AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೊಮ್ಯಾಂಟಿಕ್​ ಡ್ಯಾನ್ಸ್​ ಮಾಡಿದ ದಿವ್ಯಾ ಉರುಡುಗ ಮತ್ತು ಅರವಿಂದ್ ಕೆ.ಪಿ.​; ಇಲ್ಲಿದೆ ವಿಡಿಯೋ

ಬಿಗ್​ ಬಾಸ್​ ಮುಗಿದ ನಂತರ ಅರವಿಂದ್​ ಹಾಗೂ ದಿವ್ಯಾ ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಯಾವುದೇ ವಾಹಿನಿಗೆ ಅವರು ಒಟ್ಟಾಗಿ ಸಂದರ್ಶನ ನೀಡಿಲ್ಲ. ಈಗ ಇವರು ಕಲರ್ಸ್​ ಕನ್ನಡ ವೇದಿಕೆಯನ್ನು ಒಟ್ಟಾಗಿ ಏರಿದ್ದಾರೆ.

ರೊಮ್ಯಾಂಟಿಕ್​ ಡ್ಯಾನ್ಸ್​ ಮಾಡಿದ ದಿವ್ಯಾ ಉರುಡುಗ ಮತ್ತು ಅರವಿಂದ್ ಕೆ.ಪಿ.​; ಇಲ್ಲಿದೆ ವಿಡಿಯೋ
ದಿವ್ಯಾ-ಅರವಿಂದ್​ ಕೆಪಿ
TV9 Web
| Edited By: |

Updated on: Oct 13, 2021 | 4:16 PM

Share

ಅರವಿಂದ್​ ಕೆ.ಪಿ. ಮತ್ತು ದಿವ್ಯಾ ಉರುಡುಗ ಈಗ ಸೆಲೆಬ್ರಿಟಿ ಕಪಲ್​ ಆಗಿದ್ದಾರೆ. ಇವರ ಬಗ್ಗೆ ಬರುವ ಅಪ್​ಡೇಟ್​ ತಿಳಿದುಕೊಳ್ಳೋಕೆ ಅಭಿಮಾನಿಗಳು ಕಾತುರರಾಗಿರುತ್ತಾರೆ. ಈ ಕಾರಣಕ್ಕೆ ಅವರ ಸೋಶಿಯಲ್​ ಮೀಡಿಯಾ ಹಿಂಬಾಲಕರ ಸಂಖ್ಯೆ ಹೆಚ್ಚಿದೆ. ಇವರನ್ನು ಅಭಿಮಾನಿಗಳು ಪ್ರೀತಿಯಿಂದ ಅರವಿಯಾ ಎಂದು ಕರೆಯುತ್ತಿದ್ದಾರೆ. ಈಗ ಇಬ್ಬರೂ ರೊಮ್ಯಾಂಟಿಕ್​ ಡ್ಯಾನ್ಸ್​ ಮಾಡಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಬಿಗ್​ ಬಾಸ್​ ಮುಗಿದ ನಂತರ ಅರವಿಂದ್​ ಹಾಗೂ ದಿವ್ಯಾ ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಯಾವುದೇ ವಾಹಿನಿಗೆ ಅವರು ಒಟ್ಟಾಗಿ ಸಂದರ್ಶನ ನೀಡಿಲ್ಲ. ಈಗ ಇವರು ಕಲರ್ಸ್​ ಕನ್ನಡ ವೇದಿಕೆಯನ್ನು ಒಟ್ಟಾಗಿ ಏರಿದ್ದಾರೆ. ಅಲ್ಲಿ ಅದ್ಭುತವಾಗಿ ಅವರು ಡ್ಯಾನ್ಸ್​ ಮಾಡಿದ್ದಾರೆ. ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

‘ಅನುಬಂಧ’ ಅವಾರ್ಡ್ಸ್​ ಕಾರ್ಯಕ್ರಮ ಅಕ್ಟೋಬರ್ 15,16 ಮತ್ತು 17ರಂದು ಪ್ರಸಾರವಾಗಲಿದೆ. ಕಲರ್ಸ್​ ಕುಟುಂಬದ ಎಲ್ಲರೂ ಇದರಲ್ಲಿ ಭಾಗಿಯಾಗುತ್ತಿದ್ದಾರೆ. ಅರವಿಂದ್ ಹಾಗೂ ದಿವ್ಯಾ ಬಿಗ್​ ಬಾಸ್​ ಸೀಸನ್​ 8ರಲ್ಲಿ ಸ್ಪರ್ಧಿಯಾಗಿ ತೆರಳುವ ಮೂಲಕ ಕಲರ್ಸ್ ಕನ್ನಡದ ಭಾಗವಾಗಿದ್ದಾರೆ. ಹೀಗಾಗಿ, ಇವರು ಕೂಡ ಕಲರ್ಸ್​ ವಾಹಿನಿಯ ಅನುಬಂಧ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

r

ಈ ಬಾರಿಯ ಅನುಬಂಧವನ್ನು ಅದ್ದೂರಿಯಾಗಿ ನಡೆಸಲಾಗಿದೆ. ಈಗಾಗಲೇ ಇದರ ಶೂಟಿಂಗ್​ ಪೂರ್ಣಗೊಂಡಿದೆ. ಅರವಿಂದ್ ಮತ್ತು ದಿವ್ಯಾ ಇಬ್ಬರೂ ‘ಯಾರೋ ನೀನು..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಅರವಿಂದ್ ಅವರು ವೇದಿಕೆಗೆ ತಮ್ಮ ಬೈಕ್​ ಮೇಲೆಯೇ ಬಂದಿದ್ದು ವಿಶೇಷವಾಗಿತ್ತು. ಇವರ ಡ್ಯಾನ್ಸ್​ ಪೂರ್ತಿಯಾಗಿ ನೋಡೋಕೆ ಅನುಬಂಧ ಕಾರ್ಯಕ್ರಮ ಪ್ರಸಾರವಾಗುವವರೆಗೆ ಕಾಯಬೇಕಿದೆ. ಇತ್ತೀಚೆಗೆ ಕಲರ್ಸ್​ ಕನ್ನಡ ವಾಹಿನಿ ‘ಅನುಬಂಧ’  ಮೇಕಿಂಗ್​ ವಿಡಿಯೋ ಪ್ರಸಾರ ಮಾಡಿತ್ತು. ಈ ವಿಡಿಯೋದಲ್ಲಿ ಅರವಿಂದ್ ಕೆ.ಪಿ. ವೇದಿಕೆ ಮೇಲೆ ಬೈಕ್​ನಲ್ಲಿಯೇ ಆಗಮಿಸುವುದಾಗಿ ತಿಳಿಸಿದ್ದರು.

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಫಿನಾಲೆ ಆಗಸ್ಟ್ 8ರಂದು ನಡೆದಿತ್ತು. ಮಂಜು ಪಾವಗಡ ಈ ಸೀಸನ್​ ವಿನ್ನರ್​ ಆಗಿ ಹೊರಹೊಮ್ಮಿದರು. ಅರವಿಂದ್ ಅವರು ಮೊದಲ ರನ್ನರ್​ ಅಪ್​ ಹಾಗೂ ದಿವ್ಯಾ ಉರುಡುಗ ಸೆಕೆಂಡ್​ ರನ್ನರ್​ ಅಪ್​ ಆಗಿದ್ದರು.

ಇದನ್ನೂ ಓದಿ: ‘ಮದುವೆ ಯಾವಾಗ’ ಎನ್ನುವ ಪ್ರಶ್ನೆಗೆ ದಿವ್ಯಾ ಉರುಡುಗ ಪಕ್ಕದಲ್ಲೇ ನಿಂತು ಉತ್ತರಿಸಿದ ಅರವಿಂದ್​ ಕೆಪಿ

ನನ್ನ ಮದುವೆ ಆಗಿಹೋಗಿದೆ ಅಂತ ಎಲ್ಲರೂ ಹೇಳ್ತಾ ಇದಾರೆ ಎಂದ ಅರವಿಂದ್​ ಕೆಪಿ; ದಿವ್ಯಾ ರಿಯಾಕ್ಷನ್​ ಹೇಗಿತ್ತು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್