AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್​-ದಿವ್ಯಾ ಉರುಡುಗ ಸಂಬಂಧದಲ್ಲಿ ಬಿರುಕು; ಇದು ಯಾರೂ ನಿರೀಕ್ಷಿಸದ ಸಂಗತಿ

100 ದಿನಗಳನ್ನು ಪೂರೈಸಿರುವ ಬಿಗ್​ ಬಾಸ್ ಈಗ ಫಿನಾಲೆಯತ್ತ ಮುನ್ನುಗ್ಗುತ್ತಿದೆ. ಆದ್ದರಿಂದ ಸ್ಪರ್ಧಿಗಳ ನಡುವೆ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆಪಿ ನಡುವೆ ಮನಸ್ತಾಪ ಮೂಡಿದೆ.

ಅರವಿಂದ್​-ದಿವ್ಯಾ ಉರುಡುಗ ಸಂಬಂಧದಲ್ಲಿ ಬಿರುಕು; ಇದು ಯಾರೂ ನಿರೀಕ್ಷಿಸದ ಸಂಗತಿ
ದಿವ್ಯಾ ಉರುಡುಗ
TV9 Web
| Edited By: |

Updated on: Jul 22, 2021 | 2:21 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ (Bigg Boss Kannada 8) ಆರಂಭ ಆದಾಗಿನಿಂದಲೂ ದಿವ್ಯಾ ಉರುಡುಗ  (Divya Uruduga) ಮತ್ತು ಅರವಿಂದ್​ ಕೆಪಿ (, Aravind KP) ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಇಬ್ಬರ ನಡುವೆ ಒಂದು ಆತ್ಮೀಯತೆ ಬೆಳೆದಿತ್ತು. ಸದಾ ಕಾಲ ಇಬ್ಬರೂ ಜೊತೆಯಾಗಿ ಇರುತ್ತಿದ್ದರು. ಅದನ್ನು ಕಂಡು ವೀಕ್ಷಕರು ಕೂಡ ಇಷ್ಟಪಟ್ಟಿದ್ದರು. ಬೆಸ್ಟ್​ ಕಪಲ್​ ಎಂದೆಲ್ಲ ಕಮೆಂಟ್​ಗಳನ್ನು ಮಾಡಲಾಗುತ್ತಿತ್ತು. ಅಷ್ಟೇ ಅಲ್ಲ, ದಿವ್ಯಾ ಉರುಡುಗ ಮತ್ತು ಅರವಿಂದ್​ ನಿಜಜೀವನದಲ್ಲಿ ಮದುವೆಯಾದರೆ ಚೆನ್ನಾಗಿರುತ್ತದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಆದರೆ ಈಗ ಎಲ್ಲವೂ ತಲೆಕೆಳಗಾದಂತೆ ಕಾಣುತ್ತಿದೆ.

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನಲ್ಲಿ ವಿವಿಧ ಬಗೆಯ ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಇತ್ತೀಚೆಗೆ ‘ನೀನಾ ನಾನಾ’ ಎಂಬ ಟಾಸ್ಕ್​ ನೀಡಲಾಗಿತ್ತು. ಅದರ ಜೊತೆ ಕೊಡಲಾದ ಇನ್ನೊಂದು ಟಾಸ್ಕ್​ನಲ್ಲಿ ಮೊದಲು ಯಾರು ಗ್ಲೌಸ್​ ಹಾಕಿಕೊಳ್ಳುತ್ತಾರೋ ಅವರಿಗೆ ಸ್ಪರ್ಧಿಸುವ ಅವಕಾಶ ಸಿಗುತ್ತದೆ. ಇತರೆ ಸ್ಪರ್ಧಿಗಳು ಗ್ಲೌಸ್​ ಹತ್ತಿರ ನಿಂತುಕೊಂಡಾಗ ಅದನ್ನು ಫೌಲ್​ ಎಂದು ದಿವ್ಯಾ ಉರುಡುಗ ಹೇಳುತ್ತಿದ್ದರು. ಆದರೆ ನಂತರದಲ್ಲಿ ಸ್ವತಃ ದಿವ್ಯಾ ಗ್ಲೌಸ್​ ಬಳಿ ಹೋಗಿ ನಿಂತುಕೊಳ್ಳಲು ಆರಂಭಿಸಿದರು. ಅದನ್ನು ಅರವಿಂದ್​ ವಿರೋಧಿಸಿದರು.

ಈ ಘಟನೆ ನಡೆದ ಬಳಿಕ ಅರವಿಂದ್​ ಮತ್ತು ದಿವ್ಯಾ ಉರುಡುಗ ನಡುವೆ ವೈಮನಸ್ಸು ಉಂಟಾಗಿದೆ. ಅದೇ ರಾತ್ರಿ ಅರವಿಂದ್​ ಬಳಿಗೆ ತೆರಳಿದ ದಿವ್ಯಾ ಅವರು ಮಾತನಾಡಿಸಲು ಪ್ರಯತ್ನಿಸಿದರು. ಆದರೆ ಮಾತನಾಡುವ ಮನಸ್ಸಿಲ್ಲ ಎಂದು ಅರವಿಂದ್​ ಅಂತರ ಕಾಯ್ದುಕೊಂಡರು. ಈ ಕಿಚ್ಚು ನಿಧಾನವಾಗಿ ಇಬ್ಬರ ಮನಸ್ಸಿನಲ್ಲೂ ವ್ಯಾಪಿಸಿದೆ. ಇಷ್ಟು ದಿನಗಳ ಕಾಲ ಖುಷಿಖುಷಿಯಾಗಿ ಮಾತನಾಡಿಕೊಳ್ಳುತ್ತಿದ್ದ ಈ ಜೋಡಿ ಈಗ ಹೀಗೆ ಕಿತ್ತಾಡಿಕೊಳ್ಳುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ.

ವೈಯಕ್ತಿಕವಾಗಿ ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆಪಿ ನಡುವೆ ಯಾವುದೇ ಮನಸ್ತಾಪ ಇಲ್ಲ. ಆದರೆ ಈ ಎಲ್ಲ ಜಟಾಪಟಿ ನಡೆದಿರುವುದು ಟಾಸ್ಕ್​ ವಿಚಾರಕ್ಕೆ. ಹಾಗಾಗಿ ಇಂದಲ್ಲ ನಾಳೆ ಅವರು ಒಂದಾಗುತ್ತಾರೆ. ಮತ್ತೆ ಹಳೇ ಆತ್ಮೀಯತೆಯೊಂದಿಗೆ ಬೆರೆಯುತ್ತಾರೆ ಎಂದು ನಿರೀಕ್ಷಿಸಲಾಗುತ್ತಿದೆ. ಈಗ ಬಿಗ್​ ಬಾಸ್​ 100 ದಿನಗಳನ್ನು ಪೂರೈಸಿ ಫಿನಾಲೆಯತ್ತ ಮುನ್ನುಗ್ಗುತ್ತಿದೆ. ಆದ್ದರಿಂದ ಸ್ಪರ್ಧಿಗಳ ನಡುವೆ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಚಕ್ರವರ್ತಿ ಚಂದ್ರಚೂಡ್​, ಅರವಿಂದ್​ ಕೆಪಿ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​, ಮಂಜು ಪಾವಗಡ, ಶುಭಾ ಪೂಂಜಾ, ವೈಷ್ಣವಿ ಗೌಡ, ಶಮಂತ್​ ಬ್ರೋ ಗೌಡ ಮತ್ತು ಪ್ರಶಾಂತ್​ ಸಂಬರಗಿ ನಡುವೆ ಸದ್ಯ ಹಣಾಹಣಿ ಮುಂದುವರಿದಿದೆ.

ಇದನ್ನೂ ಓದಿ:

BBK8 Finale: 100 ದಿನ ಪೂರೈಸಿದ ಕನ್ನಡ ಬಿಗ್​ ಬಾಸ್​ ಸೀಸನ್​ 8; ಫಿನಾಲೆ ನಡೆಯೋದು ಯಾವಾಗ?

ಬಿಗ್​ ಬಾಸ್​ ಮನೆಯಲ್ಲಿ ಮಂಜು ಇದ್ದರೂ ದಿವ್ಯಾಗೆ ಕಾಡುತ್ತಿದೆ ಏಕಾಂಗಿತನ

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!