AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೂ ಮೊದಲು ಮಿಡ್​ವೀಕ್​ ಎಲಿಮಿನೇಷನ್​; ಇಂದು ಹೊರ ಹೋಗುವ ಸ್ಪರ್ಧಿ ಇವರೇನಾ?

ಕಳೆದ ವಾರದ ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ 9 ಸದಸ್ಯರು ಇದ್ದರು. ಈ ಪೈಕಿ ಚಕ್ರವರ್ತಿ ಚಂದ್ರಚೂಡ್​ ವಾರದ ಮಧ್ಯದಲ್ಲಿ ಎಲಿಮಿನೇಟ್​ ಆದರು. ಕಳೆದ ವಾರಾಂತ್ಯದಲ್ಲಿ ಶುಭಾ ಪೂಂಜಾ ಹಾಗೂ ಶಮಂತ್​ ಬ್ರೋ ಗೌಡ ಎಲಿಮಿನೇಟ್​ ಆಗಿದ್ದಾರೆ.

ಬಿಗ್​ ಬಾಸ್​ ಫಿನಾಲೆಗೂ ಮೊದಲು ಮಿಡ್​ವೀಕ್​ ಎಲಿಮಿನೇಷನ್​; ಇಂದು ಹೊರ ಹೋಗುವ ಸ್ಪರ್ಧಿ ಇವರೇನಾ?
ಬಿಗ್​ ಬಾಸ್​ ಕನ್ನಡ
TV9 Web
| Edited By: |

Updated on:Aug 04, 2021 | 2:21 PM

Share

ಬಿಗ್​ ಬಾಸ್​ ಫಿನಾಲೆಗೆ ಇನ್ನು ಬೆರಳೆಣಿಕೆ ದಿನಗಳು ಮಾತ್ರ ಬಾಕಿ ಇವೆ. ಅದಕ್ಕೂ ಮೊದಲು ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ ನಡೆಯುತ್ತಿದೆ. ಆರು ಸ್ಪರ್ಧಿಗಳ ಪೈಕಿ ಒಬ್ಬರು ಎಲಿಮಿನೇಟ್​ ಆಗುತ್ತಿದ್ದು, ಐವರು ಫಿನಾಲೆ ತಲುಪುತ್ತಿದ್ದಾರೆ. ಹಾಗಾದರೆ, ಫಿನಾಲೆ ತಲುಪುವ ಸ್ಪರ್ಧಿಗಳು ಯಾರು? ಇಂದು ನಡೆಯುವ ಎಲಿಮಿನೇಷನ್​ನಲ್ಲಿ ಹೊರ ಹೋಗುವವರು ಯಾರು ಎನ್ನುವುದು ಸದ್ಯದ ಕುತೂಹಲ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​ ಹಾಗೂ ವೈಷ್ಣವಿ ಇದ್ದಾರೆ. ಫಿನಾಲೆ ವೀಕ್​ ಆದ್ದರಿಂದ ಎಲಿಮಿನೇಷನ್​ಗೆ ಎಲ್ಲರೂ ನಾಮಿನೇಟ್​​ ಆಗಿದ್ದಾರೆ. ಅಂದಹಾಗೆ, ಈ ವಾರದ ಮಧ್ಯದಲ್ಲಿ (ಬುಧವಾರ) ಒಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ.

ಕಳೆದ ವಾರದ ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ 9 ಸದಸ್ಯರು ಇದ್ದರು. ಈ ಪೈಕಿ ಚಕ್ರವರ್ತಿ ಚಂದ್ರಚೂಡ್​ ವಾರದ ಮಧ್ಯದಲ್ಲಿ ಎಲಿಮಿನೇಟ್​ ಆದರು. ಕಳೆದ ವಾರಾಂತ್ಯದಲ್ಲಿ ಶುಭಾ ಪೂಂಜಾ ಹಾಗೂ ಶಮಂತ್​ ಬ್ರೋ ಗೌಡ ಎಲಿಮಿನೇಟ್​ ಆಗಿದ್ದಾರೆ.

ಫಿನಾಲೆಯಲ್ಲಿ ಉಳಿದುಕೊಳ್ಳೋದು ಐದು ಸ್ಪರ್ಧಿಗಳು. ಪ್ರತಿ ವರ್ಷವೂ ಇದೇ ಸಂಪ್ರದಾಯ ನಡೆದುಕೊಂಡು ಬಂದಿದೆ. ಈ ಬಾರಿ ಫಿನಾಲೆ ವೀಕ್​ ಬಂದರೂ ಆರು ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈ ಕಾರಣಕ್ಕೆ ಒಬ್ಬರು ಫಿನಾಲೆ ವಾರ ಮನೆಯಿಂದ ಹೊರ ಹೋಗಲಿದ್ದಾರೆ ಎಂದು ಸುದೀಪ್​ ಹೇಳಿದ್ದರು. ಅಂತೆಯೇ ಬುಧವಾರದ ಎಪಿಸೋಡ್​ನಲ್ಲಿ ಒಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ.

ಆರೂ ಸ್ಪರ್ಧಿಗಳಿಗೆ ನಾನಾ ರೀತಿಯ ಟಾಸ್ಕ್​ ನೀಡಲಾಗಿದೆ. ಈ ಪೈಕಿ ಒಬ್ಬೊಬ್ಬರನ್ನಾಗಿಯೇ ಸೇವ್​ ಮಾಡುತ್ತಾ ಬರಲಾಗಿದೆ. ಕೊನೆಯಲ್ಲಿ ಉಳಿದ ಸ್ಪರ್ಧಿ ಎಲಿಮಿನೇಟ್​ ಆದಂತೆ. ಈ ವಾರ ಕಡಿಮೆ ವೋಟ್​ ಪಡೆದು ದಿವ್ಯಾ ಸುರೇಶ್​ ಎಲಿಮಿನೇಟ್​ ಆಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಬೇಕಿದೆ. ಇದು ನಿಜವಾದ್ದಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ ಹಾಗೂ ವೈಷ್ಣವಿ ಫಿನಾಲೆ ತಲುಪಿದಂತಾಗುತ್ತದೆ.

ಇದನ್ನೂ ಓದಿ: ಬಿಗ್​ ಬಾಸ್​ ವಿನ್ನರ್​ಗೆ ಸಿಕ್ತು 75 ಲಕ್ಷದ ಮನೆ; 16 ವರ್ಷದ ಪರಿಶ್ರಮಕ್ಕೆ ಸಿಕ್ಕ ಫಲ ಇದು

ಬಿಗ್​ ಬಾಸ್​ ಫಿನಾಲೆಯಲ್ಲಿ ಸುದೀಪ್​ ಅಕ್ಕ-ಪಕ್ಕ ನಿಲ್ಲುವ ಸ್ಪರ್ಧಿಗಳು ಇವರೇನಾ? ಸಿಕ್ತು ಮತ್ತೊಂದು ಸಾಕ್ಷಿ

Published On - 2:14 pm, Wed, 4 August 21

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್