AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೊಮ್ಯಾಂಟಿಕ್​ ಡ್ಯಾನ್ಸ್​ ಮಾಡಿದ ದಿವ್ಯಾ ಉರುಡುಗ ಮತ್ತು ಅರವಿಂದ್ ಕೆ.ಪಿ.​; ಇಲ್ಲಿದೆ ವಿಡಿಯೋ

ಬಿಗ್​ ಬಾಸ್​ ಮುಗಿದ ನಂತರ ಅರವಿಂದ್​ ಹಾಗೂ ದಿವ್ಯಾ ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಯಾವುದೇ ವಾಹಿನಿಗೆ ಅವರು ಒಟ್ಟಾಗಿ ಸಂದರ್ಶನ ನೀಡಿಲ್ಲ. ಈಗ ಇವರು ಕಲರ್ಸ್​ ಕನ್ನಡ ವೇದಿಕೆಯನ್ನು ಒಟ್ಟಾಗಿ ಏರಿದ್ದಾರೆ.

ರೊಮ್ಯಾಂಟಿಕ್​ ಡ್ಯಾನ್ಸ್​ ಮಾಡಿದ ದಿವ್ಯಾ ಉರುಡುಗ ಮತ್ತು ಅರವಿಂದ್ ಕೆ.ಪಿ.​; ಇಲ್ಲಿದೆ ವಿಡಿಯೋ
ದಿವ್ಯಾ-ಅರವಿಂದ್​ ಕೆಪಿ
TV9 Web
| Edited By: |

Updated on: Oct 13, 2021 | 4:16 PM

Share

ಅರವಿಂದ್​ ಕೆ.ಪಿ. ಮತ್ತು ದಿವ್ಯಾ ಉರುಡುಗ ಈಗ ಸೆಲೆಬ್ರಿಟಿ ಕಪಲ್​ ಆಗಿದ್ದಾರೆ. ಇವರ ಬಗ್ಗೆ ಬರುವ ಅಪ್​ಡೇಟ್​ ತಿಳಿದುಕೊಳ್ಳೋಕೆ ಅಭಿಮಾನಿಗಳು ಕಾತುರರಾಗಿರುತ್ತಾರೆ. ಈ ಕಾರಣಕ್ಕೆ ಅವರ ಸೋಶಿಯಲ್​ ಮೀಡಿಯಾ ಹಿಂಬಾಲಕರ ಸಂಖ್ಯೆ ಹೆಚ್ಚಿದೆ. ಇವರನ್ನು ಅಭಿಮಾನಿಗಳು ಪ್ರೀತಿಯಿಂದ ಅರವಿಯಾ ಎಂದು ಕರೆಯುತ್ತಿದ್ದಾರೆ. ಈಗ ಇಬ್ಬರೂ ರೊಮ್ಯಾಂಟಿಕ್​ ಡ್ಯಾನ್ಸ್​ ಮಾಡಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಬಿಗ್​ ಬಾಸ್​ ಮುಗಿದ ನಂತರ ಅರವಿಂದ್​ ಹಾಗೂ ದಿವ್ಯಾ ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಯಾವುದೇ ವಾಹಿನಿಗೆ ಅವರು ಒಟ್ಟಾಗಿ ಸಂದರ್ಶನ ನೀಡಿಲ್ಲ. ಈಗ ಇವರು ಕಲರ್ಸ್​ ಕನ್ನಡ ವೇದಿಕೆಯನ್ನು ಒಟ್ಟಾಗಿ ಏರಿದ್ದಾರೆ. ಅಲ್ಲಿ ಅದ್ಭುತವಾಗಿ ಅವರು ಡ್ಯಾನ್ಸ್​ ಮಾಡಿದ್ದಾರೆ. ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

‘ಅನುಬಂಧ’ ಅವಾರ್ಡ್ಸ್​ ಕಾರ್ಯಕ್ರಮ ಅಕ್ಟೋಬರ್ 15,16 ಮತ್ತು 17ರಂದು ಪ್ರಸಾರವಾಗಲಿದೆ. ಕಲರ್ಸ್​ ಕುಟುಂಬದ ಎಲ್ಲರೂ ಇದರಲ್ಲಿ ಭಾಗಿಯಾಗುತ್ತಿದ್ದಾರೆ. ಅರವಿಂದ್ ಹಾಗೂ ದಿವ್ಯಾ ಬಿಗ್​ ಬಾಸ್​ ಸೀಸನ್​ 8ರಲ್ಲಿ ಸ್ಪರ್ಧಿಯಾಗಿ ತೆರಳುವ ಮೂಲಕ ಕಲರ್ಸ್ ಕನ್ನಡದ ಭಾಗವಾಗಿದ್ದಾರೆ. ಹೀಗಾಗಿ, ಇವರು ಕೂಡ ಕಲರ್ಸ್​ ವಾಹಿನಿಯ ಅನುಬಂಧ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

r

ಈ ಬಾರಿಯ ಅನುಬಂಧವನ್ನು ಅದ್ದೂರಿಯಾಗಿ ನಡೆಸಲಾಗಿದೆ. ಈಗಾಗಲೇ ಇದರ ಶೂಟಿಂಗ್​ ಪೂರ್ಣಗೊಂಡಿದೆ. ಅರವಿಂದ್ ಮತ್ತು ದಿವ್ಯಾ ಇಬ್ಬರೂ ‘ಯಾರೋ ನೀನು..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಅರವಿಂದ್ ಅವರು ವೇದಿಕೆಗೆ ತಮ್ಮ ಬೈಕ್​ ಮೇಲೆಯೇ ಬಂದಿದ್ದು ವಿಶೇಷವಾಗಿತ್ತು. ಇವರ ಡ್ಯಾನ್ಸ್​ ಪೂರ್ತಿಯಾಗಿ ನೋಡೋಕೆ ಅನುಬಂಧ ಕಾರ್ಯಕ್ರಮ ಪ್ರಸಾರವಾಗುವವರೆಗೆ ಕಾಯಬೇಕಿದೆ. ಇತ್ತೀಚೆಗೆ ಕಲರ್ಸ್​ ಕನ್ನಡ ವಾಹಿನಿ ‘ಅನುಬಂಧ’  ಮೇಕಿಂಗ್​ ವಿಡಿಯೋ ಪ್ರಸಾರ ಮಾಡಿತ್ತು. ಈ ವಿಡಿಯೋದಲ್ಲಿ ಅರವಿಂದ್ ಕೆ.ಪಿ. ವೇದಿಕೆ ಮೇಲೆ ಬೈಕ್​ನಲ್ಲಿಯೇ ಆಗಮಿಸುವುದಾಗಿ ತಿಳಿಸಿದ್ದರು.

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಫಿನಾಲೆ ಆಗಸ್ಟ್ 8ರಂದು ನಡೆದಿತ್ತು. ಮಂಜು ಪಾವಗಡ ಈ ಸೀಸನ್​ ವಿನ್ನರ್​ ಆಗಿ ಹೊರಹೊಮ್ಮಿದರು. ಅರವಿಂದ್ ಅವರು ಮೊದಲ ರನ್ನರ್​ ಅಪ್​ ಹಾಗೂ ದಿವ್ಯಾ ಉರುಡುಗ ಸೆಕೆಂಡ್​ ರನ್ನರ್​ ಅಪ್​ ಆಗಿದ್ದರು.

ಇದನ್ನೂ ಓದಿ: ‘ಮದುವೆ ಯಾವಾಗ’ ಎನ್ನುವ ಪ್ರಶ್ನೆಗೆ ದಿವ್ಯಾ ಉರುಡುಗ ಪಕ್ಕದಲ್ಲೇ ನಿಂತು ಉತ್ತರಿಸಿದ ಅರವಿಂದ್​ ಕೆಪಿ

ನನ್ನ ಮದುವೆ ಆಗಿಹೋಗಿದೆ ಅಂತ ಎಲ್ಲರೂ ಹೇಳ್ತಾ ಇದಾರೆ ಎಂದ ಅರವಿಂದ್​ ಕೆಪಿ; ದಿವ್ಯಾ ರಿಯಾಕ್ಷನ್​ ಹೇಗಿತ್ತು?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ