ದಿವ್ಯಾ ಉರುಡುಗ-ಅರವಿಂದ್ ಒಡನಾಟದಿಂದ ಮನೆಯವರಿಗೆ ಕಿರಿಕಿರಿ; ಎಲ್ಲರೆದುರು ಅಸಮಾಧಾನ ಹೊರಹಾಕಿದ ಶುಭಾ

Divya Uruduga - Aravind KP: ದಿವ್ಯಾ ಉರುಡುಗ ಹಾಗೂ ಅರವಿಂದ್ ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಕ್ಲೋಸ್​ ಆಗಿದ್ದಾರೆ. ದೊಡ್ಮನೆಯಲ್ಲಿ ಸಮಯ ಸಿಕ್ಕಾಗೆಲ್ಲ ಅವರು ಒಟ್ಟಿಗೆ ಇರುತ್ತಾರೆ. ಈ ಮಧ್ಯೆ ಅರವಿಂದ್-ದಿವ್ಯಾ ಒಡನಾಟ ಉಳಿದವರಿಗೆ ಕಿರಿಕಿರಿ ತಂದಿಡುತ್ತಿದೆ. ಇದನ್ನು ಶುಭಾ ಹೇಳಿಕೊಂಡಿದ್ದಾರೆ.

ದಿವ್ಯಾ ಉರುಡುಗ-ಅರವಿಂದ್ ಒಡನಾಟದಿಂದ ಮನೆಯವರಿಗೆ ಕಿರಿಕಿರಿ; ಎಲ್ಲರೆದುರು ಅಸಮಾಧಾನ ಹೊರಹಾಕಿದ ಶುಭಾ
ದಿವ್ಯಾ ಉರುಡುಗ
Follow us
| Updated By: Digi Tech Desk

Updated on:Jul 29, 2021 | 9:18 AM

ಕನ್ನಡ ಬಿಗ್​ ಬಾಸ್ ಸೀಸನ್​ 8 ಆರಂಭವಾದ ಕೆಲವೇ ವಾರಗಳಲ್ಲಿ ಅರವಿಂದ್ ಕೆ.ಪಿ ಹಾಗೂ ದಿವ್ಯಾ ಉರುಡುಗ ಕ್ಲೋಸ್ ಆಗಿದ್ದರು. ಅವರ ನಡುವೆ ಪ್ರೀತಿ ಇರೋದು ಸ್ಪಷ್ಟವಾಗಿದೆ. ಈ ಮಧ್ಯೆ ಅವರ ಒಡನಾಟದಿಂದ ಮನೆಯವರಿಗೆ ಸಾಕಷ್ಟು ಕಿರಿಕಿರಿ ಉಂಟಾಗುತ್ತಿದೆ. ಇದನ್ನು ಶುಭಾ ಪೂಂಜಾ ಓಪನ್​ ಆಗಿಯೇ ಹೇಳಿಕೊಂಡಿದ್ದಾರೆ.

ದಿವ್ಯಾ ಉರುಡುಗ ಹಾಗೂ ಅರವಿಂದ್ ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಕ್ಲೋಸ್​ ಆಗಿದ್ದಾರೆ. ದೊಡ್ಮನೆಯಲ್ಲಿ ಸಮಯ ಸಿಕ್ಕಾಗೆಲ್ಲ ಅವರು ಒಟ್ಟಿಗೆ ಇರುತ್ತಾರೆ. ಅರವಿಂದ್ ಮಾತನ್ನು ದಿವ್ಯಾ ಹೆಚ್ಚು ಕೇಳುತ್ತಾರೆ. ಅವರನ್ನು ಕಂಡರೆ ದಿವ್ಯಾಗೆ ಭಯ ಎನ್ನುವ ಮಾತು ಬಿಗ್​ ಬಾಸ್​ ಮನೆಯಲ್ಲಿ ಚಾಲ್ತಿಯಲ್ಲಿದೆ. ಈ ಮಧ್ಯೆ ಅರವಿಂದ್-ದಿವ್ಯಾ ಒಡನಾಟ ಉಳಿದವರಿಗೆ ಕಿರಿಕಿರಿ ತಂದಿಡುತ್ತಿದೆ. ಇದನ್ನು ಶುಭಾ ಹೇಳಿಕೊಂಡಿದ್ದಾರೆ.

ರಾತ್ರಿ ಲೈಟ್​ ಆಫ್​ ಆದ ನಂತರದಲ್ಲಿ ಎಲ್ಲರೂ ನಿದ್ರಿಸಬೇಕು. ಆದರೆ, ದಿವ್ಯಾ ಉರುಡುಗ  ಆ ರೀತಿ ಮಾಡುತ್ತಿಲ್ಲ. ಅರವಿಂದ್ ಬಳಿ ತೆರಳುವ ಅವರು ಸಣ್ಣ ಧ್ವನಿಯಲ್ಲಿ ಮಾತನಾಡುತ್ತಾರೆ. ಮನೆಯಲ್ಲಿ ಶಾಂತತೆ ಇರುವುದರಿಂದ ಅದು ದೊಡ್ಡದಾಗಿ ಕೇಳುತ್ತದೆ. ಇದು ಶುಭಾ ಹಾಗೂ ಪ್ರಶಾಂತ್​ ಸಂಬರಗಿಗೆ ಕಿರಿಕಿರಿ ತಂದಿದೆ. ಈ ಬಗ್ಗೆ ಅವರು ಓಪನ್​ ಆಗಿಯೇ ದೂರಿದ್ದಾರೆ.

‘ಅರವಿಂದ್​ ಗೊರಕೆ ಹೊಡೆಯುತ್ತಿರುತ್ತಾರೆ. ಆಗ ದಿವ್ಯಾ ಬಂದು ಅವರನ್ನು ಕರೆದು ಕರೆದು ಎಬ್ಬಿಸುತ್ತಾರೆ’ ಎಂದು ಪ್ರಶಾಂತ್​ ದೂರಿದರು. ಇದಕ್ಕೆ ಶುಭಾ ಧ್ವನಿಗೂಡಿಸಿದರು. ‘ಅರವಿಂದ್ ಸಣ್ಣದಾಗಿ ಮಾತನಾಡುತ್ತಾನೆ. ಅದು ಅಷ್ಟಾಗಿ ಕೇಳೋದಿಲ್ಲ. ಆದರೆ, ನೀನು ಪಿಸುಗುಡೋದು ದೊಡ್ಡದಾಗಿ ಕೇಳುತ್ತದೆ’ ಎಂದು ದಿವ್ಯಾಗೆ ಹೇಳಿದರು ಶುಭಾ.

‘ರಾತ್ರಿ ನಿದ್ದೆ ಬರೋ ಟೈಮ್​ನಲ್ಲಿ ಆ ರೀತಿ ಮಾತನಾಡಿದರೆ ನಿಜವಾಗಿಯೂ ಹಿಂಸೆ ಎನಿಸುತ್ತದೆ. ನಿತ್ಯ ಅಷ್ಟೊತ್ತು ಮಾತನಾಡಿರುತ್ತೀರಿ. ಹಾಗಿದ್ರೂ ರಾತ್ರಿ ಮತ್ತೇಕೆ ಮಾತನಾಡಬೇಕು?’ ಎಂದು ಶುಭಾ ಪ್ರಶ್ನೆ ಮಾಡಿದರು. ದಿವ್ಯಾ ಇನ್ನು ಆ ರೀತಿ ಆಗುವುದಿಲ್ಲ ಎಂದು ಭರವಸೆ ನೀಡಿದರು.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದಾರೆ. ಈ ಪೈಕಿ ದಿವ್ಯಾ ಉರುಡುಗ ಕ್ಯಾಪ್ಟನ್​ ಆಗಿ ನಾಮಿನೇಷನ್​ನಿಂದ ಬಚಾವ್​ ಆಗಿದ್ದಾರೆ. ಉಳಿದಂತೆ ಏಳು ಜನರು ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಿಂದ ಒಂದೇ ವಾರದಲ್ಲಿ ಎಲಿಮಿನೇಟ್​ ಆಗಲಿದ್ದಾರೆ ಮೂರು ಸ್ಪರ್ಧಿಗಳು?

ಬಿಗ್​ ಬಾಸ್​ ಮನೆಯಿಂದ ಕಾಣೆಯಾದ ಶುಭಾ ಪೂಂಜಾ; ಸ್ಪರ್ಧಿಗಳಿಗೆ ಮಿಡ್​ವೀಕ್​ ಟ್ವಿಸ್ಟ್​

Published On - 7:24 am, Thu, 29 July 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ