AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೂ ಮೊದಲು ಮಿಡ್​ವೀಕ್​ ಎಲಿಮಿನೇಷನ್​; ಇಂದು ಹೊರ ಹೋಗುವ ಸ್ಪರ್ಧಿ ಇವರೇನಾ?

ಕಳೆದ ವಾರದ ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ 9 ಸದಸ್ಯರು ಇದ್ದರು. ಈ ಪೈಕಿ ಚಕ್ರವರ್ತಿ ಚಂದ್ರಚೂಡ್​ ವಾರದ ಮಧ್ಯದಲ್ಲಿ ಎಲಿಮಿನೇಟ್​ ಆದರು. ಕಳೆದ ವಾರಾಂತ್ಯದಲ್ಲಿ ಶುಭಾ ಪೂಂಜಾ ಹಾಗೂ ಶಮಂತ್​ ಬ್ರೋ ಗೌಡ ಎಲಿಮಿನೇಟ್​ ಆಗಿದ್ದಾರೆ.

ಬಿಗ್​ ಬಾಸ್​ ಫಿನಾಲೆಗೂ ಮೊದಲು ಮಿಡ್​ವೀಕ್​ ಎಲಿಮಿನೇಷನ್​; ಇಂದು ಹೊರ ಹೋಗುವ ಸ್ಪರ್ಧಿ ಇವರೇನಾ?
ಬಿಗ್​ ಬಾಸ್​ ಕನ್ನಡ
TV9 Web
| Edited By: |

Updated on:Aug 04, 2021 | 2:21 PM

Share

ಬಿಗ್​ ಬಾಸ್​ ಫಿನಾಲೆಗೆ ಇನ್ನು ಬೆರಳೆಣಿಕೆ ದಿನಗಳು ಮಾತ್ರ ಬಾಕಿ ಇವೆ. ಅದಕ್ಕೂ ಮೊದಲು ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ ನಡೆಯುತ್ತಿದೆ. ಆರು ಸ್ಪರ್ಧಿಗಳ ಪೈಕಿ ಒಬ್ಬರು ಎಲಿಮಿನೇಟ್​ ಆಗುತ್ತಿದ್ದು, ಐವರು ಫಿನಾಲೆ ತಲುಪುತ್ತಿದ್ದಾರೆ. ಹಾಗಾದರೆ, ಫಿನಾಲೆ ತಲುಪುವ ಸ್ಪರ್ಧಿಗಳು ಯಾರು? ಇಂದು ನಡೆಯುವ ಎಲಿಮಿನೇಷನ್​ನಲ್ಲಿ ಹೊರ ಹೋಗುವವರು ಯಾರು ಎನ್ನುವುದು ಸದ್ಯದ ಕುತೂಹಲ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​ ಹಾಗೂ ವೈಷ್ಣವಿ ಇದ್ದಾರೆ. ಫಿನಾಲೆ ವೀಕ್​ ಆದ್ದರಿಂದ ಎಲಿಮಿನೇಷನ್​ಗೆ ಎಲ್ಲರೂ ನಾಮಿನೇಟ್​​ ಆಗಿದ್ದಾರೆ. ಅಂದಹಾಗೆ, ಈ ವಾರದ ಮಧ್ಯದಲ್ಲಿ (ಬುಧವಾರ) ಒಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ.

ಕಳೆದ ವಾರದ ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ 9 ಸದಸ್ಯರು ಇದ್ದರು. ಈ ಪೈಕಿ ಚಕ್ರವರ್ತಿ ಚಂದ್ರಚೂಡ್​ ವಾರದ ಮಧ್ಯದಲ್ಲಿ ಎಲಿಮಿನೇಟ್​ ಆದರು. ಕಳೆದ ವಾರಾಂತ್ಯದಲ್ಲಿ ಶುಭಾ ಪೂಂಜಾ ಹಾಗೂ ಶಮಂತ್​ ಬ್ರೋ ಗೌಡ ಎಲಿಮಿನೇಟ್​ ಆಗಿದ್ದಾರೆ.

ಫಿನಾಲೆಯಲ್ಲಿ ಉಳಿದುಕೊಳ್ಳೋದು ಐದು ಸ್ಪರ್ಧಿಗಳು. ಪ್ರತಿ ವರ್ಷವೂ ಇದೇ ಸಂಪ್ರದಾಯ ನಡೆದುಕೊಂಡು ಬಂದಿದೆ. ಈ ಬಾರಿ ಫಿನಾಲೆ ವೀಕ್​ ಬಂದರೂ ಆರು ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈ ಕಾರಣಕ್ಕೆ ಒಬ್ಬರು ಫಿನಾಲೆ ವಾರ ಮನೆಯಿಂದ ಹೊರ ಹೋಗಲಿದ್ದಾರೆ ಎಂದು ಸುದೀಪ್​ ಹೇಳಿದ್ದರು. ಅಂತೆಯೇ ಬುಧವಾರದ ಎಪಿಸೋಡ್​ನಲ್ಲಿ ಒಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ.

ಆರೂ ಸ್ಪರ್ಧಿಗಳಿಗೆ ನಾನಾ ರೀತಿಯ ಟಾಸ್ಕ್​ ನೀಡಲಾಗಿದೆ. ಈ ಪೈಕಿ ಒಬ್ಬೊಬ್ಬರನ್ನಾಗಿಯೇ ಸೇವ್​ ಮಾಡುತ್ತಾ ಬರಲಾಗಿದೆ. ಕೊನೆಯಲ್ಲಿ ಉಳಿದ ಸ್ಪರ್ಧಿ ಎಲಿಮಿನೇಟ್​ ಆದಂತೆ. ಈ ವಾರ ಕಡಿಮೆ ವೋಟ್​ ಪಡೆದು ದಿವ್ಯಾ ಸುರೇಶ್​ ಎಲಿಮಿನೇಟ್​ ಆಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಬೇಕಿದೆ. ಇದು ನಿಜವಾದ್ದಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ ಹಾಗೂ ವೈಷ್ಣವಿ ಫಿನಾಲೆ ತಲುಪಿದಂತಾಗುತ್ತದೆ.

ಇದನ್ನೂ ಓದಿ: ಬಿಗ್​ ಬಾಸ್​ ವಿನ್ನರ್​ಗೆ ಸಿಕ್ತು 75 ಲಕ್ಷದ ಮನೆ; 16 ವರ್ಷದ ಪರಿಶ್ರಮಕ್ಕೆ ಸಿಕ್ಕ ಫಲ ಇದು

ಬಿಗ್​ ಬಾಸ್​ ಫಿನಾಲೆಯಲ್ಲಿ ಸುದೀಪ್​ ಅಕ್ಕ-ಪಕ್ಕ ನಿಲ್ಲುವ ಸ್ಪರ್ಧಿಗಳು ಇವರೇನಾ? ಸಿಕ್ತು ಮತ್ತೊಂದು ಸಾಕ್ಷಿ

Published On - 2:14 pm, Wed, 4 August 21

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ