AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​, ದಿವ್ಯಾಗೆ ಗೆಲ್ಲೋ ಚಾನ್ಸ್​ ಎಷ್ಟು?

ಐದು ಸ್ಪರ್ಧಿಗಳು ಸದ್ಯ ಫಿನಾಲೆ ತಲುಪಿದ್ದು, ಇದರಲ್ಲಿ ಒಬ್ಬರು ಗೆಲ್ಲಲಿದ್ದಾರೆ. ಬಿಗ್​ ಬಾಸ್​ ಗೆಲ್ಲುವ ಸ್ಪರ್ಧಿ ಕಪ್​ ಜತೆಗೆ 50 ಲಕ್ಷ ರೂಪಾಯಿ ಹಣವನ್ನು ಮನೆಗೆ ಕೊಂಡೊಯ್ಯಲಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​, ದಿವ್ಯಾಗೆ ಗೆಲ್ಲೋ ಚಾನ್ಸ್​ ಎಷ್ಟು?
ಪ್ರಶಾಂತ್​ ಸಂಬರಗಿ-ದಿವ್ಯಾ ಉರುಡುಗ
TV9 Web
| Edited By: |

Updated on: Aug 07, 2021 | 7:13 AM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಫಿನಾಲೆ ಇಂದು (ಆ.7) ಹಾಗೂ ನಾಳೆ (ಆ.8) ನಡೆಯುತ್ತಿದೆ. ಈ ಬಾರಿಯ ಬಿಗ್​ ಬಾಸ್​ ಸೀಸನ್​ ಯಾರು ಗೆಲ್ಲಲಿದ್ದಾರೆ ಅನ್ನೋದು ಸದ್ಯದ ಕುತೂಹಲ. ಐದು ಸ್ಪರ್ಧಿಗಳು ಸದ್ಯ ಫಿನಾಲೆ ತಲುಪಿದ್ದು, ಇದರಲ್ಲಿ ಒಬ್ಬರು ಗೆಲ್ಲಲಿದ್ದಾರೆ. ಬಿಗ್​ ಬಾಸ್​ ಗೆಲ್ಲುವ ಸ್ಪರ್ಧಿ ಕಪ್​ ಜತೆಗೆ 50 ಲಕ್ಷ ರೂಪಾಯಿ ಹಣವನ್ನು ಮನೆಗೆ ಕೊಂಡೊಯ್ಯಲಿದ್ದಾರೆ. ಫಿನಾಲೆ ಲಿಸ್ಟ್​ನಲ್ಲಿ ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗು ಕೂಡ ಇದ್ದು ಇವರು ಗೆಲ್ಲೋ ಸಾಧ್ಯತೆ ತುಂಬಾನೇ ಕಡಿಮೆ ಅನ್ನೋದು ಅಭಿಮಾನಿಗಳ ಲೆಕ್ಕಾಚಾರ.

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಸ್ಟ್ರಾಂಗ್​ ಕಂಟೆಸ್ಟೆಂಟ್​​ ಆಗಿ ಗುರುತಿಸಿಕೊಂಡಿದ್ದಾರೆ. ಮನೆಯಲ್ಲಿ ಕ್ಯಾಪ್ಟನ್​ ಆದ ಮೊದಲ ಮಹಿಳಾ ಸ್ಪರ್ಧಿ ಎಂದರೆ ಅದು ದಿವ್ಯಾ ಉರುಡುಗ. ಪ್ರತಿ ಟಾಸ್ಕ್​ ಅನ್ನು ಅವರು ಉತ್ತಮವಾಗಿ ಆಡುತ್ತಾರೆ. ಇನ್ನು, ಅರವಿಂದ್​ ಜತೆಗಿನ ಗೆಳೆತನ ಎಲ್ಲರ ಗಮನ ಸೆಳೆಯುತ್ತಿದೆ. ಈ ಎಲ್ಲಾ ಕಾರಣಕ್ಕೆ ದಿವ್ಯಾ ಫಿನಾಲೆ ತಲುಪಿದ್ದಾರೆ. ಆದರೆ, ವೈಷ್ಣವಿ, ಮಂಜು ಹಾಗೂ ಅರವಿಂದ್​ಗೆ ಕಾಂಪಿಟೇಷನ್​ ನೀಡಿ ದಿವ್ಯಾ ಉರುಡುಗ ಬಿಗ್​ ಬಾಸ್​ ಗೆಲ್ಲುವ ಸಾಧ್ಯತೆ ತುಂಬಾನೇ ಕಡಿಮೆ ಎನ್ನಲಾಗುತ್ತಿದೆ. ಹೀಗಾಗಿ, ಅವರು ಈ ಬಾರಿ ಕಪ್​ ಗೆಲ್ಲುವ ಸಾಧ್ಯತೆ ತುಂಬಾನೇ ಕಡಿಮೆ.

ಇನ್ನು ಪ್ರಶಾಂತ್​ ಸಂಬರಗಿ ಕೂಡ ಫಿನಾಲೆ ಲಿಸ್ಟ್​ನಲ್ಲಿದ್ದಾರೆ. ಇವರು ಎರಡು ಬಾರಿ ಬಿಗ್​ ಬಾಸ್​ ಎಕ್ಸಿಟ್​ ಬಾಗಿಲನ್ನು ಮುಟ್ಟಿ ಬಂದಿದ್ದಾರೆ. ಮನೆಯಲ್ಲಿ ನ್ಯಾಯದ ಪರ ಹಾಗೂ ಗುಂಪುಗಾರಿಕೆ ವಿರುದ್ಧ ತೀವ್ರವಾಗಿ ಹೋರಾಡಿದವರು ಪ್ರಶಾಂತ್​. ಸಾಕಷ್ಟು ಬಾರಿ ಅವರು ಏರು ಧ್ವನಿಯಲ್ಲಿ ಮಾತನಾಡಿದ್ದಾರೆ. ನಾಲ್ಕು ಬಾರಿ ಕಳಪೆ ಪಟ್ಟ ಪಡೆದಿದ್ದಾರೆ ಪ್ರಶಾಂತ್​. ಅಂತಿಮವಾಗಿ ಪ್ರಶಾಂತ್​ ಸಂಪೂರ್ಣವಾಗಿ ಬದಲಾಗಿದ್ದರು. ಅವರು ಎಲ್ಲರ ಜತೆ ಬೆರೆಯೋಕೆ ಪ್ರಾರಂಭಿಸಿದ್ದರು. ಇದು ಅವರಿಗೆ ಪ್ಲಸ್​ ಪಾಯಿಂಟ್​ ಆಗಿದೆ. ಆದರೆ, ಪ್ರಶಾಂತ್​ ಗೆಲ್ಲುವ ಸಾಧ್ಯತೆ ತುಂಬಾನೇ ಕಡಿಮೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ:

ಪ್ರಶಾಂತ್​ ಕಾರಿನ ಮೇಲೆ ದೈತ್ಯ ಕಲ್ಲನ್ನು ಹಾಕಿದ್ದ ದುಷ್ಕರ್ಮಿಗಳು; ಕೊಲೆ ಪ್ರಯತ್ನದ ಬಗ್ಗೆ ಬಿಗ್​ ಬಾಸ್​ನಲ್ಲಿ ಹೇಳಿಕೊಂಡ ಸಂಬರಗಿ

ಹಳೆಯ ಫೋಟೋ ವೈರಲ್​ ಪ್ರಕರಣ; ಕೋರ್ಟ್​ ಮೊರೆ ಹೋದ ಬಿಗ್​ ಬಾಸ್​ ಸ್ಪರ್ಧಿ ದಿವ್ಯಾ ಉರುಡುಗ

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!