂಡಿರಬಹುದಿತ್ತು ಅನ್ನಿಸಿತು ಅಷ್ಟೇ’ ಎಂದಿದ್ದಾರೆ ದಿವ್ಯಾ.

(Divya Suresh Feels Lonely In Bigg Boss Kannada House)

ಇದನ್ನೂ ಓದಿ: ‘ಮುಂದಿನ ವರ್ಷ ಮದುವೆ, ನನ್ನದು ಅರೇಂಜ್​ ಮ್ಯಾರೇಜ್’​; ವಿವಾಹದ ಬಗ್ಗೆ ಮತ್ತೊಮ್ಮೆ ಮೌನ ಮುರಿದ ವೈಷ್ಣವಿ

ಬಿಗ್ ಬಾಸ್ ಮನೆಯಲ್ಲಿ ಅವಘಡ; ದಿವ್ಯಾ ಉರುಡುಗ ಹೊಡೆದ ಫೋರ್ಸ್​ಗೆ ಗಾಜು ನುಚ್ಚುನೂರು, ಕೈಯಲ್ಲಿ ರಕ್ತ

Follow Us
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್