AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೂ ಮೊದಲು ಮಿಡ್​ವೀಕ್​ ಎಲಿಮಿನೇಷನ್​; ಇಂದು ಹೊರ ಹೋಗುವ ಸ್ಪರ್ಧಿ ಇವರೇನಾ?

ಕಳೆದ ವಾರದ ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ 9 ಸದಸ್ಯರು ಇದ್ದರು. ಈ ಪೈಕಿ ಚಕ್ರವರ್ತಿ ಚಂದ್ರಚೂಡ್​ ವಾರದ ಮಧ್ಯದಲ್ಲಿ ಎಲಿಮಿನೇಟ್​ ಆದರು. ಕಳೆದ ವಾರಾಂತ್ಯದಲ್ಲಿ ಶುಭಾ ಪೂಂಜಾ ಹಾಗೂ ಶಮಂತ್​ ಬ್ರೋ ಗೌಡ ಎಲಿಮಿನೇಟ್​ ಆಗಿದ್ದಾರೆ.

ಬಿಗ್​ ಬಾಸ್​ ಫಿನಾಲೆಗೂ ಮೊದಲು ಮಿಡ್​ವೀಕ್​ ಎಲಿಮಿನೇಷನ್​; ಇಂದು ಹೊರ ಹೋಗುವ ಸ್ಪರ್ಧಿ ಇವರೇನಾ?
ಬಿಗ್​ ಬಾಸ್​ ಕನ್ನಡ
TV9 Web
| Edited By: |

Updated on:Aug 04, 2021 | 2:21 PM

Share

ಬಿಗ್​ ಬಾಸ್​ ಫಿನಾಲೆಗೆ ಇನ್ನು ಬೆರಳೆಣಿಕೆ ದಿನಗಳು ಮಾತ್ರ ಬಾಕಿ ಇವೆ. ಅದಕ್ಕೂ ಮೊದಲು ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ ನಡೆಯುತ್ತಿದೆ. ಆರು ಸ್ಪರ್ಧಿಗಳ ಪೈಕಿ ಒಬ್ಬರು ಎಲಿಮಿನೇಟ್​ ಆಗುತ್ತಿದ್ದು, ಐವರು ಫಿನಾಲೆ ತಲುಪುತ್ತಿದ್ದಾರೆ. ಹಾಗಾದರೆ, ಫಿನಾಲೆ ತಲುಪುವ ಸ್ಪರ್ಧಿಗಳು ಯಾರು? ಇಂದು ನಡೆಯುವ ಎಲಿಮಿನೇಷನ್​ನಲ್ಲಿ ಹೊರ ಹೋಗುವವರು ಯಾರು ಎನ್ನುವುದು ಸದ್ಯದ ಕುತೂಹಲ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​ ಹಾಗೂ ವೈಷ್ಣವಿ ಇದ್ದಾರೆ. ಫಿನಾಲೆ ವೀಕ್​ ಆದ್ದರಿಂದ ಎಲಿಮಿನೇಷನ್​ಗೆ ಎಲ್ಲರೂ ನಾಮಿನೇಟ್​​ ಆಗಿದ್ದಾರೆ. ಅಂದಹಾಗೆ, ಈ ವಾರದ ಮಧ್ಯದಲ್ಲಿ (ಬುಧವಾರ) ಒಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ.

ಕಳೆದ ವಾರದ ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ 9 ಸದಸ್ಯರು ಇದ್ದರು. ಈ ಪೈಕಿ ಚಕ್ರವರ್ತಿ ಚಂದ್ರಚೂಡ್​ ವಾರದ ಮಧ್ಯದಲ್ಲಿ ಎಲಿಮಿನೇಟ್​ ಆದರು. ಕಳೆದ ವಾರಾಂತ್ಯದಲ್ಲಿ ಶುಭಾ ಪೂಂಜಾ ಹಾಗೂ ಶಮಂತ್​ ಬ್ರೋ ಗೌಡ ಎಲಿಮಿನೇಟ್​ ಆಗಿದ್ದಾರೆ.

ಫಿನಾಲೆಯಲ್ಲಿ ಉಳಿದುಕೊಳ್ಳೋದು ಐದು ಸ್ಪರ್ಧಿಗಳು. ಪ್ರತಿ ವರ್ಷವೂ ಇದೇ ಸಂಪ್ರದಾಯ ನಡೆದುಕೊಂಡು ಬಂದಿದೆ. ಈ ಬಾರಿ ಫಿನಾಲೆ ವೀಕ್​ ಬಂದರೂ ಆರು ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈ ಕಾರಣಕ್ಕೆ ಒಬ್ಬರು ಫಿನಾಲೆ ವಾರ ಮನೆಯಿಂದ ಹೊರ ಹೋಗಲಿದ್ದಾರೆ ಎಂದು ಸುದೀಪ್​ ಹೇಳಿದ್ದರು. ಅಂತೆಯೇ ಬುಧವಾರದ ಎಪಿಸೋಡ್​ನಲ್ಲಿ ಒಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ.

ಆರೂ ಸ್ಪರ್ಧಿಗಳಿಗೆ ನಾನಾ ರೀತಿಯ ಟಾಸ್ಕ್​ ನೀಡಲಾಗಿದೆ. ಈ ಪೈಕಿ ಒಬ್ಬೊಬ್ಬರನ್ನಾಗಿಯೇ ಸೇವ್​ ಮಾಡುತ್ತಾ ಬರಲಾಗಿದೆ. ಕೊನೆಯಲ್ಲಿ ಉಳಿದ ಸ್ಪರ್ಧಿ ಎಲಿಮಿನೇಟ್​ ಆದಂತೆ. ಈ ವಾರ ಕಡಿಮೆ ವೋಟ್​ ಪಡೆದು ದಿವ್ಯಾ ಸುರೇಶ್​ ಎಲಿಮಿನೇಟ್​ ಆಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಬೇಕಿದೆ. ಇದು ನಿಜವಾದ್ದಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ ಹಾಗೂ ವೈಷ್ಣವಿ ಫಿನಾಲೆ ತಲುಪಿದಂತಾಗುತ್ತದೆ.

ಇದನ್ನೂ ಓದಿ: ಬಿಗ್​ ಬಾಸ್​ ವಿನ್ನರ್​ಗೆ ಸಿಕ್ತು 75 ಲಕ್ಷದ ಮನೆ; 16 ವರ್ಷದ ಪರಿಶ್ರಮಕ್ಕೆ ಸಿಕ್ಕ ಫಲ ಇದು

ಬಿಗ್​ ಬಾಸ್​ ಫಿನಾಲೆಯಲ್ಲಿ ಸುದೀಪ್​ ಅಕ್ಕ-ಪಕ್ಕ ನಿಲ್ಲುವ ಸ್ಪರ್ಧಿಗಳು ಇವರೇನಾ? ಸಿಕ್ತು ಮತ್ತೊಂದು ಸಾಕ್ಷಿ

Published On - 2:14 pm, Wed, 4 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!